ಆಂದೋಲನ 50

ಮೌಲ್ಯ, ಸಾಮರಸ್ಯಗಳ ಸಂರಕ್ಷಣೆಯಾಗಲಿ : ಸುತ್ತೂರು ಶ್ರೀ

ʼಆಂದೋಲನ ೫೦ ಸಾರ್ಥಕ ಪಯಣ’ ಸಂತೋಷದ ಸಂಗತಿ. ರಾಜಶೇಖರ ಕೋಟಿ ಅವರು ಸದಾ ಧರಿಸುತ್ತಿದ್ದ ಕೆಂಪು ಟಿ-ಶರ್ಟ್ ಅನ್ನು ಆಹ್ವಾನ ಪತ್ರಿಕೆಯೇ ನೆನಪಿಗೆ ತರುತ್ತಿದೆ. ‘ಆಂದೋಲನ’ ದಿನಪತ್ರಿಕೆ ಮೈಸೂರಿನ ಸಾಕ್ಷಿಪ್ರಜ್ಞೆಯಂತಿರುವ ಒಂದು ಪ್ರಮುಖ ಸುದ್ದಿ ಮಾಧ್ಯಮ. ಅದರ ವಿಶ್ವಾಸಾರ್ಹತೆಯೇ ಅದರ ಜನಪ್ರಿಯತೆಯ ಮಾನದಂಡ, ಹಿಂದಿನ ತಲೆಮಾರಿನ ಪತ್ರಕರ್ತರ ಮೌಲ್ಯಗಳ ಸಾಕಾರ ರೂಪದಂತಿದ್ದ ರಾಜಶೇಖರ ಕೋಟಿ ಅವರು ಪತ್ರಿಕೆಯನ್ನು ಈ ಹಂತಕ್ಕೆ ತರುವಲ್ಲಿ ಪಟ್ಟ ಸಾಹಸ ಅವರ್ಣನೀಯ. ಬಹುತೇಕ ಬರಿಗೈಯಲ್ಲಿ ಪ್ರಾರಂಭವಾದ ಈ ಪತ್ರಿಕಾ ಸಾಹಸ ಸಮಾಜವಾದಿ ಸ್ನೇಹಿತರ ಕೈಯಾಸರೆಯಿಂದ ಬೆಳೆದು ಅಪಾರ  ಜನವಿಶ್ವಾಸವನ್ನು ಗಳಿಸಿರುವುದು ಸರ್ವವಿಧಿತ. ದೀನ ದಲಿತರು, ಬಡಬಗ್ಗರು, ನೊಂದವರ ಧ್ವನಿಯಾದ ಈ ಪತ್ರಿಕೆಯು ಇಂದಿನವರೆಗೂ ತಾನು ನಂಬಿದ ಮೌಲ್ಯಗಳಿಂದ ಹಿಂದೆ ಸರಿದಿಲ್ಲ. ಪತ್ರಿಕೆಯ ಸ್ಥಾಪಕ-ಸಂಪಾದಕರಾದ ರಾಜಶೇಖರ ಕೋಟಿಯವರ ಸರಳತೆ, ಸಾಮಾಜಿಕ ಬದ್ಧತೆ, ವೈಯಕ್ತಿಕ ಪರಿಶುದ್ಧತೆ ಇವುಗಳು ನಿಜಕ್ಕೂ ‘ಆಂದೋಲನ’ ಪತ್ರಿಕೆಯ ರಕ್ಷಾ ಕವಚಗಳು, ನೇರ ನಡೆ-ನುಡಿ, ಸ್ನೇಹಜೀವಿಗಳಾಗಿದ್ದ ಅವರು ತಾತ್ವಿಕ ಭಿನ್ನಾಭಿಪ್ರಾಯಗಳು ವ್ಯಕ್ತಿಗತ ಸ್ನೇಹಕ್ಕೆ ಎರವಾಗದಂತೆ ಜಾಗ್ರತೆ ವಹಿಸುತ್ತಿದ್ದರು. ನಿರ್ಮಲಾ ಕೋಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಿ, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಸಾಹಿತಿಗಳು, ಕಲಾವಿದರು, ಚಿಂತಕರು – ಹೀಗೆ ಎಲ್ಲರೂ  ಒಟ್ಟಿಗೇ ಭಾಗವಹಿಸಿರುವುದು ಕಾರ್ಯಕ್ರಮದ ಮತ್ತೊಂದು ವಿಶೇಷವೇ ಆಗಿದೆ.

ಯಾವುದೇ ಸಂಸ್ಥೆಯ ವಿಷಯದಲ್ಲಿ ೫೦ ವರ್ಷಗಳೆಂಬುದು ಅತ್ಯಂತ ಸಾರ್ಥಕತೆಯ ಕ್ಷಣ, ನಡೆದು ಬಂದ ದಾರಿಯ ಅವಲೋಕನ ಮಾಡಿಕೊಳ್ಳುತ್ತಲೇ ಹೊಸ ಯೋಜನೆಗಳ ನೀಲನಕ್ಷೆಯನ್ನು ರೂಪಿಸುವ ಕ್ಷಣ. ಜನಸಮುದಾಯದ ಒಳಿತಿಗಾಗಿ ಮರುಸಮರ್ಪಣೆ ಮಾಡಿಕೊಳ್ಳುವ ಕ್ಷಣ, ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಸಾಮುದಾಯಿಕ ಸಾಮರಸ್ಯವನ್ನು ಸಂರಕ್ಷಿಸಬೇಕಾದ ಕ್ಷಣ.ಪತ್ರಿಕೆ ಇದೆ ರೀತಿ ಜನರ ಪ್ರೀತಿಯ ಪತ್ರಿಕೆಯಾಗಿ ಪ್ರಕಟವಾಗುತ್ತಿರಲೆಂದು ಆಶಿಸುತ್ತೇವೆ. (ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಂದೇಶ )

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

2 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

15 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago