ಆಂದೋಲನ 50

ಸಿದ್ಧಾಂತಕ್ಕೆ ಬದ್ಧವಾಗಿ ಕೊನೆ ತನಕವೂ ರಾಜಿಯಾಗದ ಕೋಟಿ : ಪ್ರಸಾದ್‌

ತಿ.ನರಸೀಪುರದಲ್ಲಿ ನಡೆದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ಉದ್ಘಾಟಿಸಿದ ಸಂಸದರು

ತಿ.ನರಸೀಪುರ: ರಾಜಶೇಖರ ಕೋಟಿ ಅವರು ಸಿದ್ಧಾಂತವನ್ನು ಬದಿಗೊತ್ತಿ ಅವಕಾಶವಾದಿಯಾಗದೆ ಯಾರೊಂದಿಗೂ ರಾಜಿಯಾಗಲಿಲ್ಲ. ತಮ್ಮ ನಡೆ, ನುಡಿಯಂತೆ ಬದುಕುವ ಜೊತೆಗೆ ಸಮಾಜವಾದಿಯಾಗಿಯೇ ಉಳಿದು ಕೊನೆ ತನಕವೂ ಸಿದ್ಧಾಂತವನ್ನು ಉಳಿಸಿಕೊಂಡರು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯ ವಿ.ಶ್ರೀನಿವಾಸಪ್ರಸಾದ್ ಬಣ್ಣಿಸಿದರು.

ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜವಾದಿಗಳಾಗಿದ್ದ ಜಯಪ್ರಕಾಶ್ ನಾರಾಯಣ್, ರಾಮ ಮನೋಹರ ಲೋಹಿಯಾ, ಜಾರ್ಜ್ ಫರ್ನಾಂಡೀಸ್ ಅವರಂತೆ ರಾಜಶೇಖರ ಕೋಟಿ ಅವರು ನಡೆದುಕೊಂಡವರು. ಆರಂಭದಿಂದ ಕೊನೆಯ ತನಕವೂ ತಮ್ಮ ಸಿದ್ಧಾಂತವನ್ನು ಬಿಟ್ಟುಕೊಡಲಿಲ್ಲ. ಪತ್ರಿಕೆಗಾಗಿ ಅವಕಾಶವಾದಿಯಾಗಲಿಲ್ಲ. ಯಾವುದಕ್ಕೂ ರಾಜಿಯಾಗದೆ ಗಟ್ಟಿಯಾಗಿ ನಿಂತವರು ಎಂದು ಗುಣಗಾನ ಮಾಡಿದರು.

ಈಗಾಗಲೇ 50 ವರ್ಷದ ಸಾರ್ಥಕ ಪಯಣ ಕಾರ್ಯಕ್ರಮ ಮೈಸೂರಿನಲ್ಲಿ ಚಾಲನೆಗೊಂಡಿತು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ನಂಜನಗೂಡು ತಾಲ್ಲೂಕಿನಲ್ಲೂ ‘ಆಂದೋಲನ’ ಪತ್ರಿಕೆಯ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆದಿದೆ. ನನ್ನ ಮತ್ತು ‘ಆಂದೋಲನ’ ಪತ್ರಿಕೆಯ ನಡುವಿನ ಸಂಬಂಧ, ಸಂಪರ್ಕ 47 ವರ್ಷಗಳಿಂದಲೂ ಇದೆ. ರಾಜಶೇಖರ ಕೋಟಿ ಅವರು ಅತ್ಯಂತ ಆತ್ಮೀಯರಾಗಿದ್ದರು. ಅವರೊಂದಿಗೆ ತುಂಬಾ ಒಡನಾಟ ಇತ್ತು ಎಂದು ಹೇಳಿದರು.

ರಾಜಶೇಖರ ಕೋಟಿ ಸಮಾಜವಾದಿ, ಲೋಹಿಯವಾದಿ ಚಿಂತಕರಾಗಿದ್ದರು. ಮಾನವೀಯ ಸಂಬಂಧ ಇಟ್ಟುಕೊಂಡು ಚಳವಳಿಯಲ್ಲಿ ಭಾಗಿಯಾಗುತ್ತಿದ್ದರು. ಸಮಾಜದಲ್ಲಿ ಪ್ರಪಾತಕ್ಕೆ ತುಳಿಯಲ್ಪಟ್ಟವರು ಮುಂದೆ ಬರಬೇಕು ಎನ್ನುವ ಕಾರಣಕ್ಕಾಗಿ ಶ್ರಮಿಸಿದರು. ಸಮಾಜವಾದಿ ಚಿಂತಕರ ಬಳಗವೇ ಮೈಸೂರಿನಲ್ಲಿ ಇತ್ತು. ಪಾಟೀಲ್ ಪುಟ್ಟಪ್ಪ ನಡೆಸುತ್ತಿದ್ದ ‘ಪ್ರಪಂಚ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ ಕೋಟಿ ಅವರು ಬಹಳ ಅನುಭವ ಪಡೆದುಕೊಂಡು ಮೈಸೂರಿಗೆ ಬಂದು ಪತ್ರಿಕೆ ಶುರು ಮಾಡಿದ್ದರಿಂದ ಸ್ನೇಹಿತರ ಬಳಗದೊಂದಿಗೆ ಬೆಳೆಯಲು ಕಾರಣವಾಯಿತು ಎಂದು ತಿಳಿಸಿದರು.

ಯಾವುದೇ ಜಾತಿ, ಧರ್ಮ ಇಲ್ಲದೆ ಶೋಷಿತರ ಪರವಾಗಿ ಕೆಲಸ ಮಾಡಿಕೊಂಡು ಬಂದರು. ಹಣಕಾಸು ಇರಲಿಲ್ಲ. ಪತ್ರಿಕೆ ಓದುವರು ಇರಲಿಲ್ಲ. ಹೀಗಿದ್ದರೂ ತಮ್ಮ ಹೆಗಲ ಮೇಲೆ ಹಾಕಿದ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಕಷ್ಟಪಟ್ಟು ಪತ್ರಿಕೆ ಬೆಳೆಸಿದರು. ಪತ್ರಿಕೆ ನಡೆಸಲು ಸಾಧ್ಯವಾಗದೆ ವಾಪಸ್ ಹೋಗುವ ಮನಸ್ಸು ಮಾಡಿದಾಗ ದೇವನೂರ ಮಹಾದೇವ ಸೇರಿದಂತೆ ಅನೇಕರು ನೈತಿಕ ಸ್ಥೈರ್ಯ ತುಂಬಿ ಸಹಾಯ ಮಾಡಿದರು. ನಂತರ ಪತ್ರಿಕೆ ಓದುಗರನ್ನು ತಲುಪಿ ಜನಪ್ರಿಯತೆ ಗಳಿಸಿಕೊಂಡಿತು. ಕುಗ್ರಾಮದಲ್ಲಿ ‘ಆಂದೋಲನ’ ಓದುವ ಬಳಗವೇ ಹುಟ್ಟಿಕೊಂಡಿತು ಎಂದು ನುಡಿದರು.

ನಾನು ಕಾಂಗ್ರೆಸ್ ಪಕ್ಷ ಬಿಟ್ಟಾಗ ಬಹಳ ನೊಂದುಕೊಂಡಿದ್ದರು. ಸ್ವಲ್ಪ ದಿನಗಳ ಕಾಲ ಮಾತು ಬಿಟ್ಟಿದ್ದರು. ಆದರೆ, ನಾನು ಪಕ್ಷ ಬಿಟ್ಟರೂ ಸಿದ್ಧಾಂತ ಬಿಡಲಿಲ್ಲ ಎನ್ನುವುದು ಗೊತ್ತಾದ ಮೇಲೆ ಮತ್ತೆ ಮಾತನಾಡಿಸಲು ಶುರು ಮಾಡಿದರು. ಕೋಟಿ ಅವರು ನಮ್ಮಿಂದ ದೈಹಿಕವಾಗಿ ದೂರವಾದರೂ ಭೌತಿಕವಾಗಿ ಜೊತೆಗಿದ್ದಾರೆ ಎಂದರು.


‘ಆಂದೋಲನ’ ಅಂದರೆ ರಾಜಶೇಖರ ಕೋಟಿ, ಕೋಟಿ ಅಂದರೆ ‘ಆಂದೋಲನ’ವಾಗಿದೆ. ದೃಶ್ಯ ಮಾಧ್ಯಮದ ಮುಂದೆ ಸುದ್ದಿ ಮಾಧ್ಯಮಕ್ಕೆ ದಿನೇ ದಿನೇ ಬೆಲೆ ಜಾಸ್ತಿಯಾಗುತ್ತಿದೆೆಯೇ ಹೊರತು ಕಡಿಮೆಯಾಗಿಲ್ಲ. ಬದ್ಧತೆ ಮತ್ತು ಕಾಳಜಿ ಇಟ್ಟುಕೊಂಡು ಕೆಲಸ ಮಾಡಿದರೆ ಪತ್ರಿಕಾ ಧರ್ಮದ ಬೆಲೆಯೂ ಹೆಚ್ಚಾಗಲಿದೆ. ನಾನಿನ್ನೂ ಮೊದಲು ‘ಆಂದೋಲನ’, ನಂತರ ಮೈಸೂರು ಮಿತ್ರ, ಆಮೇಲೆ ರಾಜ್ಯ ಮಟ್ಟದ ಪತ್ರಿಕೆಗಳನ್ನು ಓದುತ್ತಿದ್ದೇನೆ. ನಿಷ್ಪಕ್ಷಪಾತ ಸುದ್ದಿಗಳು ಬರಬೇಕು.

-ವಿ.ಶ್ರೀನಿವಾಸಪ್ರಸಾದ್, ಸಂಸದರು.

andolanait

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

7 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

9 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

10 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

10 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

10 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

10 hours ago