ಮೈಸೂರಿನ ಕಾರಂಜಿ ಕೆರೆಯ ಎದುರಿಗೆ ಇರುವ ಅಶ್ವಾರೋಹಿ ಪಡೆಯ ಆವರಣದ ಮುಂದೆ ಸ್ಥಾಪನೆ ಮಾಡಿರುವ ಇಬ್ಬರು ಮಹನೀಯರ ಪ್ರತಿಮೆಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಈ ಪ್ರತಿಮೆಗಳ ಮೂಲಕ ಈಗಲೂ ಜೀವಂತವಾಗಿರುವ ಮಹನೀಯರಿಗೆ ಸಾಕ್ಷಾತ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಗೌರವ ಸಮರ್ಪಣೆ ಮಾಡಿದ್ದರು. ಆ ಎರಡು ಪ್ರತಿಮೆಗಳಲ್ಲಿ ಒಬ್ಬರದ್ದು ಪೋಸ್ಟ್ಮನ್ ಬಸವಯ್ಯ ಅವರದ್ದು. ಪೋಸ್ಟ್ ಮನ್ ಎನ್ನುವುದಕ್ಕಿಂತ ಓಲೇಕಾರ ಎಂದು ಕರೆಯಬಹುದು. ಬಸವಯ್ಯ ಅವರು ಓಲೆಗಳನ್ನು ಸಮಯಕ್ಕೆ ಸರಿಯಾಗಿ ಮುಟ್ಟಿಸುತ್ತಿದ್ದ ಪರಿ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಆ ಕಾಲದಲ್ಲಿ ಓಲೆ ಕೊಡಲು ನಡೆದುಕೊಂಡೇ ಹೋಗಬೇಕು. ಕೈಯಲ್ಲಿ ಗಂಟೆಗಳನ್ನು ಅಳವಡಿಸಿಕೊಳ್ಳಲಾಗಿದ್ದ ಉದ್ದನೆ ಕೋಲು, ಮತ್ತೊಂದು ಕೈಯಲ್ಲಿ ಲಾಟೀನು, ಬಗಲಲ್ಲಿ ಮಳೆ-ಗಾಳಿ ಬಂದರೂ ಏನು ಆಗದಂತಹ ಬ್ಯಾಗು. ರಾತ್ರಿ-ಹಗಲು, ಮಳೆ-ಬಿಸಿಲು ಎಲ್ಲ ಕಾಲದಲ್ಲೂ ಸೇವೆ ನಡೆಯುತ್ತಿತ್ತು.
ಇನ್ನೂ ಭುಜಂಗರಾವ್ ಕೂಡ ಸಂದೇಶ ವಾಹಕರೇ. ಅದರೆ ಇವರು ಕುದುರೆಯ ಮೇಲೆ ಕುಳಿತು ಪ್ರದೇಶದಿಂದ ಪ್ರದೇಶಕ್ಕೆ ಸಂದೇಶ ತಲುಪಿಸುತ್ತಿದ್ದರು. ಇಂತಹವರನ್ನು ಗುರುತಿಸಿ ನಾಲ್ವಡಿಯವರು ಅವರ ಪ್ರತಿಮೆಗಳನ್ನು ಸ್ಥಾಪನೆ ಮಾಡಿರುವುದು ಮೈಸೂರು ರಾಜಪರಂಪರೆಯು ಸಾಮಾನ್ಯರಿಗೂ ಕೊಡುತ್ತಿದ್ದ ಗೌರವದ ದ್ಯೋತಕ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…