ಆಂದೋಲನ 50

ಕೋಟೆಗೆ ಕೋಟಿಯವರ ನಂಟು ನೂರೆಂಟು

-ಮಂಜು ಕೋಟೆ

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, ಬಡವರ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ಹತ್ತಿರದಿಂದ ಕಂಡಿದ್ದರಿಂದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರೊಂದಿಗೆ ಅವರ ನಂಟು ಬಲವಾಗಿತ್ತು.

ಅದು ೧೯೮೨-೮೩ರ ಸಂದರ್ಭ. ತಾಲ್ಲೂಕಿನ ದೇವಲಾಪುರ ಗ್ರಾಮದ ಅರಣ್ಯ ಇಲಾಖೆಯ ವಶದಲ್ಲಿದ್ದ ಸುಮಾರು ೩೫೦ ಎಕರೆ ಕುರುಚಲು ಕಾಡನ್ನು ಎಲ್ಲಾ ವರ್ಗದ ಸುಮಾರು ೧೫೦ ಭೂಹೀನ ಬಡ ರೈತರಿಗೆ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಬೆಳೆಯನ್ನು ಹಾಕಲಾಗಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹಂತದಲ್ಲಿ ಅರಣ್ಯ ಇಲಾಖೆ ಜಾಗ ತನಗೆ ಸೇರಿದ್ದೆಂದು ಅದನ್ನು ವಶಪಡಿಸಿಕೊಳ್ಳುವ ಜೊತೆಗೆ ಹಂಚಿಕೆಯ ಮುಂದಾಳತ್ವ ವಹಿಸಿದ್ದವರ ಮೇಲೆ ಪ್ರಕರಣ ಹಾಕಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಂತ ಆಂದೋಲನ ಪತ್ರಿಕೆ ಕಾನೂನು ಮತ್ತು ರಾಜಕೀಯ ಪರಿಹಾರದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಲು ಶ್ರಮಿಸಿತು.

೧೯೯೬ ಡಿ.೨೩ರಂದು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಶೋಷಿತ ಶಕ್ತಿಗಳ ಐಕ್ಯತಾ ಸಮಾವೇಶಕ್ಕೆ ಸುಮಾರು ೩೦೦೦ದಷ್ಟು ಜನ ೨೫-೩೦ ಲಾರಿಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಉರುಳಿ ಬಿದ್ದು ೧೦ ಜನ ಮೃತಪಟ್ಟರು. ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಸರಕಾರದಿಂದ ಮೃತರ ಕುಟುಂಬಕ್ಕಾಗಲಿ, ಗಾಯಾಳುಗಳಿಗಾಗಲಿ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಶೇಖರ ಕೋಟಿಯವರು, ಪತ್ರಿಕೆಯ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಮೂಲಕ ನೊಂದ ಕುಟುಂಬಗಳಿಗೆ ನೆರವು ನೀಡಿದರು. ದೇವಲಾಪುರ ಗ್ರಾಮಕ್ಕೆ ಬಂದು ಅದನ್ನು ವಿತರಿಸುವ ಮೂಲಕ ಪತ್ರಿಕೆ ನೊಂದವರ ಪರವಾಗಿದೆ ಎಂಬ ಸಂದೇಶ ಸಾರಿದರು.

ಸದಾ ಜನಜಂಗುಳಿಯಿಂದ ಕೂಡಿದ ಎಚ್.ಡಿ. ಕೋಟೆ ಪಟ್ಟಣ ಮತ್ತು ಹ್ಯಾಂಡ್ ಪೋಸ್ಟಿನಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಜೊತೆಗೆ ತಾಲ್ಲೂಕಿನ ಪ್ರತಿ ಸಮಸ್ಯೆಗಳನ್ನು ಜನಪ್ರತಿನಿಧಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ರೈತ ಚಳುವಳಿಗಳು, ದಲಿತಪರ ಚಳುವಳಿಗಳಲ್ಲಿ ಬೆನ್ನೆಲುಬಾಗಿ ನಿಂತ ಕೋಟಿ ಅವರು ಸಾಕಷ್ಟು ಸಂಸ್ಥೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಮಾಜದ ಬದಲಾವಣೆಯ ಕನಸು ಕಂಡವರು.

ಮೈಸೂರು-ಮಾನಂದವಾಡಿ ಮತ್ತು ಕಬಿನಿ ರಸ್ತೆ ಅಭಿವೃದ್ಧಿಯಲ್ಲಿ ಕೋಟಿಯವರ ಪಾತ್ರವೂ ಇದೆ. ಆ ದಿನಗಳಲ್ಲಿ ತೀರ ಹದಗೆಟ್ಟಿದ್ದ ರಸ್ತೆಯ ಕುರಿತು ಪತ್ರಿಕೆಯಲ್ಲಿ ಸರಣಿ ವರದಿಗಳು ಬಂದ ಬಳಿಕವೇ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಕ್ಷೇತ್ರದ ಚುನಾಯಿತ ಶಾಸಕರೆಲ್ಲರೂ ಕೋಟಿ ಅವರ ನಿಕಟ ಸಂಬಂಧವಿಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿದ್ದರು.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

4 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

5 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

7 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

7 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

8 hours ago