ಕೆ ಆರ್ ನಗರ: ಆಂದೋಲನ ದಿನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ 50 ವರ್ಷಗಳ ಅಭಿವೃದ್ಧಿ ಮುನ್ನೋಟ ಕುರಿತು ಕೆಆರ್ ನಗರದ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಬೆಳಿಗ್ಗೆ 10:30ಕ್ಕೆ (ಇಂದು) ಸಂವಾದ ಕಾರ್ಯಕ್ರಮ ನಡೆಯಲಿದೆ.
ಕೆ ಆರ್ ನಗರ ಶಾಸಕ, ಮಾಜಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪುರಸಭೆ ಅಧ್ಯಕ್ಷರಾದ ಕೋಳಿ ಪ್ರಕಾಶ್ ಹಾಗೂ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂದಿನಿ ರಮೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆಯಿಂದ ಗೌರವ ಸಲ್ಲಿಸಲಾಗುತ್ತದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…