ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ ಹುಡುಗನ ಜೀವನ ದುರಂತದಲ್ಲಿ ಕೊನೆಗೊಂಡಿದ್ದನ್ನು ರಾಜ್ಯದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ.
ನೈಜ ಗಂಧದ ಮರಗಳ ಪರಿಮಳವನ್ನು ಆಘ್ರಾಣಿಸುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಹಾಡಿಯ ಯುವಕ ರಾಜೇಶ್, ಸ್ಯಾಂಡಲ್ವುಡ್ ಸ್ಪಾಟ್ಲೈಟ್ನ ಪ್ರಖರತೆ ತಾಳಲಾರದೆ ನಕ್ಷತ್ರದಂತೆ ಉರಿದು ಹೋಗಿ ಈಗ ದಶಕವೇ ಸಂದಿದೆ.
ರಾಜೇಶ್ ೨೦೧೦ರಲ್ಲಿ ಖಾಸಗಿ ಚಾನೆಲ್ನಲ್ಲಿ ಬಿತ್ತರವಾದ ‘ಹಳ್ಳಿ ಹೈದ ಪ್ಯಾಟ್ಗೆ ಬಂದ’ ರಿಯಾಲಿಟಿ ಶೋನಲ್ಲಿ ೧೦ ಲಕ್ಷ ರೂಪಾಯಿಯನ್ನು ಬಹುಮಾನವಾಗಿ ಪಡೆದುಕೊಂಡು ರಾತ್ರಿ ಬೆಳಗಾಗುವುದರೊಳಗೆ ಸೆಲೆಬ್ರಿಟಿಯಾಗಿದ್ದ. ಹಾಡಿಗೆ ಬಂದ ತರುವಾಯ ಕಪ್ಪು ಪಲ್ಸರ್ ಬೈಕ್ ಖರೀದಿಸಿ ನಾಲ್ಕೈದು ಹೈಕ್ಳನ್ನು ಕೂರಿಸಿಕೊಂಡು ಆ ಕಡೆ ಕೇರಳಕ್ಕೆ ಈ ಕಡೆ ಕೋಟೆಗೆ ತಿರುಗಾಟ ಆರಂಭವಾಗಿತ್ತು. ಇದೇ ಸಮಯದಲ್ಲಿ ‘ಜಂಗಲ್ ಜಾಕಿ’ ಎನ್ನುವ ಸಿನಿಮಾಕ್ಕೆ ನಾಯಕನಾಗಿ ಆಯ್ಕೆಯಾದ. ಚಿತ್ರ ತೋಪಾಯಿತು. ವಿವಾದಿತ ನಟಿ ಪೂನಂ ಪಾಂಡೆ ಜತೆ ನಟಿಸಿದ್ದ ‘ಲವ್ ಇಸ್ ಪಾಯಿಸನ್’ ಸಿನಿಮಾ ಅರ್ಧಕ್ಕೆ ನಿಂತು ಹೋಯಿತು. ಇವುಗಳ ಮಧ್ಯೆ ಏನೇನೋ ಘಟನೆಗಳು, ವಿವಾದಗಳು.. ಮಾನಸಿಕ ಖಿನ್ನತೆಗೆ ಒಳಗಾದ ರಾಜೇಶ್, ಬಿಗ್ಬಾಸ್- ಮೊದಲ ಸೀಸನ್ನಲ್ಲಿ ಅತಿಥಿಯಾಗಿ ಎಂಟ್ರಿ ಕೊಟ್ಟರೂ ಎರಡೇ ದಿನಕ್ಕೆ ವಾಪಸ್ ಹೋಗಿಬಿಟ್ಟ. ಮುಂದೆ ಕೆಲವೇ ದಿನಗಳಲ್ಲಿ ಬಳಿಕ ಮೈಸೂರಿನ ಪಕ್ಕದ ಹಳ್ಳಿಯೊಂದರಲ್ಲಿ ತಾನು ವಾಸವಾಗಿದ್ದ ಮನೆಯಲ್ಲಿಯೇ ಬಾದ ಲೋಕಕ್ಕೆ ಪಯಣಿಸಿದ. ತನ್ನ ಹೆಗಲೇರಿದ ‘ಕೀರ್ತಿಶನಿ’ಯನ್ನು ನಿಭಾಯಿಸುವ ಕಲೆ ಆತನಿಗೆ ತಿಳಿದಿರಲಿಲ್ಲ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…