ಆಂದೋಲನ 50

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ ದೇಶದ ನಾನಾ ಭಾಗದ ಸಿರಿವಂತರು ಇಲ್ಲಿನ ರೈತರ ಜಮೀನುಗಳನ್ನು ಖರೀದಿಸಿ ರೆಸಾರ್ಟ್‌ಗಳನ್ನು ಕಟ್ಟಿಕೊಂಡರು.

ಕಬಿನಿಗಾಗಿ ಅಂದು ನೆಲೆ ಕಳೆದುಕೊಂಡವರು, ಜಮೀನು ತ್ಯಾಗ ಮಾಡಿದ ಜನರ ಪಾಲಿಗೆ ಬದುಕು ಕಟ್ಟಿಕೊಳ್ಳಲು ಈ ರೆಸಾರ್ಟ್‌ಗಳು ನೆರವಾಗಲಿಲ್ಲ. ಅನ್ಯ ರಾಜ್ಯದ ಜನರ ದೌಲತ್ತಿನಲ್ಲಿ ಸಣ್ಣ ಪುಟ್ಟ ನೌಕರಿಯೂ ಇವರಿಗೆ ಲಭ್ಯವಾಗಲಿಲ್ಲ.

ಪ್ರವಾಸೋದ್ಯಮ ಮತ್ತು ಅದರ ವ್ಯವಸ್ಥೆಗಳು ಇಂದು ಕೇವಲ ಉನ್ನತ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ, ಜನಪ್ರತಿನಿಧಿಗಳಿಗೆ ಮೋಜು ಮಸ್ತಿಯ, ಗೂಢಾಲೋಚನೆಯ ತಾಣವಾಗಿ ಬದಲಾಗಿದೆ ಎನ್ನುವುದು ಕಣ್ಣಿಗೆ ಗೋಚರಿಸುವ ಸತ್ಯ. ಆದರೆ ಅಂದು ಪುನರ್ವಸತಿ ಹೆಸರಿನಲ್ಲಿ ಎತ್ತಂಗಡಿಯಾದ ಗ್ರಾಮಗಳು ೫೦ ವರ್ಷಗಳ ಬಳಿಕವೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಶಿಕ್ಷಣ, ಆರೋಗ್ಯ, ನೀರು, ಸಾರಿಗೆ ಸಂಪರ್ಕ ಇನ್ನೂ ದೂರಾದ ಮಾತಾಗಿದೆ. ಇಲ್ಲಿಂದ ಸರಕಾರದ ಖಜಾನೆ ಸೇರುವ ಹಣದಲ್ಲಿ ಒಂದಿಷ್ಟು ಭಾಗ ಇಲ್ಲಿನವರ ಅಭಿವೃದ್ಧಿಗೆ ಪೂರಕವಾಗಿ ಖರ್ಚು ಮಾಡಿದರೆ ಅಂದಿನ ತ್ಯಾಗಕ್ಕೂ ಫಲ ಸಿಕ್ಕಂತಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಸರಕಾರದ ಮೇಲೆ, ಅರಣ್ಯ ಇಲಾಖೆಯ ಮೇಲೆ ವಿಶ್ವಾಸ ಮೂಡಿಸಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಕಬಿನಿ ಜಲಾಶಯದ ನಿರ್ಮಾಣದ ಹಂತದಲ್ಲಿ ಮುಳುಗಡೆಗೊಂಡ ೧೦-೧೨ ಗ್ರಾಮಗಳಿಗೆ ಪುನರ್ವಸತಿ ನೀಡಲಾಗಿದೆ. ಅಲ್ಲದೆ ಜಲಾಶಯದಿಂದ ಸ್ಥಳೀಯ ರೈತರಿಗೆ, ಗ್ರಾಮಗಳಿಗೆ ಸಾಕಷ್ಟು ಅನುಕೂಲಗಳಿವೆ. ಆದರೆ ಅಲ್ಲಿಂದ ಹೊರಬಂದ ಗ್ರಾಮಗಳಿಗೆ ಮಾತ್ರ ೫೦ ವರ್ಷಗಳು ಉರುಳಿದರೂ ಸರಿಯಾದ ಮೂಲಭೂತ ಸೌಕರ್ಯ ಮಾತ್ರ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರ ಚಿಂತಿಸಬೇಕಾದ ಅವಶ್ಯಕತೆ ಇದೆ. -ಜಯರಾಮೇಗೌಡ, ಹೊಸಮಾಳ ಗ್ರಾಮಸ್ಥರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago