ಆಂದೋಲನ 50

ವನ್ಯಲೋಕಕ್ಕೆ ವರದಾನವಾದ ಕಬಿನಿ

 ಸ್ವಾತಂತ್ರ್ಯಪೂರ್ವದಲ್ಲಿ ಕಬಿನಿಗಿಂತ ಕಾಕನಕೋಟೆಯ ಹೆಸರೇ ಹೆಚ್ಚು ಪ್ರಚಲಿತದಲ್ಲಿತ್ತು. ಮೈಸೂರಿನ ಅರಸರಿಗೆ ಮತ್ತು ಬ್ರಿಟಿಷರಿಗೆ ಇದು ಶಿಕಾರಿ ಕೇಂದ್ರವಾಗಿತ್ತು. ಕಬಿನಿ ಜಲಾಶಯ ಈ ಪ್ರದೇಶದ ಮಾತ್ರವಲ್ಲ, ನಾಡಿನ ವನ್ಯಲೋಕದ ದಿಕ್ಕು ದೆಶೆಗಳನ್ನು ಬದಲಿಸಿತು.

 ಐದು ದಶಕಗಳ ಹಿಂದಿನ ಮಾತು. ಸ್ಥಳೀಯರಿಗೆ ಕಪಿಲೆಯಾಗಿ, ಹೊರಗಿನವರಿಗೆ ಕಬಿನಿಯಾಗಿದ್ದ ನದಿಯೊಂದು ಕಾವೇರಿಯೊಂದಿಗೆ ಲೀನಗೊಂಡು ತನ್ನ ಪಾಡಿಗೆ ತಾನು ಸಮುದ್ರ ಸೇರುತ್ತಿತ್ತು. ಕಾವೇರಿ, ತುಂಗೆ, ಭದ್ರಾ, ಕೃಷ್ಣೆ, ಭೀಮೆಗಳಿಗಿದ್ದಷ್ಟು ಪ್ರಾಮುಖ್ಯತೆ ಈ ನದಿಗೆ ಇರಲಿಲ್ಲ. ಕೇರಳದಲ್ಲಿ ಹುಟ್ಟಿ ಕರ್ನಾಟಕದ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಹರಿದು ಕಾವೇರಿಯಲ್ಲಿ ಒಂದಾಗುತ್ತಿದ್ದ ನದಿಯು ಜನರಿಗಿಂತ ಹೆಚ್ಚಾಗಿ ತನ್ನ ದಂಡೆಯ ಮೇಲೆ ವಿಶಾಲವಾಗಿ ಹರಡಿದ್ದ ನಾಗರಹೊಳೆ ಮತ್ತು ಬಂಡೀಪುರ ಕಾಡಿಗೆ ಆಸರೆಯಾಗಿತ್ತು. ಇದರ ನಡುವೆ ತಲೆಮಾರುಗಳಿಂದ ಜೀವಿಸಿದ್ದ ಒಂದಷ್ಟು ಹಾಡಿಗಳಿದ್ದವು.

೬೦ರ ದಶಕದ ಕೊನೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಸಮೀಪ ಕಬಿನಿ ಎಂಬ ಅಣೆಕಟ್ಟು ನಿರ್ಮಾಣದ ಪ್ರಸ್ತಾಪ ಬಂತು. ಅಲ್ಲಿ ಶತಮಾನಗಳಿಂದ ನೆಲೆ ನಿಂತಿದ್ದ ೧೦ಕ್ಕೂ ಅಧಿಕ ಗ್ರಾಮಗಳನ್ನು ಬೇರೆಡೆ ಸ್ಥಳಾಂತರ ಮಾಡುವ ಜೊತೆಗೆ, ಅಪಾರ ಪ್ರಮಾಣದ ಕಾಡನ್ನು ಕಡಿದು ಜಲಾಶಯಕ್ಕೆ ಬುನಾದಿ ಹಾಕುವ ಅಗತ್ಯವಿದೆಯೇ ಎಂಬ ಪ್ರಶ್ನೆಯೂ ಎದುರಾಯಿತು. ೨೨ ಹಳ್ಳಿಗಳು ಮತ್ತು ೧೪ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಕೃಷಿ ಭೂಮಿಗೆ ನೀರು ಒದಗಿಸುವ ಉದ್ದೇಶಕ್ಕಾಗಿ ಇಷ್ಟೊಂದು ಪ್ರಮಾಣದಲ್ಲಿ ಕಾಡು ನಾಶ ಮಾಡುವ ಅವಶ್ಯಕತೆ ಇತ್ತೇ ಎಂಬ ಚರ್ಚೆಯ ನಡುವೆಯೇ ಯೋಜನೆಯ ರೂಪುರೇಷೆ ಪೂರ್ಣಗೊಂಡಿತ್ತು. ಕಾಡಿನ ಜನರ ನೆಲೆಗಳು ನದಿಪಾಲಾಯಿತು. ನೂರಾರು ಬಗೆಯ ಜೀವ ವೈವಿಧ್ಯತೆಯ ಬದುಕು ಜಲಗರ್ಭದಲ್ಲಿ ಒಂದಾಯಿತು. ೨೨೮೪ ಅಡಿ ಉದ್ದದ ೧೯.೫೨ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯ ನಿರ್ಮಾಣ ೧೯೭೪ರಲ್ಲಿ ಮುಕ್ತಾಯವಾಯಿತು.

ಕಾಡನ್ನು ನುಂಗಿ, ಕಾಡಿನ ಜನರನ್ನು ಎತ್ತಂಗಡಿ ಮಾಡಿದ ಯೋಜನೆಯೇ ಮುಂದೊಂದು ದಿನ ಈ ಸ್ಥಳಕ್ಕೆ ವಿಶ್ವ ಭೂಪಟದಲ್ಲಿ ಮಾನ್ಯತೆ ತಂದುಕೊಡುವುದೆಂದು ಯಾರೂ ನಿರೀಕ್ಷಿಸಿರಲಿಲ್ಲ. ಈ ಜಲಾಶಯವೇ ಮುಂದೆ ಸಾವಿರಾರು ವನ್ಯಜೀವಿಗಳಿಗೆ ನೀರ ಆಸರೆಯಾಗಿ ಅವುಗಳ ಕಾಯಂ ನೆಲೆಯಾಗಲು ಸಹಕಾರಿಯಾಯಿತು. ಕಬಿನಿಯ ಹಿನ್ನೀರು ಕಾಡಿನ ಜೀವ ವೈವಿಧ್ಯತೆಗೆ ಹೊಸ ರೂಪ ನೀಡಿತು. ಬೇಸಿಗೆಯಲ್ಲಿ ನೀರನ್ನು ಹುಡುಕಿಕೊಂಡು ಅಲೆದಾಡುತ್ತಿದ್ದ ಬಂಡೀಪುರ ಮತ್ತು ನಾಗರಹೊಳೆಯ ವನ್ಯಜೀವಿಗಳಿಗೆ ಕಾಯಂ ನೀರಿನ ಸೆಲೆ ಸಿಕ್ಕಿದ್ದು ವರದಾನವಾಯಿತು. ಕಾಡಂಚಿನಲ್ಲಿ ನಿತ್ಯ ಹಸಿರ ಹೊದಿಕೆ ಸಿಕ್ಕಿದ್ದರಿಂದ ಮೇವಿನ ಬರವೂ ನೀಗಿತು. ನೀರಾವರಿ ಜತೆಗೆ ೨೪ ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಕೂಡ ಇಲ್ಲಿ ಉತ್ಪಾದನೆಯಾಗುತ್ತಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago