ಆಂದೋಲನ 50

ಪತ್ರಿಕೋದ್ಯಮ ವೃತ್ತಿಯಾಗಿರದೆ ಬದುಕಾಗಿಸಿಕೊಂಡಿದ್ದ ಕೋಟಿ : ಬಿಎಸ್‌ವೈ

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬುಧವಾರ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶ ಕಳುಹಿಸಿ, ಶುಭನುಡಿಗಳನ್ನಾಡಿದರು.

ಒಂದು ಪ್ರಾದೇಶಿಕ ಪತ್ರಿಕೆಯಾಗಿ ‘ಆಂದೋ ಲನ’ಕ್ಕೆ ೫೦ ವರ್ಷಗಳು ತುಂಬಿರುವುದು ಬಹಳ ಸಂತೋಷದ ಸಂಗತಿಯಾಗಿದೆ. ಈ ಮಹತ್ವಪೂರ್ಣವಾದ ೫೦ನೇ ವರ್ಷದ ಸಾರ್ಥಕ ಸಂಭ್ರಮದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುವ ಮನಸ್ಸು ಇತ್ತು. ಆದರೆ, ಕಾರಣಾಂತರಗಳಿಂದ ಬರಲು ಸಾಧ್ಯವಾಗಿಲ್ಲ. ಮೈಸೂರಿನ ‘ಆಂದೋಲನ’ ದಿನಪತ್ರಿಕೆಗೆ ತನ್ನದೇ ಆದ ಹೆಸರು, ಪರಂಪರೆ ಇದೆ. ರಾಜಶೇಖರ ಕೋಟಿ ಅವರಿಗೆ ಪತ್ರಿಕೋದ್ಯಮ ಕೇವಲ ವೃತ್ತಿಯಾಗಿರಲಿಲ್ಲ. ಅವರಿಗೆ ಅದು ಬದುಕಾಗಿತ್ತು. ‘ಆಂದೋಲನ’ದ ರೂವಾರಿ ರಾಜಶೇಖರ ಕೋಟಿ ಅವರು ದೂರದ ಹಾವೇರಿ ಜಿಲ್ಲೆಯಿಂದ ಮೈಸೂರಿಗೆ ಬಂದು ಸಮಾಜದ ಹೋರಾಟಗಳನ್ನು ಬದುಕಿನ ಹೋರಾಟವಾಗಿಸಿಕೊಂಡು ಶೋಷಣೆ, ಅನ್ಯಾಯದ ವಿರುದ್ಧ ‘ಆಂದೋಲನ’ವನ್ನು ಕಟ್ಟಿ ಬೆಳೆಸಿದವರು. ಮೈಸೂರು, ಮಂಡ್ಯ, ಚಾಮರಾಜ ನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪರಂಪರೆ ಬೆಳೆಸುವಲ್ಲಿ ‘ಆಂದೋಲನ’ ಪತ್ರಿಕೆಯ ಪಾತ್ರ ಬಹಳ ದೊಡ್ಡದು ಇದೆ. ಕಳೆದ ೫೦ ವರ್ಷಗಳಲ್ಲಿ ೫೦೦ಕ್ಕೂ ಹೆಚ್ಚು ಪತ್ರಕರ್ತರನ್ನು ರೂಪಿಸಿರುವ ‘ಆಂದೋಲನ’ ಇನ್ನಷ್ಟು ಸಂಭ್ರಮದಿಂದ ಶತಮಾನೋತ್ಸವ ಆಚರಿಸಲೆಂದು ಹಾರೈಸುತ್ತೇನೆ.

ರಾಜಶೇಖರ ಕೋಟಿ ಅವರು ಪತ್ರಿಕೋದ್ಯಮವನ್ನು ಅಪಾರವಾಗಿ ಪ್ರೀತಿಸಿದವರು. ನೇರ, ನಿಷ್ಠುರ ಹಾಗೂ ವಾಸ್ತವತೆಯನ್ನು ಜನರ ಮುಂದಿಡಲು ಯಾವುದೇ ಕಾರಣಕ್ಕೂ ರಾಜಿಯಾದವರಲ್ಲ. ಜನರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಅವರ ಬರವಣಿಗೆ ಅಷ್ಟೇ ಮೊನಚಾಗಿತ್ತು. ಈಗ ಅವರು ಹುಟ್ಟು ಹಾಕಿದ  ಪತ್ರಿಕೆಗೆ ೫೦ ವರ್ಷಗಳು ಕಳೆದಿರುವುದು ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಅವರು ಹಾಕಿಕೊಟ್ಟ ಮಾರ್ಗದರ್ಶನ ದಲ್ಲಿ ಮಕ್ಕಳಾದ ರವಿ ಕೋಟಿ, ರಶ್ಮಿ ಕೋಟಿ ಅವರು ಪತ್ರಿಕೆಯನ್ನು ಮುನ್ನಡೆಸಿಕೊಂಡು ಸಾಗುವ ವಿಶ್ವಾಸ, ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿತ್ತಾದರೂ ಸಾಧ್ಯವಾಗಲಿಲ್ಲ. ಜನಮುಖಿಯಾಗಿರುವ ಪತ್ರಿಕೆ ಮುಂದೆ ನೂರು ವರ್ಷಗಳನ್ನು ದಾಟಲೆಂದು ಹಾರೈಸುತ್ತೇನೆ. ಕಾರ್ಯಕ್ರಮದಲ್ಲಿ ಭಾಗಿಯಾದ ಪತ್ರಿಕೆಯ ಓದುಗರು, ಹಿತೈಷಿಗಳು, ತಮ್ಮೆಲ್ಲರಿಗೂ ಶುಭ ಕೋರುವ ಜತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.

ಲಂಡನ್‌ನಿಂದಲೇ ಶುಭಾಶಯ: ಕುಟುಂಬ ಸಮೇತ ಲಂಡನ್ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ‘ಆಂದೋಲನ’ ಸಂಭ್ರಮಕ್ಕೆ ಶುಭಾಶಯ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕೆ ನಡೆದುಬಂದ ದಾರಿ, ರಾಜಶೇಖರ ಕೋಟಿ ಅವರ ಹೋರಾಟ, ಪತ್ರಿಕೆಯೊಂದಿಗಿನ ನಂಟು, ಬದ್ಧತೆ, ಸಾಮಾಜಿಕ ಹೋರಾಟಗಳ ಬಗ್ಗೆ ಮಾತನಾಡುವ ಮೂಲಕ ಕೆಲವು ವಿಚಾರಗಳನ್ನು ಸ್ಮರಿಸಿಕೊಂಡರು. ಮೈಸೂರು ಪ್ರವಾಸ ಇದ್ದಾಗಲೆಲ್ಲಾ ‘ಆಂದೋಲನ’ ಪತ್ರಿಕೆಯನ್ನು ತಿರುವಿ ಹಾಕುತ್ತಿದ್ದೆ. ಗ್ರಾಮೀಣ ಜನರ ಆಶೋತ್ತರಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಿದ ರಾಜಶೇಖರ ಕೋಟಿಅವರು ನಮ್ಮ ನಡುವೆ ಇಲ್ಲದಿದ್ದರೂ ಅವರ ಆದರ್ಶದಂತೆ ಪತ್ರಿಕೆ ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದು ವರ್ಣಿಸಿದರು.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

3 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

19 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

36 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

49 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago