ಆಂದೋಲನ 50

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ ದೇಶದ ನಾನಾ ಭಾಗದ ಸಿರಿವಂತರು ಇಲ್ಲಿನ ರೈತರ ಜಮೀನುಗಳನ್ನು ಖರೀದಿಸಿ ರೆಸಾರ್ಟ್‌ಗಳನ್ನು ಕಟ್ಟಿಕೊಂಡರು.

ಕಬಿನಿಗಾಗಿ ಅಂದು ನೆಲೆ ಕಳೆದುಕೊಂಡವರು, ಜಮೀನು ತ್ಯಾಗ ಮಾಡಿದ ಜನರ ಪಾಲಿಗೆ ಬದುಕು ಕಟ್ಟಿಕೊಳ್ಳಲು ಈ ರೆಸಾರ್ಟ್‌ಗಳು ನೆರವಾಗಲಿಲ್ಲ. ಅನ್ಯ ರಾಜ್ಯದ ಜನರ ದೌಲತ್ತಿನಲ್ಲಿ ಸಣ್ಣ ಪುಟ್ಟ ನೌಕರಿಯೂ ಇವರಿಗೆ ಲಭ್ಯವಾಗಲಿಲ್ಲ.

ಪ್ರವಾಸೋದ್ಯಮ ಮತ್ತು ಅದರ ವ್ಯವಸ್ಥೆಗಳು ಇಂದು ಕೇವಲ ಉನ್ನತ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ, ಜನಪ್ರತಿನಿಧಿಗಳಿಗೆ ಮೋಜು ಮಸ್ತಿಯ, ಗೂಢಾಲೋಚನೆಯ ತಾಣವಾಗಿ ಬದಲಾಗಿದೆ ಎನ್ನುವುದು ಕಣ್ಣಿಗೆ ಗೋಚರಿಸುವ ಸತ್ಯ. ಆದರೆ ಅಂದು ಪುನರ್ವಸತಿ ಹೆಸರಿನಲ್ಲಿ ಎತ್ತಂಗಡಿಯಾದ ಗ್ರಾಮಗಳು ೫೦ ವರ್ಷಗಳ ಬಳಿಕವೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಶಿಕ್ಷಣ, ಆರೋಗ್ಯ, ನೀರು, ಸಾರಿಗೆ ಸಂಪರ್ಕ ಇನ್ನೂ ದೂರಾದ ಮಾತಾಗಿದೆ. ಇಲ್ಲಿಂದ ಸರಕಾರದ ಖಜಾನೆ ಸೇರುವ ಹಣದಲ್ಲಿ ಒಂದಿಷ್ಟು ಭಾಗ ಇಲ್ಲಿನವರ ಅಭಿವೃದ್ಧಿಗೆ ಪೂರಕವಾಗಿ ಖರ್ಚು ಮಾಡಿದರೆ ಅಂದಿನ ತ್ಯಾಗಕ್ಕೂ ಫಲ ಸಿಕ್ಕಂತಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಸರಕಾರದ ಮೇಲೆ, ಅರಣ್ಯ ಇಲಾಖೆಯ ಮೇಲೆ ವಿಶ್ವಾಸ ಮೂಡಿಸಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಕಬಿನಿ ಜಲಾಶಯದ ನಿರ್ಮಾಣದ ಹಂತದಲ್ಲಿ ಮುಳುಗಡೆಗೊಂಡ ೧೦-೧೨ ಗ್ರಾಮಗಳಿಗೆ ಪುನರ್ವಸತಿ ನೀಡಲಾಗಿದೆ. ಅಲ್ಲದೆ ಜಲಾಶಯದಿಂದ ಸ್ಥಳೀಯ ರೈತರಿಗೆ, ಗ್ರಾಮಗಳಿಗೆ ಸಾಕಷ್ಟು ಅನುಕೂಲಗಳಿವೆ. ಆದರೆ ಅಲ್ಲಿಂದ ಹೊರಬಂದ ಗ್ರಾಮಗಳಿಗೆ ಮಾತ್ರ ೫೦ ವರ್ಷಗಳು ಉರುಳಿದರೂ ಸರಿಯಾದ ಮೂಲಭೂತ ಸೌಕರ್ಯ ಮಾತ್ರ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರ ಚಿಂತಿಸಬೇಕಾದ ಅವಶ್ಯಕತೆ ಇದೆ. -ಜಯರಾಮೇಗೌಡ, ಹೊಸಮಾಳ ಗ್ರಾಮಸ್ಥರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago