ʼಆಂದೋಲನ ೫೦ ಸಾರ್ಥಕ ಪಯಣ’ ಸಂತೋಷದ ಸಂಗತಿ. ರಾಜಶೇಖರ ಕೋಟಿ ಅವರು ಸದಾ ಧರಿಸುತ್ತಿದ್ದ ಕೆಂಪು ಟಿ-ಶರ್ಟ್ ಅನ್ನು ಆಹ್ವಾನ ಪತ್ರಿಕೆಯೇ ನೆನಪಿಗೆ ತರುತ್ತಿದೆ. ‘ಆಂದೋಲನ’ ದಿನಪತ್ರಿಕೆ ಮೈಸೂರಿನ ಸಾಕ್ಷಿಪ್ರಜ್ಞೆಯಂತಿರುವ ಒಂದು ಪ್ರಮುಖ ಸುದ್ದಿ ಮಾಧ್ಯಮ. ಅದರ ವಿಶ್ವಾಸಾರ್ಹತೆಯೇ ಅದರ ಜನಪ್ರಿಯತೆಯ ಮಾನದಂಡ, ಹಿಂದಿನ ತಲೆಮಾರಿನ ಪತ್ರಕರ್ತರ ಮೌಲ್ಯಗಳ ಸಾಕಾರ ರೂಪದಂತಿದ್ದ ರಾಜಶೇಖರ ಕೋಟಿ ಅವರು ಪತ್ರಿಕೆಯನ್ನು ಈ ಹಂತಕ್ಕೆ ತರುವಲ್ಲಿ ಪಟ್ಟ ಸಾಹಸ ಅವರ್ಣನೀಯ. ಬಹುತೇಕ ಬರಿಗೈಯಲ್ಲಿ ಪ್ರಾರಂಭವಾದ ಈ ಪತ್ರಿಕಾ ಸಾಹಸ ಸಮಾಜವಾದಿ ಸ್ನೇಹಿತರ ಕೈಯಾಸರೆಯಿಂದ ಬೆಳೆದು ಅಪಾರ ಜನವಿಶ್ವಾಸವನ್ನು ಗಳಿಸಿರುವುದು ಸರ್ವವಿಧಿತ. ದೀನ ದಲಿತರು, ಬಡಬಗ್ಗರು, ನೊಂದವರ ಧ್ವನಿಯಾದ ಈ ಪತ್ರಿಕೆಯು ಇಂದಿನವರೆಗೂ ತಾನು ನಂಬಿದ ಮೌಲ್ಯಗಳಿಂದ ಹಿಂದೆ ಸರಿದಿಲ್ಲ. ಪತ್ರಿಕೆಯ ಸ್ಥಾಪಕ-ಸಂಪಾದಕರಾದ ರಾಜಶೇಖರ ಕೋಟಿಯವರ ಸರಳತೆ, ಸಾಮಾಜಿಕ ಬದ್ಧತೆ, ವೈಯಕ್ತಿಕ ಪರಿಶುದ್ಧತೆ ಇವುಗಳು ನಿಜಕ್ಕೂ ‘ಆಂದೋಲನ’ ಪತ್ರಿಕೆಯ ರಕ್ಷಾ ಕವಚಗಳು, ನೇರ ನಡೆ-ನುಡಿ, ಸ್ನೇಹಜೀವಿಗಳಾಗಿದ್ದ ಅವರು ತಾತ್ವಿಕ ಭಿನ್ನಾಭಿಪ್ರಾಯಗಳು ವ್ಯಕ್ತಿಗತ ಸ್ನೇಹಕ್ಕೆ ಎರವಾಗದಂತೆ ಜಾಗ್ರತೆ ವಹಿಸುತ್ತಿದ್ದರು. ನಿರ್ಮಲಾ ಕೋಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಿ, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಸಾಹಿತಿಗಳು, ಕಲಾವಿದರು, ಚಿಂತಕರು – ಹೀಗೆ ಎಲ್ಲರೂ ಒಟ್ಟಿಗೇ ಭಾಗವಹಿಸಿರುವುದು ಕಾರ್ಯಕ್ರಮದ ಮತ್ತೊಂದು ವಿಶೇಷವೇ ಆಗಿದೆ.
ಯಾವುದೇ ಸಂಸ್ಥೆಯ ವಿಷಯದಲ್ಲಿ ೫೦ ವರ್ಷಗಳೆಂಬುದು ಅತ್ಯಂತ ಸಾರ್ಥಕತೆಯ ಕ್ಷಣ, ನಡೆದು ಬಂದ ದಾರಿಯ ಅವಲೋಕನ ಮಾಡಿಕೊಳ್ಳುತ್ತಲೇ ಹೊಸ ಯೋಜನೆಗಳ ನೀಲನಕ್ಷೆಯನ್ನು ರೂಪಿಸುವ ಕ್ಷಣ. ಜನಸಮುದಾಯದ ಒಳಿತಿಗಾಗಿ ಮರುಸಮರ್ಪಣೆ ಮಾಡಿಕೊಳ್ಳುವ ಕ್ಷಣ, ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಸಾಮುದಾಯಿಕ ಸಾಮರಸ್ಯವನ್ನು ಸಂರಕ್ಷಿಸಬೇಕಾದ ಕ್ಷಣ.ಪತ್ರಿಕೆ ಇದೆ ರೀತಿ ಜನರ ಪ್ರೀತಿಯ ಪತ್ರಿಕೆಯಾಗಿ ಪ್ರಕಟವಾಗುತ್ತಿರಲೆಂದು ಆಶಿಸುತ್ತೇವೆ. (ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಂದೇಶ )
ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್ನಲ್ಲಿ…
ವಾಷಿಂಗ್ಟನ್: ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…