ಆಂದೋಲನ 50

ಕೋಟೆಗೆ ಕೋಟಿಯವರ ನಂಟು ನೂರೆಂಟು

-ಮಂಜು ಕೋಟೆ

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, ಬಡವರ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕೊರತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ಹತ್ತಿರದಿಂದ ಕಂಡಿದ್ದರಿಂದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರೊಂದಿಗೆ ಅವರ ನಂಟು ಬಲವಾಗಿತ್ತು.

ಅದು ೧೯೮೨-೮೩ರ ಸಂದರ್ಭ. ತಾಲ್ಲೂಕಿನ ದೇವಲಾಪುರ ಗ್ರಾಮದ ಅರಣ್ಯ ಇಲಾಖೆಯ ವಶದಲ್ಲಿದ್ದ ಸುಮಾರು ೩೫೦ ಎಕರೆ ಕುರುಚಲು ಕಾಡನ್ನು ಎಲ್ಲಾ ವರ್ಗದ ಸುಮಾರು ೧೫೦ ಭೂಹೀನ ಬಡ ರೈತರಿಗೆ ಹಂಚಿಕೆ ಮಾಡಲಾಗಿತ್ತು. ಅಲ್ಲಿ ಬೆಳೆಯನ್ನು ಹಾಕಲಾಗಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹಂತದಲ್ಲಿ ಅರಣ್ಯ ಇಲಾಖೆ ಜಾಗ ತನಗೆ ಸೇರಿದ್ದೆಂದು ಅದನ್ನು ವಶಪಡಿಸಿಕೊಳ್ಳುವ ಜೊತೆಗೆ ಹಂಚಿಕೆಯ ಮುಂದಾಳತ್ವ ವಹಿಸಿದ್ದವರ ಮೇಲೆ ಪ್ರಕರಣ ಹಾಕಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ರೈತರ ಬೆಂಬಲಕ್ಕೆ ನಿಂತ ಆಂದೋಲನ ಪತ್ರಿಕೆ ಕಾನೂನು ಮತ್ತು ರಾಜಕೀಯ ಪರಿಹಾರದ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಲು ಶ್ರಮಿಸಿತು.

೧೯೯೬ ಡಿ.೨೩ರಂದು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಶೋಷಿತ ಶಕ್ತಿಗಳ ಐಕ್ಯತಾ ಸಮಾವೇಶಕ್ಕೆ ಸುಮಾರು ೩೦೦೦ದಷ್ಟು ಜನ ೨೫-೩೦ ಲಾರಿಗಳಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಉರುಳಿ ಬಿದ್ದು ೧೦ ಜನ ಮೃತಪಟ್ಟರು. ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಸರಕಾರದಿಂದ ಮೃತರ ಕುಟುಂಬಕ್ಕಾಗಲಿ, ಗಾಯಾಳುಗಳಿಗಾಗಲಿ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಶೇಖರ ಕೋಟಿಯವರು, ಪತ್ರಿಕೆಯ ಮೂಲಕ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಮೂಲಕ ನೊಂದ ಕುಟುಂಬಗಳಿಗೆ ನೆರವು ನೀಡಿದರು. ದೇವಲಾಪುರ ಗ್ರಾಮಕ್ಕೆ ಬಂದು ಅದನ್ನು ವಿತರಿಸುವ ಮೂಲಕ ಪತ್ರಿಕೆ ನೊಂದವರ ಪರವಾಗಿದೆ ಎಂಬ ಸಂದೇಶ ಸಾರಿದರು.

ಸದಾ ಜನಜಂಗುಳಿಯಿಂದ ಕೂಡಿದ ಎಚ್.ಡಿ. ಕೋಟೆ ಪಟ್ಟಣ ಮತ್ತು ಹ್ಯಾಂಡ್ ಪೋಸ್ಟಿನಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಜೊತೆಗೆ ತಾಲ್ಲೂಕಿನ ಪ್ರತಿ ಸಮಸ್ಯೆಗಳನ್ನು ಜನಪ್ರತಿನಿಧಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ರೈತ ಚಳುವಳಿಗಳು, ದಲಿತಪರ ಚಳುವಳಿಗಳಲ್ಲಿ ಬೆನ್ನೆಲುಬಾಗಿ ನಿಂತ ಕೋಟಿ ಅವರು ಸಾಕಷ್ಟು ಸಂಸ್ಥೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಮಾಜದ ಬದಲಾವಣೆಯ ಕನಸು ಕಂಡವರು.

ಮೈಸೂರು-ಮಾನಂದವಾಡಿ ಮತ್ತು ಕಬಿನಿ ರಸ್ತೆ ಅಭಿವೃದ್ಧಿಯಲ್ಲಿ ಕೋಟಿಯವರ ಪಾತ್ರವೂ ಇದೆ. ಆ ದಿನಗಳಲ್ಲಿ ತೀರ ಹದಗೆಟ್ಟಿದ್ದ ರಸ್ತೆಯ ಕುರಿತು ಪತ್ರಿಕೆಯಲ್ಲಿ ಸರಣಿ ವರದಿಗಳು ಬಂದ ಬಳಿಕವೇ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಕ್ಷೇತ್ರದ ಚುನಾಯಿತ ಶಾಸಕರೆಲ್ಲರೂ ಕೋಟಿ ಅವರ ನಿಕಟ ಸಂಬಂಧವಿಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿದ್ದರು.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

11 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

12 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

12 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

22 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

22 hours ago