ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . ಅದು ಹೋರಾಟದ ಮಾಧ್ಯಮವಾಗಿ, ದನಿಯಿಲ್ಲದವರ ದನಿಯಾಗಿ ಇರಬೇಕೆಂದು ಬಯಸಿದ್ದರು ಎಂದು ‘ಆಂದೋಲನ’ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ತಿಳಿಸಿದರು.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ೨೪ರ ಹರೆಯದಲ್ಲೇ ಆಂದೋಲನ ವಾರಪತ್ರಿಕೆಯನ್ನು ಪ್ರಾರಂಭ ಮಾಡುವ ಸಾಹಸವನ್ನು ಮಾಡಿದರು. ನಂತರ ಅವರ ಕನಸುಗಳ ಮೂಟೆಯನ್ನು ಹೊತ್ತುಕೊಂಡು ಮೈಸೂರಿಗೆ ಬಂದು ‘ಆಂದೋಲನ’ ದಿನಪತ್ರಿಕೆಯಾಗಿ ಈಗ ೫೦ ವರ್ಷಗಳನ್ನು ಪೂರೈಸಿದೆ. ನಿಷ್ಠುರವಾಗಿ ಬರೆಯಬೇಕಾದ ಸಂದರ್ಭದಲ್ಲಿ ಹಿಂಜರಿಯುತ್ತಿರಲಿಲ್ಲ. ಸತ್ಯ, ನಿಖರ, ನಿಷ್ಪಕ್ಷಪಾತ ಸುದ್ದಿಗಳನ್ನು ನೀಡಲು ಸದಾ ಪ್ರಾಮಾಣಿಕ ಪ್ರಯತ್ನ ಮಾಡಿ ಅನೇಕ ಬಾರಿ ಆ ಕಾರಣಕ್ಕಾಗಿ ನಷ್ಟವನ್ನು ಅನುಭವಿಸಿದ್ದಾರೆ. ಅಪ್ಪಾಜಿಯ ಗುರಿ, ಎದೆಗುಂದದೆ ಸಾಧಿಸುವ ಛಲ, ರಾಜಿ ಇಲ್ಲದ ವೃತ್ತಿಪರತೆ, ಕಠಿಣ ಪರಿಶ್ರಮ ‘ಆಂದೋಲ’ ನದ ಈ ಯಶಸ್ಸಿನ ಕಥೆಯನ್ನು ನಿರ್ಮಿ ಸಿದೆ. ಅಪ್ಪಾಜಿಯ ಸಿದ್ಧಾಂತಗಳು ಜಾಗೃತಪ್ರಜ್ಞೆಯಾಗಿ ಸದಾ ನಮ್ಮೊಂದಿಗಿವೆ ಎಂದು ನೆನೆದರು.
‘ಆಂದೋಲನ’ದ ೫೦ ವರ್ಷಗಳ ಈ ಸಾರ್ಥಕ ಪಯಣದಲ್ಲಿ ನಮ್ಮ ಓದುಗರು, ಅನೇಕ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಪತ್ರಕರ್ತರು ಹೆಗಲು ನೀಡಿದ್ದೀರಿ. ನಿಮ್ಮೆಲ್ಲರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾಲಕ್ಕೆ ತಕ್ಕಂತೆ ಪತ್ರಿಕಾ ಕ್ಷೇತ್ರದ ಬದಲಾವಣೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾ ಹೊಸ ಸ್ವರೂಪಗಳೊಂದಿಗೆ ‘ಆಂದೋಲನ’ ಮುಂದುವರಿಯುತ್ತಿದೆ. ಮುಂದೆಯೂ ಮತ್ತಷ್ಟು ಹೊಸತನಗಳಿಗೆ ತೆರೆದುಕೊಳ್ಳಲು ಬದ್ಧವಾಗಿದೆ.
ಅಪ್ಪಾಜಿ ಆಶಯಗಳನ್ನು, ಕನಸುಗಳನ್ನು ಪತ್ರಿಕೆಯ ಮೂಲಕ ಜೀವಂತವಾಗಿಡಬೇಕೆಂಬುದೇ ಇಡೀ ‘ಆಂದೋಲನ’ ಬಳಗದ ಅಭಿಲಾಷೆಯಾಗಿದೆ ಎಂದು ಹೇಳಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…