ಆಂದೋಲನ 50

ಅಪ್ಪಾಜಿಗೆ ಪತ್ರಿಕೋದ್ಯಮ ಎಂದಿಗೂ ಉದ್ಯಮ ಆಗಿರಲಿಲ್ಲ : ರಶ್ಮಿ ಕೋಟಿ

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . ಅದು ಹೋರಾಟದ ಮಾಧ್ಯಮವಾಗಿ, ದನಿಯಿಲ್ಲದವರ ದನಿಯಾಗಿ ಇರಬೇಕೆಂದು ಬಯಸಿದ್ದರು ಎಂದು ‘ಆಂದೋಲನ’ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ತಿಳಿಸಿದರು.

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ೨೪ರ ಹರೆಯದಲ್ಲೇ ಆಂದೋಲನ ವಾರಪತ್ರಿಕೆಯನ್ನು ಪ್ರಾರಂಭ ಮಾಡುವ ಸಾಹಸವನ್ನು ಮಾಡಿದರು. ನಂತರ ಅವರ ಕನಸುಗಳ ಮೂಟೆಯನ್ನು ಹೊತ್ತುಕೊಂಡು ಮೈಸೂರಿಗೆ ಬಂದು ‘ಆಂದೋಲನ’ ದಿನಪತ್ರಿಕೆಯಾಗಿ ಈಗ ೫೦ ವರ್ಷಗಳನ್ನು ಪೂರೈಸಿದೆ. ನಿಷ್ಠುರವಾಗಿ ಬರೆಯಬೇಕಾದ ಸಂದರ್ಭದಲ್ಲಿ ಹಿಂಜರಿಯುತ್ತಿರಲಿಲ್ಲ. ಸತ್ಯ, ನಿಖರ, ನಿಷ್ಪಕ್ಷಪಾತ ಸುದ್ದಿಗಳನ್ನು ನೀಡಲು ಸದಾ ಪ್ರಾಮಾಣಿಕ ಪ್ರಯತ್ನ ಮಾಡಿ ಅನೇಕ ಬಾರಿ ಆ ಕಾರಣಕ್ಕಾಗಿ ನಷ್ಟವನ್ನು ಅನುಭವಿಸಿದ್ದಾರೆ. ಅಪ್ಪಾಜಿಯ ಗುರಿ, ಎದೆಗುಂದದೆ ಸಾಧಿಸುವ ಛಲ, ರಾಜಿ ಇಲ್ಲದ ವೃತ್ತಿಪರತೆ, ಕಠಿಣ ಪರಿಶ್ರಮ ‘ಆಂದೋಲ’ ನದ ಈ ಯಶಸ್ಸಿನ ಕಥೆಯನ್ನು ನಿರ್ಮಿ ಸಿದೆ. ಅಪ್ಪಾಜಿಯ ಸಿದ್ಧಾಂತಗಳು ಜಾಗೃತಪ್ರಜ್ಞೆಯಾಗಿ ಸದಾ ನಮ್ಮೊಂದಿಗಿವೆ ಎಂದು ನೆನೆದರು.

‘ಆಂದೋಲನ’ದ ೫೦ ವರ್ಷಗಳ ಈ ಸಾರ್ಥಕ ಪಯಣದಲ್ಲಿ ನಮ್ಮ ಓದುಗರು, ಅನೇಕ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಪತ್ರಕರ್ತರು ಹೆಗಲು ನೀಡಿದ್ದೀರಿ. ನಿಮ್ಮೆಲ್ಲರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾಲಕ್ಕೆ ತಕ್ಕಂತೆ ಪತ್ರಿಕಾ ಕ್ಷೇತ್ರದ ಬದಲಾವಣೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾ ಹೊಸ ಸ್ವರೂಪಗಳೊಂದಿಗೆ ‘ಆಂದೋಲನ’ ಮುಂದುವರಿಯುತ್ತಿದೆ. ಮುಂದೆಯೂ ಮತ್ತಷ್ಟು ಹೊಸತನಗಳಿಗೆ ತೆರೆದುಕೊಳ್ಳಲು ಬದ್ಧವಾಗಿದೆ.

ಅಪ್ಪಾಜಿ ಆಶಯಗಳನ್ನು, ಕನಸುಗಳನ್ನು ಪತ್ರಿಕೆಯ ಮೂಲಕ ಜೀವಂತವಾಗಿಡಬೇಕೆಂಬುದೇ ಇಡೀ ‘ಆಂದೋಲನ’ ಬಳಗದ ಅಭಿಲಾಷೆಯಾಗಿದೆ ಎಂದು ಹೇಳಿದರು.

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

4 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

5 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

5 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

5 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

5 hours ago