ಆಂದೋಲನ 50

ಓಲೆಕಾರರಿಗೆ ರಾಜ ಮರ್ಯಾದೆ

ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. ಆ ಎರಡು ಪ್ರತಿಮೆಗಳಲ್ಲಿ ಒಬ್ಬರದ್ದು ಪೋಸ್ಟ್‌ಮನ್ ಬಸವಯ್ಯ ಅವರದ್ದು. ಪೋಸ್ಟ್ ಮನ್ ಎನ್ನುವುದಕ್ಕಿಂತ ಓಲೇಕಾರ ಎಂದು ಕರೆಯಬಹುದು. ಬಸವಯ್ಯ ಅವರು ಓಲೆಗಳನ್ನು ಸಮಯಕ್ಕೆ ಸರಿಯಾಗಿ ಮುಟ್ಟಿಸುತ್ತಿದ್ದ ಪರಿ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಆ ಕಾಲದಲ್ಲಿ ಓಲೆ ಕೊಡಲು ನಡೆದುಕೊಂಡೇ ಹೋಗಬೇಕು. ಕೈಯಲ್ಲಿ ಗಂಟೆಗಳನ್ನು ಅಳವಡಿಸಿಕೊಳ್ಳಲಾಗಿದ್ದ ಉದ್ದನೆ ಕೋಲು, ಮತ್ತೊಂದು ಕೈಯಲ್ಲಿ ಲಾಟೀನು, ಬಗಲಲ್ಲಿ ಮಳೆ-ಗಾಳಿ ಬಂದರೂ ಏನು ಆಗದಂತಹ ಬ್ಯಾಗು. ರಾತ್ರಿ-ಹಗಲು, ಮಳೆ-ಬಿಸಿಲು ಎಲ್ಲ ಕಾಲದಲ್ಲೂ ಸೇವೆ ನಡೆಯುತ್ತಿತ್ತು.
ಇನ್ನೂ ಭುಜಂಗರಾವ್ ಕೂಡ ಸಂದೇಶ ವಾಹಕರೇ. ಅದರೆ ಇವರು ಕುದುರೆಯ ಮೇಲೆ ಕುಳಿತು ಪ್ರದೇಶದಿಂದ ಪ್ರದೇಶಕ್ಕೆ ಸಂದೇಶ ತಲುಪಿಸುತ್ತಿದ್ದರು. ಇಂತಹವರನ್ನು ಗುರುತಿಸಿ ನಾಲ್ವಡಿಯವರು ಅವರ ಪ್ರತಿಮೆಗಳನ್ನು ಸ್ಥಾಪನೆ ಮಾಡಿರುವುದು ಮೈಸೂರು ರಾಜಪರಂಪರೆಯು ಸಾಮಾನ್ಯರಿಗೂ ಕೊಡುತ್ತಿದ್ದ ಗೌರವದ ದ್ಯೋತಕ.

andolanait

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

2 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

2 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

2 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago