ಆಂದೋಲನ 50

ಕೋಟೆಗೆ ಕೋಟಿಯವರ ನಂಟು ನೂರೆಂಟು

-ಮಂಜು ಕೋಟೆ

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, ಬಡವರ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ಹತ್ತಿರದಿಂದ ಕಂಡಿದ್ದರಿಂದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರೊಂದಿಗೆ ಅವರ ನಂಟು ಬಲವಾಗಿತ್ತು.

ಅದು ೧೯೮೨-೮೩ರ ಸಂದರ್ಭ. ತಾಲ್ಲೂಕಿನ ದೇವಲಾಪುರ ಗ್ರಾಮದ ಅರಣ್ಯ ಇಲಾಖೆಯ ವಶದಲ್ಲಿದ್ದ ಸುಮಾರು ೩೫೦ ಎಕರೆ ಕುರುಚಲು ಕಾಡನ್ನು ಎಲ್ಲಾ ವರ್ಗದ ಸುಮಾರು ೧೫೦ ಭೂಹೀನ ಬಡ ರೈತರಿಗೆ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಬೆಳೆಯನ್ನು ಹಾಕಲಾಗಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹಂತದಲ್ಲಿ ಅರಣ್ಯ ಇಲಾಖೆ ಜಾಗ ತನಗೆ ಸೇರಿದ್ದೆಂದು ಅದನ್ನು ವಶಪಡಿಸಿಕೊಳ್ಳುವ ಜೊತೆಗೆ ಹಂಚಿಕೆಯ ಮುಂದಾಳತ್ವ ವಹಿಸಿದ್ದವರ ಮೇಲೆ ಪ್ರಕರಣ ಹಾಕಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಂತ ಆಂದೋಲನ ಪತ್ರಿಕೆ ಕಾನೂನು ಮತ್ತು ರಾಜಕೀಯ ಪರಿಹಾರದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಲು ಶ್ರಮಿಸಿತು.

೧೯೯೬ ಡಿ.೨೩ರಂದು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಶೋಷಿತ ಶಕ್ತಿಗಳ ಐಕ್ಯತಾ ಸಮಾವೇಶಕ್ಕೆ ಸುಮಾರು ೩೦೦೦ದಷ್ಟು ಜನ ೨೫-೩೦ ಲಾರಿಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಉರುಳಿ ಬಿದ್ದು ೧೦ ಜನ ಮೃತಪಟ್ಟರು. ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಸರಕಾರದಿಂದ ಮೃತರ ಕುಟುಂಬಕ್ಕಾಗಲಿ, ಗಾಯಾಳುಗಳಿಗಾಗಲಿ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಶೇಖರ ಕೋಟಿಯವರು, ಪತ್ರಿಕೆಯ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಮೂಲಕ ನೊಂದ ಕುಟುಂಬಗಳಿಗೆ ನೆರವು ನೀಡಿದರು. ದೇವಲಾಪುರ ಗ್ರಾಮಕ್ಕೆ ಬಂದು ಅದನ್ನು ವಿತರಿಸುವ ಮೂಲಕ ಪತ್ರಿಕೆ ನೊಂದವರ ಪರವಾಗಿದೆ ಎಂಬ ಸಂದೇಶ ಸಾರಿದರು.

ಸದಾ ಜನಜಂಗುಳಿಯಿಂದ ಕೂಡಿದ ಎಚ್.ಡಿ. ಕೋಟೆ ಪಟ್ಟಣ ಮತ್ತು ಹ್ಯಾಂಡ್ ಪೋಸ್ಟಿನಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಜೊತೆಗೆ ತಾಲ್ಲೂಕಿನ ಪ್ರತಿ ಸಮಸ್ಯೆಗಳನ್ನು ಜನಪ್ರತಿನಿಧಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ರೈತ ಚಳುವಳಿಗಳು, ದಲಿತಪರ ಚಳುವಳಿಗಳಲ್ಲಿ ಬೆನ್ನೆಲುಬಾಗಿ ನಿಂತ ಕೋಟಿ ಅವರು ಸಾಕಷ್ಟು ಸಂಸ್ಥೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಮಾಜದ ಬದಲಾವಣೆಯ ಕನಸು ಕಂಡವರು.

ಮೈಸೂರು-ಮಾನಂದವಾಡಿ ಮತ್ತು ಕಬಿನಿ ರಸ್ತೆ ಅಭಿವೃದ್ಧಿಯಲ್ಲಿ ಕೋಟಿಯವರ ಪಾತ್ರವೂ ಇದೆ. ಆ ದಿನಗಳಲ್ಲಿ ತೀರ ಹದಗೆಟ್ಟಿದ್ದ ರಸ್ತೆಯ ಕುರಿತು ಪತ್ರಿಕೆಯಲ್ಲಿ ಸರಣಿ ವರದಿಗಳು ಬಂದ ಬಳಿಕವೇ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಕ್ಷೇತ್ರದ ಚುನಾಯಿತ ಶಾಸಕರೆಲ್ಲರೂ ಕೋಟಿ ಅವರ ನಿಕಟ ಸಂಬಂಧವಿಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿದ್ದರು.

andolana

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

54 seconds ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

44 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

1 hour ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago