ಆಂದೋಲನ 50

ಸಿದ್ಧಾಂತಕ್ಕೆ ಬದ್ಧವಾಗಿ ಕೊನೆ ತನಕವೂ ರಾಜಿಯಾಗದ ಕೋಟಿ : ಪ್ರಸಾದ್‌

ತಿ.ನರಸೀಪುರದಲ್ಲಿ ನಡೆದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ಉದ್ಘಾಟಿಸಿದ ಸಂಸದರು

ತಿ.ನರಸೀಪುರ: ರಾಜಶೇಖರ ಕೋಟಿ ಅವರು ಸಿದ್ಧಾಂತವನ್ನು ಬದಿಗೊತ್ತಿ ಅವಕಾಶವಾದಿಯಾಗದೆ ಯಾರೊಂದಿಗೂ ರಾಜಿಯಾಗಲಿಲ್ಲ. ತಮ್ಮ ನಡೆ, ನುಡಿಯಂತೆ ಬದುಕುವ ಜೊತೆಗೆ ಸಮಾಜವಾದಿಯಾಗಿಯೇ ಉಳಿದು ಕೊನೆ ತನಕವೂ ಸಿದ್ಧಾಂತವನ್ನು ಉಳಿಸಿಕೊಂಡರು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯ ವಿ.ಶ್ರೀನಿವಾಸಪ್ರಸಾದ್ ಬಣ್ಣಿಸಿದರು.

ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜವಾದಿಗಳಾಗಿದ್ದ ಜಯಪ್ರಕಾಶ್ ನಾರಾಯಣ್, ರಾಮ ಮನೋಹರ ಲೋಹಿಯಾ, ಜಾರ್ಜ್ ಫರ್ನಾಂಡೀಸ್ ಅವರಂತೆ ರಾಜಶೇಖರ ಕೋಟಿ ಅವರು ನಡೆದುಕೊಂಡವರು. ಆರಂಭದಿಂದ ಕೊನೆಯ ತನಕವೂ ತಮ್ಮ ಸಿದ್ಧಾಂತವನ್ನು ಬಿಟ್ಟುಕೊಡಲಿಲ್ಲ. ಪತ್ರಿಕೆಗಾಗಿ ಅವಕಾಶವಾದಿಯಾಗಲಿಲ್ಲ. ಯಾವುದಕ್ಕೂ ರಾಜಿಯಾಗದೆ ಗಟ್ಟಿಯಾಗಿ ನಿಂತವರು ಎಂದು ಗುಣಗಾನ ಮಾಡಿದರು.

ಈಗಾಗಲೇ 50 ವರ್ಷದ ಸಾರ್ಥಕ ಪಯಣ ಕಾರ್ಯಕ್ರಮ ಮೈಸೂರಿನಲ್ಲಿ ಚಾಲನೆಗೊಂಡಿತು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ನಂಜನಗೂಡು ತಾಲ್ಲೂಕಿನಲ್ಲೂ ‘ಆಂದೋಲನ’ ಪತ್ರಿಕೆಯ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆದಿದೆ. ನನ್ನ ಮತ್ತು ‘ಆಂದೋಲನ’ ಪತ್ರಿಕೆಯ ನಡುವಿನ ಸಂಬಂಧ, ಸಂಪರ್ಕ 47 ವರ್ಷಗಳಿಂದಲೂ ಇದೆ. ರಾಜಶೇಖರ ಕೋಟಿ ಅವರು ಅತ್ಯಂತ ಆತ್ಮೀಯರಾಗಿದ್ದರು. ಅವರೊಂದಿಗೆ ತುಂಬಾ ಒಡನಾಟ ಇತ್ತು ಎಂದು ಹೇಳಿದರು.

ರಾಜಶೇಖರ ಕೋಟಿ ಸಮಾಜವಾದಿ, ಲೋಹಿಯವಾದಿ ಚಿಂತಕರಾಗಿದ್ದರು. ಮಾನವೀಯ ಸಂಬಂಧ ಇಟ್ಟುಕೊಂಡು ಚಳವಳಿಯಲ್ಲಿ ಭಾಗಿಯಾಗುತ್ತಿದ್ದರು. ಸಮಾಜದಲ್ಲಿ ಪ್ರಪಾತಕ್ಕೆ ತುಳಿಯಲ್ಪಟ್ಟವರು ಮುಂದೆ ಬರಬೇಕು ಎನ್ನುವ ಕಾರಣಕ್ಕಾಗಿ ಶ್ರಮಿಸಿದರು. ಸಮಾಜವಾದಿ ಚಿಂತಕರ ಬಳಗವೇ ಮೈಸೂರಿನಲ್ಲಿ ಇತ್ತು. ಪಾಟೀಲ್ ಪುಟ್ಟಪ್ಪ ನಡೆಸುತ್ತಿದ್ದ ‘ಪ್ರಪಂಚ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ ಕೋಟಿ ಅವರು ಬಹಳ ಅನುಭವ ಪಡೆದುಕೊಂಡು ಮೈಸೂರಿಗೆ ಬಂದು ಪತ್ರಿಕೆ ಶುರು ಮಾಡಿದ್ದರಿಂದ ಸ್ನೇಹಿತರ ಬಳಗದೊಂದಿಗೆ ಬೆಳೆಯಲು ಕಾರಣವಾಯಿತು ಎಂದು ತಿಳಿಸಿದರು.

ಯಾವುದೇ ಜಾತಿ, ಧರ್ಮ ಇಲ್ಲದೆ ಶೋಷಿತರ ಪರವಾಗಿ ಕೆಲಸ ಮಾಡಿಕೊಂಡು ಬಂದರು. ಹಣಕಾಸು ಇರಲಿಲ್ಲ. ಪತ್ರಿಕೆ ಓದುವರು ಇರಲಿಲ್ಲ. ಹೀಗಿದ್ದರೂ ತಮ್ಮ ಹೆಗಲ ಮೇಲೆ ಹಾಕಿದ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಕಷ್ಟಪಟ್ಟು ಪತ್ರಿಕೆ ಬೆಳೆಸಿದರು. ಪತ್ರಿಕೆ ನಡೆಸಲು ಸಾಧ್ಯವಾಗದೆ ವಾಪಸ್ ಹೋಗುವ ಮನಸ್ಸು ಮಾಡಿದಾಗ ದೇವನೂರ ಮಹಾದೇವ ಸೇರಿದಂತೆ ಅನೇಕರು ನೈತಿಕ ಸ್ಥೈರ್ಯ ತುಂಬಿ ಸಹಾಯ ಮಾಡಿದರು. ನಂತರ ಪತ್ರಿಕೆ ಓದುಗರನ್ನು ತಲುಪಿ ಜನಪ್ರಿಯತೆ ಗಳಿಸಿಕೊಂಡಿತು. ಕುಗ್ರಾಮದಲ್ಲಿ ‘ಆಂದೋಲನ’ ಓದುವ ಬಳಗವೇ ಹುಟ್ಟಿಕೊಂಡಿತು ಎಂದು ನುಡಿದರು.

ನಾನು ಕಾಂಗ್ರೆಸ್ ಪಕ್ಷ ಬಿಟ್ಟಾಗ ಬಹಳ ನೊಂದುಕೊಂಡಿದ್ದರು. ಸ್ವಲ್ಪ ದಿನಗಳ ಕಾಲ ಮಾತು ಬಿಟ್ಟಿದ್ದರು. ಆದರೆ, ನಾನು ಪಕ್ಷ ಬಿಟ್ಟರೂ ಸಿದ್ಧಾಂತ ಬಿಡಲಿಲ್ಲ ಎನ್ನುವುದು ಗೊತ್ತಾದ ಮೇಲೆ ಮತ್ತೆ ಮಾತನಾಡಿಸಲು ಶುರು ಮಾಡಿದರು. ಕೋಟಿ ಅವರು ನಮ್ಮಿಂದ ದೈಹಿಕವಾಗಿ ದೂರವಾದರೂ ಭೌತಿಕವಾಗಿ ಜೊತೆಗಿದ್ದಾರೆ ಎಂದರು.


‘ಆಂದೋಲನ’ ಅಂದರೆ ರಾಜಶೇಖರ ಕೋಟಿ, ಕೋಟಿ ಅಂದರೆ ‘ಆಂದೋಲನ’ವಾಗಿದೆ. ದೃಶ್ಯ ಮಾಧ್ಯಮದ ಮುಂದೆ ಸುದ್ದಿ ಮಾಧ್ಯಮಕ್ಕೆ ದಿನೇ ದಿನೇ ಬೆಲೆ ಜಾಸ್ತಿಯಾಗುತ್ತಿದೆೆಯೇ ಹೊರತು ಕಡಿಮೆಯಾಗಿಲ್ಲ. ಬದ್ಧತೆ ಮತ್ತು ಕಾಳಜಿ ಇಟ್ಟುಕೊಂಡು ಕೆಲಸ ಮಾಡಿದರೆ ಪತ್ರಿಕಾ ಧರ್ಮದ ಬೆಲೆಯೂ ಹೆಚ್ಚಾಗಲಿದೆ. ನಾನಿನ್ನೂ ಮೊದಲು ‘ಆಂದೋಲನ’, ನಂತರ ಮೈಸೂರು ಮಿತ್ರ, ಆಮೇಲೆ ರಾಜ್ಯ ಮಟ್ಟದ ಪತ್ರಿಕೆಗಳನ್ನು ಓದುತ್ತಿದ್ದೇನೆ. ನಿಷ್ಪಕ್ಷಪಾತ ಸುದ್ದಿಗಳು ಬರಬೇಕು.

-ವಿ.ಶ್ರೀನಿವಾಸಪ್ರಸಾದ್, ಸಂಸದರು.

andolanait

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

8 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

8 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

8 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

8 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

8 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

8 hours ago