ಆಂದೋಲನ 50

ಪತ್ರಿಕೋದ್ಯಮ ವೃತ್ತಿಯಾಗಿರದೆ ಬದುಕಾಗಿಸಿಕೊಂಡಿದ್ದ ಕೋಟಿ : ಬಿಎಸ್‌ವೈ

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬುಧವಾರ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶ ಕಳುಹಿಸಿ, ಶುಭನುಡಿಗಳನ್ನಾಡಿದರು.

ಒಂದು ಪ್ರಾದೇಶಿಕ ಪತ್ರಿಕೆಯಾಗಿ ‘ಆಂದೋ ಲನ’ಕ್ಕೆ ೫೦ ವರ್ಷಗಳು ತುಂಬಿರುವುದು ಬಹಳ ಸಂತೋಷದ ಸಂಗತಿಯಾಗಿದೆ. ಈ ಮಹತ್ವಪೂರ್ಣವಾದ ೫೦ನೇ ವರ್ಷದ ಸಾರ್ಥಕ ಸಂಭ್ರಮದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುವ ಮನಸ್ಸು ಇತ್ತು. ಆದರೆ, ಕಾರಣಾಂತರಗಳಿಂದ ಬರಲು ಸಾಧ್ಯವಾಗಿಲ್ಲ. ಮೈಸೂರಿನ ‘ಆಂದೋಲನ’ ದಿನಪತ್ರಿಕೆಗೆ ತನ್ನದೇ ಆದ ಹೆಸರು, ಪರಂಪರೆ ಇದೆ. ರಾಜಶೇಖರ ಕೋಟಿ ಅವರಿಗೆ ಪತ್ರಿಕೋದ್ಯಮ ಕೇವಲ ವೃತ್ತಿಯಾಗಿರಲಿಲ್ಲ. ಅವರಿಗೆ ಅದು ಬದುಕಾಗಿತ್ತು. ‘ಆಂದೋಲನ’ದ ರೂವಾರಿ ರಾಜಶೇಖರ ಕೋಟಿ ಅವರು ದೂರದ ಹಾವೇರಿ ಜಿಲ್ಲೆಯಿಂದ ಮೈಸೂರಿಗೆ ಬಂದು ಸಮಾಜದ ಹೋರಾಟಗಳನ್ನು ಬದುಕಿನ ಹೋರಾಟವಾಗಿಸಿಕೊಂಡು ಶೋಷಣೆ, ಅನ್ಯಾಯದ ವಿರುದ್ಧ ‘ಆಂದೋಲನ’ವನ್ನು ಕಟ್ಟಿ ಬೆಳೆಸಿದವರು. ಮೈಸೂರು, ಮಂಡ್ಯ, ಚಾಮರಾಜ ನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪರಂಪರೆ ಬೆಳೆಸುವಲ್ಲಿ ‘ಆಂದೋಲನ’ ಪತ್ರಿಕೆಯ ಪಾತ್ರ ಬಹಳ ದೊಡ್ಡದು ಇದೆ. ಕಳೆದ ೫೦ ವರ್ಷಗಳಲ್ಲಿ ೫೦೦ಕ್ಕೂ ಹೆಚ್ಚು ಪತ್ರಕರ್ತರನ್ನು ರೂಪಿಸಿರುವ ‘ಆಂದೋಲನ’ ಇನ್ನಷ್ಟು ಸಂಭ್ರಮದಿಂದ ಶತಮಾನೋತ್ಸವ ಆಚರಿಸಲೆಂದು ಹಾರೈಸುತ್ತೇನೆ.

ರಾಜಶೇಖರ ಕೋಟಿ ಅವರು ಪತ್ರಿಕೋದ್ಯಮವನ್ನು ಅಪಾರವಾಗಿ ಪ್ರೀತಿಸಿದವರು. ನೇರ, ನಿಷ್ಠುರ ಹಾಗೂ ವಾಸ್ತವತೆಯನ್ನು ಜನರ ಮುಂದಿಡಲು ಯಾವುದೇ ಕಾರಣಕ್ಕೂ ರಾಜಿಯಾದವರಲ್ಲ. ಜನರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಅವರ ಬರವಣಿಗೆ ಅಷ್ಟೇ ಮೊನಚಾಗಿತ್ತು. ಈಗ ಅವರು ಹುಟ್ಟು ಹಾಕಿದ  ಪತ್ರಿಕೆಗೆ ೫೦ ವರ್ಷಗಳು ಕಳೆದಿರುವುದು ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಅವರು ಹಾಕಿಕೊಟ್ಟ ಮಾರ್ಗದರ್ಶನ ದಲ್ಲಿ ಮಕ್ಕಳಾದ ರವಿ ಕೋಟಿ, ರಶ್ಮಿ ಕೋಟಿ ಅವರು ಪತ್ರಿಕೆಯನ್ನು ಮುನ್ನಡೆಸಿಕೊಂಡು ಸಾಗುವ ವಿಶ್ವಾಸ, ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿತ್ತಾದರೂ ಸಾಧ್ಯವಾಗಲಿಲ್ಲ. ಜನಮುಖಿಯಾಗಿರುವ ಪತ್ರಿಕೆ ಮುಂದೆ ನೂರು ವರ್ಷಗಳನ್ನು ದಾಟಲೆಂದು ಹಾರೈಸುತ್ತೇನೆ. ಕಾರ್ಯಕ್ರಮದಲ್ಲಿ ಭಾಗಿಯಾದ ಪತ್ರಿಕೆಯ ಓದುಗರು, ಹಿತೈಷಿಗಳು, ತಮ್ಮೆಲ್ಲರಿಗೂ ಶುಭ ಕೋರುವ ಜತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.

ಲಂಡನ್‌ನಿಂದಲೇ ಶುಭಾಶಯ: ಕುಟುಂಬ ಸಮೇತ ಲಂಡನ್ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ‘ಆಂದೋಲನ’ ಸಂಭ್ರಮಕ್ಕೆ ಶುಭಾಶಯ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕೆ ನಡೆದುಬಂದ ದಾರಿ, ರಾಜಶೇಖರ ಕೋಟಿ ಅವರ ಹೋರಾಟ, ಪತ್ರಿಕೆಯೊಂದಿಗಿನ ನಂಟು, ಬದ್ಧತೆ, ಸಾಮಾಜಿಕ ಹೋರಾಟಗಳ ಬಗ್ಗೆ ಮಾತನಾಡುವ ಮೂಲಕ ಕೆಲವು ವಿಚಾರಗಳನ್ನು ಸ್ಮರಿಸಿಕೊಂಡರು. ಮೈಸೂರು ಪ್ರವಾಸ ಇದ್ದಾಗಲೆಲ್ಲಾ ‘ಆಂದೋಲನ’ ಪತ್ರಿಕೆಯನ್ನು ತಿರುವಿ ಹಾಕುತ್ತಿದ್ದೆ. ಗ್ರಾಮೀಣ ಜನರ ಆಶೋತ್ತರಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಿದ ರಾಜಶೇಖರ ಕೋಟಿಅವರು ನಮ್ಮ ನಡುವೆ ಇಲ್ಲದಿದ್ದರೂ ಅವರ ಆದರ್ಶದಂತೆ ಪತ್ರಿಕೆ ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದು ವರ್ಣಿಸಿದರು.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

16 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago