ಆಂದೋಲನ 50

ವೃತ್ತಿ ಧರ್ಮಕ್ಕೆ ವಿರುದ್ಧವಾಗಿ ಕೋಟಿ ಅವರ ಬರವಣಿಗೆ ಇರಲಿಲ್ಲ : ಎಚ್‌ಸಿಎಂ

ಸಾರ್ಥಕ ಪಯಣ ಸಮಾರಂಭದಲ್ಲಿ ರಾಜಶೇಖರ ಕೋಟಿ ಅವರ ಬದುಕುನ್ನು ಸ್ಮರಿಸಿದ ಮಾಜಿ ಸಚಿವರು 

ತಿ.ನರಸೀಪುರ: ಧರ್ಮ, ಜಾತಿ, ಗುಂಪು, ಪಂಗಡದ ಬಗ್ಗೆ ಇರದೇ ವಸ್ತು ನಿಷ್ಠವಾಗಿ ಪತ್ರಿಕೆಯನ್ನು ನಡೆಸಿಕೊಂಡು ಬಂದಿದ್ದ ರಾಜಶೇಖರ ಕೋಟಿ ಅವರು ವೃತ್ತಿಧರ್ಮಕ್ಕೆ ವಿರುದ್ಧ ಬರವಣಿಗೆ ಮಾಡಲಿಲ್ಲ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ತಿ.ನರಸೀಪುರ ತಾಲ್ಲೂಕಿನ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೋಟಿ ಅವರು ಜಾತಿ, ಧರ್ಮದ ಪ್ರೇರೇಪಣೆಗೆ ಒಳಗಾದವರಲ್ಲ. ಪಾಟೀಲ್ ಪುಟ್ಟಪ್ಪ, ಪಿ.ಲಂಕೇಶ್, ಪ್ರೊ.ಕೆ.ರಾಮದಾಸ್, ದೇವನೂರ ಮಹಾದೇವ, ರಘುರಾಮ್ ಶೆಟ್ಟಿ, ವೇದಾಂತ ಹೆಮ್ಮಿಗೆ, ಪ್ರೊ.ಲಿಂಗದೇವರು ಹಳೆಮನೆ, ಪ.ಮಲ್ಲೇಶ್ ಅವರಂತಹವರ ಜತೆಗೂಡಿ ಬಂದವರು. ಒಬ್ಬ ಹೋರಾಟಗಾರನಾಗಿದ್ದರಿಂದಲೇ ದಲಿತರು, ಕಾರ್ಮಿಕ, ರೈತ ಚಳವಳಿಯನ್ನು ಬೆಂಬಲಿಸಿ ಪ್ರೇರಣೆಯಾಗಿ ನಿಲ್ಲುತ್ತಿದ್ದರು ಎಂದು ಹೇಳಿದರು.

‘ಆಂದೋಲನ’ ಜನರ ಪರ ಮತ್ತು ಅಭಿವೃದ್ಧಿ ಪರವಾಗಿ ಇರುತ್ತದೆ. ಪ್ರಚೋದನಾಕಾರಿ ಮತ್ತು ಪತ್ರಿಕಾ ಮೂಲಧರ್ಮಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳದಂತೆ ನೋಡಿಕೊಂಡು ೫೦ ವರ್ಷಗಳ ಕಾಲ ಅದರಲ್ಲಿ ಯಶಸ್ವಿಯಾಗಿ ನಡೆದುಕೊಂಡಿದ್ದಾರೆ. ಕೋಟಿ ನಿಜವಾಗಿಯೂ ಕೋಟಿ. ಜಾತಿ, ಧರ್ಮ, ಗುಂಪು ಸೀಮಿತವಾಗಿಲ್ಲದೆ ಕೆಲಸ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ದೇಶ ಬಂಡವಾಳಶಾಹಿಗಳ ಕಪಿಮುಷ್ಠಿಯ ಹಿಡಿತದಲ್ಲಿ ಸಿಲುಕಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವ್ಯವಸ್ಥೆಯನ್ನು ಕತ್ತು ಹಿಸುಕಿ ಅದರ ಆಶುಂವನ್ನು ಭಂಗಗೊಳಿಸುವ ಕೆಲಸ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಮೊದಲಿಗಿಂತಲೂ ಈಗ ಹೆಚ್ಚು ಜವಾಬ್ದಾರಿಯಿಂದ ಪತ್ರಿಕಾಧರ್ಮ ಅರಿತು ಕೆಲಸ ಮಾಡಬೇಕಾಗಿದೆ ಎಂದರು.
ಜಿ.ಜನಾರ್ಧನರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಮಾಡಿದ್ದನ್ನೂ ದೃಶ್ಯ ಮಾಧ್ಯಮದಲ್ಲಿ ದಿನಗಟ್ಟಲೇ ತೋರಿಸಲಾಗುತ್ತದೆ. ಆದರೆ, ಬೆಂಗಳೂರಿನಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಮಾಡಿದರೆ ಆ ದೃಷ್ಯವನ್ನು ಒಂದು ಕ್ಷಣವೂ ತೋರಿಸಲ್ಲ ಅಂದರೆ ಮನಸ್ಸಿಗೆ ಎಷ್ಟು ನೋವಾಗಬಾರದು ಎಂದು ಪ್ರಶ್ನಿಸಿದರು.

ರಾಜಶೇಖರ ಕೋಟಿ ಅವರಾಗಲೀ ಅಥವಾ ‘ಆಂದೋಲನ’ವಾಗಲಿ ಎಂದೂ ಜಾಹೀರಾತಿನ ಹಿಂದೆ ಬಿದ್ದವರಲ್ಲ. ಸದಾ ಓದುಗರನ್ನು ನೋಡುವುದು ಅವರ ಬಯಕೆಯಾಗಿದೆ ಎಂದು ನುಡಿದರು.

ಇಂದು ನಾವು ನಗಬೇಕು ಅಥವಾ ನಗಿಸಬೇಕು. ಅದೇ ನಿಜವಾದ ಪ್ರಜಾಪ್ರಭುತ್ವ. ಮುಖವನ್ನು ಆ ಕಡೆ ತಿರುಗಿಸಿಕೊಳ್ಳುವುದು, ಮುಖ ಗಂಟಾಕಿಕೊಳ್ಳುವುದು ಅಲ್ಲ. ಎದುರಿಗೆ ಬಂದು ಮಾತನಾಡಿಸಿದರೆ ಮುಖ ಬೇರೆ ಕಡೆಗೆ ತಿರುಗಿಸುವ ಬದಲಿಗೆ ಅವರನ್ನು ಮಾತನಾಡಿಸಿಬಿಟ್ಟರೆ ಮನಸ್ಸು ಹಗುರವಾಗಲಿದೆ ಎಂಬುದನ್ನು ಅರಿಯಬೇಕು ಎಂದರು.


‘ಆಂದೋಲನ’ ಐವತ್ತು ವರ್ಷಗಳನ್ನು ಕಳೆದರೂ ಮದುವಣಗಿತ್ತಿಯ ಸಡಗರ ಕಡಿಮೆ ಮಾಡಿಕೊಂಡಿಲ್ಲ. ಪತ್ರಿಕಾ ಧರ್ಮವನ್ನು ಬಿಟ್ಟು ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ಪತ್ರಿಕೆಯು ಜನರ ನಂಬಿಕೆ ಉಳಿಸಿಕೊಂಡು ವಿಶ್ವಾರ್ಹತೆ ಇರಿಸಿಕೊಂಡಿದೆ. ಪ್ರಾದೇಶಿಕತೆ ಉಳಿಸಿಕೊಂಡು ರಾಷ್ಟ್ರೀಯ ಮಾನ್ಯತೆ ಪಡೆದಿದೆ. ಪತ್ರಿಕೆಯನ್ನು ನಡೆಸುವುದು ಸುಲಭವಲ್ಲದಿದ್ದರೂ ಅದನ್ನು ಬೆಳೆಸಿರುವುದು ದೊಡ್ಡ ಸಾಧನೆ. ರಾಜಶೇಖರ ಕೋಟಿ ಅವರನ್ನು ನೆನಪಿಸಿಕೊಳ್ಳದೆ ‘ಆಂದೋಲನ’ದ ಬಗ್ಗೆ ಮಾತನಾಡಿದರೆ ಅಪೂರ್ಣವಾಗಲಿದೆ.

-ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಸಚಿವರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago