ಆಂದೋಲನ 50

ಪತ್ರಿಕೋದ್ಯಮ ವೃತ್ತಿಯಾಗಿರದೆ ಬದುಕಾಗಿಸಿಕೊಂಡಿದ್ದ ಕೋಟಿ : ಬಿಎಸ್‌ವೈ

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬುಧವಾರ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ವಿಡಿಯೋ ಸಂದೇಶ ಕಳುಹಿಸಿ, ಶುಭನುಡಿಗಳನ್ನಾಡಿದರು.

ಒಂದು ಪ್ರಾದೇಶಿಕ ಪತ್ರಿಕೆಯಾಗಿ ‘ಆಂದೋ ಲನ’ಕ್ಕೆ ೫೦ ವರ್ಷಗಳು ತುಂಬಿರುವುದು ಬಹಳ ಸಂತೋಷದ ಸಂಗತಿಯಾಗಿದೆ. ಈ ಮಹತ್ವಪೂರ್ಣವಾದ ೫೦ನೇ ವರ್ಷದ ಸಾರ್ಥಕ ಸಂಭ್ರಮದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುವ ಮನಸ್ಸು ಇತ್ತು. ಆದರೆ, ಕಾರಣಾಂತರಗಳಿಂದ ಬರಲು ಸಾಧ್ಯವಾಗಿಲ್ಲ. ಮೈಸೂರಿನ ‘ಆಂದೋಲನ’ ದಿನಪತ್ರಿಕೆಗೆ ತನ್ನದೇ ಆದ ಹೆಸರು, ಪರಂಪರೆ ಇದೆ. ರಾಜಶೇಖರ ಕೋಟಿ ಅವರಿಗೆ ಪತ್ರಿಕೋದ್ಯಮ ಕೇವಲ ವೃತ್ತಿಯಾಗಿರಲಿಲ್ಲ. ಅವರಿಗೆ ಅದು ಬದುಕಾಗಿತ್ತು. ‘ಆಂದೋಲನ’ದ ರೂವಾರಿ ರಾಜಶೇಖರ ಕೋಟಿ ಅವರು ದೂರದ ಹಾವೇರಿ ಜಿಲ್ಲೆಯಿಂದ ಮೈಸೂರಿಗೆ ಬಂದು ಸಮಾಜದ ಹೋರಾಟಗಳನ್ನು ಬದುಕಿನ ಹೋರಾಟವಾಗಿಸಿಕೊಂಡು ಶೋಷಣೆ, ಅನ್ಯಾಯದ ವಿರುದ್ಧ ‘ಆಂದೋಲನ’ವನ್ನು ಕಟ್ಟಿ ಬೆಳೆಸಿದವರು. ಮೈಸೂರು, ಮಂಡ್ಯ, ಚಾಮರಾಜ ನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪರಂಪರೆ ಬೆಳೆಸುವಲ್ಲಿ ‘ಆಂದೋಲನ’ ಪತ್ರಿಕೆಯ ಪಾತ್ರ ಬಹಳ ದೊಡ್ಡದು ಇದೆ. ಕಳೆದ ೫೦ ವರ್ಷಗಳಲ್ಲಿ ೫೦೦ಕ್ಕೂ ಹೆಚ್ಚು ಪತ್ರಕರ್ತರನ್ನು ರೂಪಿಸಿರುವ ‘ಆಂದೋಲನ’ ಇನ್ನಷ್ಟು ಸಂಭ್ರಮದಿಂದ ಶತಮಾನೋತ್ಸವ ಆಚರಿಸಲೆಂದು ಹಾರೈಸುತ್ತೇನೆ.

ರಾಜಶೇಖರ ಕೋಟಿ ಅವರು ಪತ್ರಿಕೋದ್ಯಮವನ್ನು ಅಪಾರವಾಗಿ ಪ್ರೀತಿಸಿದವರು. ನೇರ, ನಿಷ್ಠುರ ಹಾಗೂ ವಾಸ್ತವತೆಯನ್ನು ಜನರ ಮುಂದಿಡಲು ಯಾವುದೇ ಕಾರಣಕ್ಕೂ ರಾಜಿಯಾದವರಲ್ಲ. ಜನರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಅವರ ಬರವಣಿಗೆ ಅಷ್ಟೇ ಮೊನಚಾಗಿತ್ತು. ಈಗ ಅವರು ಹುಟ್ಟು ಹಾಕಿದ  ಪತ್ರಿಕೆಗೆ ೫೦ ವರ್ಷಗಳು ಕಳೆದಿರುವುದು ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಅವರು ಹಾಕಿಕೊಟ್ಟ ಮಾರ್ಗದರ್ಶನ ದಲ್ಲಿ ಮಕ್ಕಳಾದ ರವಿ ಕೋಟಿ, ರಶ್ಮಿ ಕೋಟಿ ಅವರು ಪತ್ರಿಕೆಯನ್ನು ಮುನ್ನಡೆಸಿಕೊಂಡು ಸಾಗುವ ವಿಶ್ವಾಸ, ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿತ್ತಾದರೂ ಸಾಧ್ಯವಾಗಲಿಲ್ಲ. ಜನಮುಖಿಯಾಗಿರುವ ಪತ್ರಿಕೆ ಮುಂದೆ ನೂರು ವರ್ಷಗಳನ್ನು ದಾಟಲೆಂದು ಹಾರೈಸುತ್ತೇನೆ. ಕಾರ್ಯಕ್ರಮದಲ್ಲಿ ಭಾಗಿಯಾದ ಪತ್ರಿಕೆಯ ಓದುಗರು, ಹಿತೈಷಿಗಳು, ತಮ್ಮೆಲ್ಲರಿಗೂ ಶುಭ ಕೋರುವ ಜತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.

ಲಂಡನ್‌ನಿಂದಲೇ ಶುಭಾಶಯ: ಕುಟುಂಬ ಸಮೇತ ಲಂಡನ್ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ‘ಆಂದೋಲನ’ ಸಂಭ್ರಮಕ್ಕೆ ಶುಭಾಶಯ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕೆ ನಡೆದುಬಂದ ದಾರಿ, ರಾಜಶೇಖರ ಕೋಟಿ ಅವರ ಹೋರಾಟ, ಪತ್ರಿಕೆಯೊಂದಿಗಿನ ನಂಟು, ಬದ್ಧತೆ, ಸಾಮಾಜಿಕ ಹೋರಾಟಗಳ ಬಗ್ಗೆ ಮಾತನಾಡುವ ಮೂಲಕ ಕೆಲವು ವಿಚಾರಗಳನ್ನು ಸ್ಮರಿಸಿಕೊಂಡರು. ಮೈಸೂರು ಪ್ರವಾಸ ಇದ್ದಾಗಲೆಲ್ಲಾ ‘ಆಂದೋಲನ’ ಪತ್ರಿಕೆಯನ್ನು ತಿರುವಿ ಹಾಕುತ್ತಿದ್ದೆ. ಗ್ರಾಮೀಣ ಜನರ ಆಶೋತ್ತರಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಿದ ರಾಜಶೇಖರ ಕೋಟಿಅವರು ನಮ್ಮ ನಡುವೆ ಇಲ್ಲದಿದ್ದರೂ ಅವರ ಆದರ್ಶದಂತೆ ಪತ್ರಿಕೆ ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದು ವರ್ಣಿಸಿದರು.

andolana

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago