ಆಂದೋಲನ 50

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ ದೇಶದ ನಾನಾ ಭಾಗದ ಸಿರಿವಂತರು ಇಲ್ಲಿನ ರೈತರ ಜಮೀನುಗಳನ್ನು ಖರೀದಿಸಿ ರೆಸಾರ್ಟ್‌ಗಳನ್ನು ಕಟ್ಟಿಕೊಂಡರು.

ಕಬಿನಿಗಾಗಿ ಅಂದು ನೆಲೆ ಕಳೆದುಕೊಂಡವರು, ಜಮೀನು ತ್ಯಾಗ ಮಾಡಿದ ಜನರ ಪಾಲಿಗೆ ಬದುಕು ಕಟ್ಟಿಕೊಳ್ಳಲು ಈ ರೆಸಾರ್ಟ್‌ಗಳು ನೆರವಾಗಲಿಲ್ಲ. ಅನ್ಯ ರಾಜ್ಯದ ಜನರ ದೌಲತ್ತಿನಲ್ಲಿ ಸಣ್ಣ ಪುಟ್ಟ ನೌಕರಿಯೂ ಇವರಿಗೆ ಲಭ್ಯವಾಗಲಿಲ್ಲ.

ಪ್ರವಾಸೋದ್ಯಮ ಮತ್ತು ಅದರ ವ್ಯವಸ್ಥೆಗಳು ಇಂದು ಕೇವಲ ಉನ್ನತ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ, ಜನಪ್ರತಿನಿಧಿಗಳಿಗೆ ಮೋಜು ಮಸ್ತಿಯ, ಗೂಢಾಲೋಚನೆಯ ತಾಣವಾಗಿ ಬದಲಾಗಿದೆ ಎನ್ನುವುದು ಕಣ್ಣಿಗೆ ಗೋಚರಿಸುವ ಸತ್ಯ. ಆದರೆ ಅಂದು ಪುನರ್ವಸತಿ ಹೆಸರಿನಲ್ಲಿ ಎತ್ತಂಗಡಿಯಾದ ಗ್ರಾಮಗಳು ೫೦ ವರ್ಷಗಳ ಬಳಿಕವೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಶಿಕ್ಷಣ, ಆರೋಗ್ಯ, ನೀರು, ಸಾರಿಗೆ ಸಂಪರ್ಕ ಇನ್ನೂ ದೂರಾದ ಮಾತಾಗಿದೆ. ಇಲ್ಲಿಂದ ಸರಕಾರದ ಖಜಾನೆ ಸೇರುವ ಹಣದಲ್ಲಿ ಒಂದಿಷ್ಟು ಭಾಗ ಇಲ್ಲಿನವರ ಅಭಿವೃದ್ಧಿಗೆ ಪೂರಕವಾಗಿ ಖರ್ಚು ಮಾಡಿದರೆ ಅಂದಿನ ತ್ಯಾಗಕ್ಕೂ ಫಲ ಸಿಕ್ಕಂತಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಸರಕಾರದ ಮೇಲೆ, ಅರಣ್ಯ ಇಲಾಖೆಯ ಮೇಲೆ ವಿಶ್ವಾಸ ಮೂಡಿಸಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಕಬಿನಿ ಜಲಾಶಯದ ನಿರ್ಮಾಣದ ಹಂತದಲ್ಲಿ ಮುಳುಗಡೆಗೊಂಡ ೧೦-೧೨ ಗ್ರಾಮಗಳಿಗೆ ಪುನರ್ವಸತಿ ನೀಡಲಾಗಿದೆ. ಅಲ್ಲದೆ ಜಲಾಶಯದಿಂದ ಸ್ಥಳೀಯ ರೈತರಿಗೆ, ಗ್ರಾಮಗಳಿಗೆ ಸಾಕಷ್ಟು ಅನುಕೂಲಗಳಿವೆ. ಆದರೆ ಅಲ್ಲಿಂದ ಹೊರಬಂದ ಗ್ರಾಮಗಳಿಗೆ ಮಾತ್ರ ೫೦ ವರ್ಷಗಳು ಉರುಳಿದರೂ ಸರಿಯಾದ ಮೂಲಭೂತ ಸೌಕರ್ಯ ಮಾತ್ರ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರ ಚಿಂತಿಸಬೇಕಾದ ಅವಶ್ಯಕತೆ ಇದೆ. -ಜಯರಾಮೇಗೌಡ, ಹೊಸಮಾಳ ಗ್ರಾಮಸ್ಥರು.

andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago