ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. ಆ ಎರಡು ಪ್ರತಿಮೆಗಳಲ್ಲಿ ಒಬ್ಬರದ್ದು ಪೋಸ್ಟ್ಮನ್ ಬಸವಯ್ಯ ಅವರದ್ದು. ಪೋಸ್ಟ್ ಮನ್ ಎನ್ನುವುದಕ್ಕಿಂತ ಓಲೇಕಾರ ಎಂದು ಕರೆಯಬಹುದು. ಬಸವಯ್ಯ ಅವರು ಓಲೆಗಳನ್ನು ಸಮಯಕ್ಕೆ ಸರಿಯಾಗಿ ಮುಟ್ಟಿಸುತ್ತಿದ್ದ ಪರಿ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಆ ಕಾಲದಲ್ಲಿ ಓಲೆ ಕೊಡಲು ನಡೆದುಕೊಂಡೇ ಹೋಗಬೇಕು. ಕೈಯಲ್ಲಿ ಗಂಟೆಗಳನ್ನು ಅಳವಡಿಸಿಕೊಳ್ಳಲಾಗಿದ್ದ ಉದ್ದನೆ ಕೋಲು, ಮತ್ತೊಂದು ಕೈಯಲ್ಲಿ ಲಾಟೀನು, ಬಗಲಲ್ಲಿ ಮಳೆ-ಗಾಳಿ ಬಂದರೂ ಏನು ಆಗದಂತಹ ಬ್ಯಾಗು. ರಾತ್ರಿ-ಹಗಲು, ಮಳೆ-ಬಿಸಿಲು ಎಲ್ಲ ಕಾಲದಲ್ಲೂ ಸೇವೆ ನಡೆಯುತ್ತಿತ್ತು.
ಇನ್ನೂ ಭುಜಂಗರಾವ್ ಕೂಡ ಸಂದೇಶ ವಾಹಕರೇ. ಅದರೆ ಇವರು ಕುದುರೆಯ ಮೇಲೆ ಕುಳಿತು ಪ್ರದೇಶದಿಂದ ಪ್ರದೇಶಕ್ಕೆ ಸಂದೇಶ ತಲುಪಿಸುತ್ತಿದ್ದರು. ಇಂತಹವರನ್ನು ಗುರುತಿಸಿ ನಾಲ್ವಡಿಯವರು ಅವರ ಪ್ರತಿಮೆಗಳನ್ನು ಸ್ಥಾಪನೆ ಮಾಡಿರುವುದು ಮೈಸೂರು ರಾಜಪರಂಪರೆಯು ಸಾಮಾನ್ಯರಿಗೂ ಕೊಡುತ್ತಿದ್ದ ಗೌರವದ ದ್ಯೋತಕ.
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…