ಆಂದೋಲನ 50

ಅಪ್ಪಾಜಿಗೆ ಪತ್ರಿಕೋದ್ಯಮ ಎಂದಿಗೂ ಉದ್ಯಮ ಆಗಿರಲಿಲ್ಲ : ರಶ್ಮಿ ಕೋಟಿ

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . ಅದು ಹೋರಾಟದ ಮಾಧ್ಯಮವಾಗಿ, ದನಿಯಿಲ್ಲದವರ ದನಿಯಾಗಿ ಇರಬೇಕೆಂದು ಬಯಸಿದ್ದರು ಎಂದು ‘ಆಂದೋಲನ’ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ತಿಳಿಸಿದರು.

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ೨೪ರ ಹರೆಯದಲ್ಲೇ ಆಂದೋಲನ ವಾರಪತ್ರಿಕೆಯನ್ನು ಪ್ರಾರಂಭ ಮಾಡುವ ಸಾಹಸವನ್ನು ಮಾಡಿದರು. ನಂತರ ಅವರ ಕನಸುಗಳ ಮೂಟೆಯನ್ನು ಹೊತ್ತುಕೊಂಡು ಮೈಸೂರಿಗೆ ಬಂದು ‘ಆಂದೋಲನ’ ದಿನಪತ್ರಿಕೆಯಾಗಿ ಈಗ ೫೦ ವರ್ಷಗಳನ್ನು ಪೂರೈಸಿದೆ. ನಿಷ್ಠುರವಾಗಿ ಬರೆಯಬೇಕಾದ ಸಂದರ್ಭದಲ್ಲಿ ಹಿಂಜರಿಯುತ್ತಿರಲಿಲ್ಲ. ಸತ್ಯ, ನಿಖರ, ನಿಷ್ಪಕ್ಷಪಾತ ಸುದ್ದಿಗಳನ್ನು ನೀಡಲು ಸದಾ ಪ್ರಾಮಾಣಿಕ ಪ್ರಯತ್ನ ಮಾಡಿ ಅನೇಕ ಬಾರಿ ಆ ಕಾರಣಕ್ಕಾಗಿ ನಷ್ಟವನ್ನು ಅನುಭವಿಸಿದ್ದಾರೆ. ಅಪ್ಪಾಜಿಯ ಗುರಿ, ಎದೆಗುಂದದೆ ಸಾಧಿಸುವ ಛಲ, ರಾಜಿ ಇಲ್ಲದ ವೃತ್ತಿಪರತೆ, ಕಠಿಣ ಪರಿಶ್ರಮ ‘ಆಂದೋಲ’ ನದ ಈ ಯಶಸ್ಸಿನ ಕಥೆಯನ್ನು ನಿರ್ಮಿ ಸಿದೆ. ಅಪ್ಪಾಜಿಯ ಸಿದ್ಧಾಂತಗಳು ಜಾಗೃತಪ್ರಜ್ಞೆಯಾಗಿ ಸದಾ ನಮ್ಮೊಂದಿಗಿವೆ ಎಂದು ನೆನೆದರು.

‘ಆಂದೋಲನ’ದ ೫೦ ವರ್ಷಗಳ ಈ ಸಾರ್ಥಕ ಪಯಣದಲ್ಲಿ ನಮ್ಮ ಓದುಗರು, ಅನೇಕ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಪತ್ರಕರ್ತರು ಹೆಗಲು ನೀಡಿದ್ದೀರಿ. ನಿಮ್ಮೆಲ್ಲರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾಲಕ್ಕೆ ತಕ್ಕಂತೆ ಪತ್ರಿಕಾ ಕ್ಷೇತ್ರದ ಬದಲಾವಣೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾ ಹೊಸ ಸ್ವರೂಪಗಳೊಂದಿಗೆ ‘ಆಂದೋಲನ’ ಮುಂದುವರಿಯುತ್ತಿದೆ. ಮುಂದೆಯೂ ಮತ್ತಷ್ಟು ಹೊಸತನಗಳಿಗೆ ತೆರೆದುಕೊಳ್ಳಲು ಬದ್ಧವಾಗಿದೆ.

ಅಪ್ಪಾಜಿ ಆಶಯಗಳನ್ನು, ಕನಸುಗಳನ್ನು ಪತ್ರಿಕೆಯ ಮೂಲಕ ಜೀವಂತವಾಗಿಡಬೇಕೆಂಬುದೇ ಇಡೀ ‘ಆಂದೋಲನ’ ಬಳಗದ ಅಭಿಲಾಷೆಯಾಗಿದೆ ಎಂದು ಹೇಳಿದರು.

andolana

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

7 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago