ಆಂದೋಲನ 50

ಕೋಟೆಗೆ ಕೋಟಿಯವರ ನಂಟು ನೂರೆಂಟು

-ಮಂಜು ಕೋಟೆ

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, ಬಡವರ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ಹತ್ತಿರದಿಂದ ಕಂಡಿದ್ದರಿಂದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರೊಂದಿಗೆ ಅವರ ನಂಟು ಬಲವಾಗಿತ್ತು.

ಅದು ೧೯೮೨-೮೩ರ ಸಂದರ್ಭ. ತಾಲ್ಲೂಕಿನ ದೇವಲಾಪುರ ಗ್ರಾಮದ ಅರಣ್ಯ ಇಲಾಖೆಯ ವಶದಲ್ಲಿದ್ದ ಸುಮಾರು ೩೫೦ ಎಕರೆ ಕುರುಚಲು ಕಾಡನ್ನು ಎಲ್ಲಾ ವರ್ಗದ ಸುಮಾರು ೧೫೦ ಭೂಹೀನ ಬಡ ರೈತರಿಗೆ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಬೆಳೆಯನ್ನು ಹಾಕಲಾಗಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹಂತದಲ್ಲಿ ಅರಣ್ಯ ಇಲಾಖೆ ಜಾಗ ತನಗೆ ಸೇರಿದ್ದೆಂದು ಅದನ್ನು ವಶಪಡಿಸಿಕೊಳ್ಳುವ ಜೊತೆಗೆ ಹಂಚಿಕೆಯ ಮುಂದಾಳತ್ವ ವಹಿಸಿದ್ದವರ ಮೇಲೆ ಪ್ರಕರಣ ಹಾಕಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಂತ ಆಂದೋಲನ ಪತ್ರಿಕೆ ಕಾನೂನು ಮತ್ತು ರಾಜಕೀಯ ಪರಿಹಾರದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಲು ಶ್ರಮಿಸಿತು.

೧೯೯೬ ಡಿ.೨೩ರಂದು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಶೋಷಿತ ಶಕ್ತಿಗಳ ಐಕ್ಯತಾ ಸಮಾವೇಶಕ್ಕೆ ಸುಮಾರು ೩೦೦೦ದಷ್ಟು ಜನ ೨೫-೩೦ ಲಾರಿಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಉರುಳಿ ಬಿದ್ದು ೧೦ ಜನ ಮೃತಪಟ್ಟರು. ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಸರಕಾರದಿಂದ ಮೃತರ ಕುಟುಂಬಕ್ಕಾಗಲಿ, ಗಾಯಾಳುಗಳಿಗಾಗಲಿ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಶೇಖರ ಕೋಟಿಯವರು, ಪತ್ರಿಕೆಯ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಮೂಲಕ ನೊಂದ ಕುಟುಂಬಗಳಿಗೆ ನೆರವು ನೀಡಿದರು. ದೇವಲಾಪುರ ಗ್ರಾಮಕ್ಕೆ ಬಂದು ಅದನ್ನು ವಿತರಿಸುವ ಮೂಲಕ ಪತ್ರಿಕೆ ನೊಂದವರ ಪರವಾಗಿದೆ ಎಂಬ ಸಂದೇಶ ಸಾರಿದರು.

ಸದಾ ಜನಜಂಗುಳಿಯಿಂದ ಕೂಡಿದ ಎಚ್.ಡಿ. ಕೋಟೆ ಪಟ್ಟಣ ಮತ್ತು ಹ್ಯಾಂಡ್ ಪೋಸ್ಟಿನಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಜೊತೆಗೆ ತಾಲ್ಲೂಕಿನ ಪ್ರತಿ ಸಮಸ್ಯೆಗಳನ್ನು ಜನಪ್ರತಿನಿಧಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ರೈತ ಚಳುವಳಿಗಳು, ದಲಿತಪರ ಚಳುವಳಿಗಳಲ್ಲಿ ಬೆನ್ನೆಲುಬಾಗಿ ನಿಂತ ಕೋಟಿ ಅವರು ಸಾಕಷ್ಟು ಸಂಸ್ಥೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಮಾಜದ ಬದಲಾವಣೆಯ ಕನಸು ಕಂಡವರು.

ಮೈಸೂರು-ಮಾನಂದವಾಡಿ ಮತ್ತು ಕಬಿನಿ ರಸ್ತೆ ಅಭಿವೃದ್ಧಿಯಲ್ಲಿ ಕೋಟಿಯವರ ಪಾತ್ರವೂ ಇದೆ. ಆ ದಿನಗಳಲ್ಲಿ ತೀರ ಹದಗೆಟ್ಟಿದ್ದ ರಸ್ತೆಯ ಕುರಿತು ಪತ್ರಿಕೆಯಲ್ಲಿ ಸರಣಿ ವರದಿಗಳು ಬಂದ ಬಳಿಕವೇ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಕ್ಷೇತ್ರದ ಚುನಾಯಿತ ಶಾಸಕರೆಲ್ಲರೂ ಕೋಟಿ ಅವರ ನಿಕಟ ಸಂಬಂಧವಿಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿದ್ದರು.

andolana

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

5 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

17 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago