ಆಂದೋಲನ 50

ಮಿಂಚಿ ಮರೆಯಾದ ‘ಜಂಗಲ್ ಜಾಕಿ’

ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ ಹುಡುಗನ ಜೀವನ ದುರಂತದಲ್ಲಿ ಕೊನೆಗೊಂಡಿದ್ದನ್ನು ರಾಜ್ಯದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ.

ನೈಜ ಗಂಧದ ಮರಗಳ ಪರಿಮಳವನ್ನು ಆಘ್ರಾಣಿಸುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಹಾಡಿಯ ಯುವಕ ರಾಜೇಶ್, ಸ್ಯಾಂಡಲ್‌ವುಡ್ ಸ್ಪಾಟ್‌ಲೈಟ್‌ನ ಪ್ರಖರತೆ ತಾಳಲಾರದೆ ನಕ್ಷತ್ರದಂತೆ ಉರಿದು ಹೋಗಿ ಈಗ ದಶಕವೇ ಸಂದಿದೆ.

ರಾಜೇಶ್ ೨೦೧೦ರಲ್ಲಿ ಖಾಸಗಿ ಚಾನೆಲ್‌ನಲ್ಲಿ ಬಿತ್ತರವಾದ ‘ಹಳ್ಳಿ ಹೈದ ಪ್ಯಾಟ್ಗೆ ಬಂದ’ ರಿಯಾಲಿಟಿ ಶೋನಲ್ಲಿ ೧೦ ಲಕ್ಷ ರೂಪಾಯಿಯನ್ನು ಬಹುಮಾನವಾಗಿ ಪಡೆದುಕೊಂಡು ರಾತ್ರಿ ಬೆಳಗಾಗುವುದರೊಳಗೆ ಸೆಲೆಬ್ರಿಟಿಯಾಗಿದ್ದ. ಹಾಡಿಗೆ ಬಂದ ತರುವಾಯ ಕಪ್ಪು ಪಲ್ಸರ್ ಬೈಕ್ ಖರೀದಿಸಿ ನಾಲ್ಕೈದು ಹೈಕ್ಳನ್ನು ಕೂರಿಸಿಕೊಂಡು ಆ ಕಡೆ ಕೇರಳಕ್ಕೆ ಈ ಕಡೆ ಕೋಟೆಗೆ ತಿರುಗಾಟ ಆರಂಭವಾಗಿತ್ತು. ಇದೇ ಸಮಯದಲ್ಲಿ ‘ಜಂಗಲ್ ಜಾಕಿ’ ಎನ್ನುವ ಸಿನಿಮಾಕ್ಕೆ ನಾಯಕನಾಗಿ ಆಯ್ಕೆಯಾದ. ಚಿತ್ರ ತೋಪಾಯಿತು. ವಿವಾದಿತ ನಟಿ ಪೂನಂ ಪಾಂಡೆ ಜತೆ ನಟಿಸಿದ್ದ ‘ಲವ್ ಇಸ್ ಪಾಯಿಸನ್’ ಸಿನಿಮಾ ಅರ್ಧಕ್ಕೆ ನಿಂತು ಹೋಯಿತು. ಇವುಗಳ ಮಧ್ಯೆ ಏನೇನೋ ಘಟನೆಗಳು, ವಿವಾದಗಳು.. ಮಾನಸಿಕ ಖಿನ್ನತೆಗೆ ಒಳಗಾದ ರಾಜೇಶ್, ಬಿಗ್‌ಬಾಸ್- ಮೊದಲ ಸೀಸನ್‌ನಲ್ಲಿ ಅತಿಥಿಯಾಗಿ ಎಂಟ್ರಿ ಕೊಟ್ಟರೂ ಎರಡೇ ದಿನಕ್ಕೆ ವಾಪಸ್ ಹೋಗಿಬಿಟ್ಟ. ಮುಂದೆ ಕೆಲವೇ ದಿನಗಳಲ್ಲಿ ಬಳಿಕ ಮೈಸೂರಿನ ಪಕ್ಕದ ಹಳ್ಳಿಯೊಂದರಲ್ಲಿ ತಾನು ವಾಸವಾಗಿದ್ದ ಮನೆಯಲ್ಲಿಯೇ ಬಾದ ಲೋಕಕ್ಕೆ ಪಯಣಿಸಿದ. ತನ್ನ ಹೆಗಲೇರಿದ ‘ಕೀರ್ತಿಶನಿ’ಯನ್ನು ನಿಭಾಯಿಸುವ ಕಲೆ ಆತನಿಗೆ ತಿಳಿದಿರಲಿಲ್ಲ.

andolana

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

15 hours ago