ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . ಅದು ಹೋರಾಟದ ಮಾಧ್ಯಮವಾಗಿ, ದನಿಯಿಲ್ಲದವರ ದನಿಯಾಗಿ ಇರಬೇಕೆಂದು ಬಯಸಿದ್ದರು ಎಂದು ‘ಆಂದೋಲನ’ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ತಿಳಿಸಿದರು.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ೨೪ರ ಹರೆಯದಲ್ಲೇ ಆಂದೋಲನ ವಾರಪತ್ರಿಕೆಯನ್ನು ಪ್ರಾರಂಭ ಮಾಡುವ ಸಾಹಸವನ್ನು ಮಾಡಿದರು. ನಂತರ ಅವರ ಕನಸುಗಳ ಮೂಟೆಯನ್ನು ಹೊತ್ತುಕೊಂಡು ಮೈಸೂರಿಗೆ ಬಂದು ‘ಆಂದೋಲನ’ ದಿನಪತ್ರಿಕೆಯಾಗಿ ಈಗ ೫೦ ವರ್ಷಗಳನ್ನು ಪೂರೈಸಿದೆ. ನಿಷ್ಠುರವಾಗಿ ಬರೆಯಬೇಕಾದ ಸಂದರ್ಭದಲ್ಲಿ ಹಿಂಜರಿಯುತ್ತಿರಲಿಲ್ಲ. ಸತ್ಯ, ನಿಖರ, ನಿಷ್ಪಕ್ಷಪಾತ ಸುದ್ದಿಗಳನ್ನು ನೀಡಲು ಸದಾ ಪ್ರಾಮಾಣಿಕ ಪ್ರಯತ್ನ ಮಾಡಿ ಅನೇಕ ಬಾರಿ ಆ ಕಾರಣಕ್ಕಾಗಿ ನಷ್ಟವನ್ನು ಅನುಭವಿಸಿದ್ದಾರೆ. ಅಪ್ಪಾಜಿಯ ಗುರಿ, ಎದೆಗುಂದದೆ ಸಾಧಿಸುವ ಛಲ, ರಾಜಿ ಇಲ್ಲದ ವೃತ್ತಿಪರತೆ, ಕಠಿಣ ಪರಿಶ್ರಮ ‘ಆಂದೋಲ’ ನದ ಈ ಯಶಸ್ಸಿನ ಕಥೆಯನ್ನು ನಿರ್ಮಿ ಸಿದೆ. ಅಪ್ಪಾಜಿಯ ಸಿದ್ಧಾಂತಗಳು ಜಾಗೃತಪ್ರಜ್ಞೆಯಾಗಿ ಸದಾ ನಮ್ಮೊಂದಿಗಿವೆ ಎಂದು ನೆನೆದರು.
‘ಆಂದೋಲನ’ದ ೫೦ ವರ್ಷಗಳ ಈ ಸಾರ್ಥಕ ಪಯಣದಲ್ಲಿ ನಮ್ಮ ಓದುಗರು, ಅನೇಕ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಪತ್ರಕರ್ತರು ಹೆಗಲು ನೀಡಿದ್ದೀರಿ. ನಿಮ್ಮೆಲ್ಲರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾಲಕ್ಕೆ ತಕ್ಕಂತೆ ಪತ್ರಿಕಾ ಕ್ಷೇತ್ರದ ಬದಲಾವಣೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾ ಹೊಸ ಸ್ವರೂಪಗಳೊಂದಿಗೆ ‘ಆಂದೋಲನ’ ಮುಂದುವರಿಯುತ್ತಿದೆ. ಮುಂದೆಯೂ ಮತ್ತಷ್ಟು ಹೊಸತನಗಳಿಗೆ ತೆರೆದುಕೊಳ್ಳಲು ಬದ್ಧವಾಗಿದೆ.
ಅಪ್ಪಾಜಿ ಆಶಯಗಳನ್ನು, ಕನಸುಗಳನ್ನು ಪತ್ರಿಕೆಯ ಮೂಲಕ ಜೀವಂತವಾಗಿಡಬೇಕೆಂಬುದೇ ಇಡೀ ‘ಆಂದೋಲನ’ ಬಳಗದ ಅಭಿಲಾಷೆಯಾಗಿದೆ ಎಂದು ಹೇಳಿದರು.
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…