ಕೆ ಆರ್ ನಗರ: ಆಂದೋಲನ ದಿನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ 50 ವರ್ಷಗಳ ಅಭಿವೃದ್ಧಿ ಮುನ್ನೋಟ ಕುರಿತು ಕೆಆರ್ ನಗರದ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಬೆಳಿಗ್ಗೆ 10:30ಕ್ಕೆ (ಇಂದು) ಸಂವಾದ ಕಾರ್ಯಕ್ರಮ ನಡೆಯಲಿದೆ.
ಕೆ ಆರ್ ನಗರ ಶಾಸಕ, ಮಾಜಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪುರಸಭೆ ಅಧ್ಯಕ್ಷರಾದ ಕೋಳಿ ಪ್ರಕಾಶ್ ಹಾಗೂ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂದಿನಿ ರಮೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆಯಿಂದ ಗೌರವ ಸಲ್ಲಿಸಲಾಗುತ್ತದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…