ಆಂದೋಲನ 50

ನ್ಯಾಯದ ಪರ ‘ಆಂದೋಲನ’

 

ಎಂ.ಎನ್.ಸುಮನಾ, ವಕೀಲರು
ನಮ್ಮ ತಂದೆ ಟಿ.ಎನ್.ನಾಗರಾಜ್ ಮೂಲತಃ ಸಮಾಜವಾದಿ. ಯಾವುದೇ ಸಮಾಜವಾದದ ಹೋರಾಟ ಮೂಂಚೂಣಿ ನಮ್ಮಲ್ಲಿಯೇ  ಪ್ರಾರಂಭವಾಗುತ್ತಿತ್ತು. ಆಂದೋಲನ ದಿನಪತ್ರಿಕೆ ಪ್ರಾರಂಭಕ್ಕೂ ಮುನ್ನ ಸಮಾಜವಾದದ ಹೋರಾಟಗಳಲ್ಲಿ ರಾಜಶೇಖರ ಕೋಟಿ ಅವರು ನಮ್ಮ ತಂದೆಯವರೊಂದಿಗೆ ಪಾಲ್ಗೊಳ್ಳುತ್ತಿದ್ದರು.

೧೯೮೦ರ ಹಾಸುಪಾಸಿನಲ್ಲಿ ಆಂದೋಲನ ದಿನಪತ್ರಿಕೆ ಅಸ್ತಿತ್ವಕ್ಕೆ ಬಂದಿತು. ಅಂದಿನಿಂದ ಸಮಾಜವಾದ ಹೋರಾಟದ ಹಿನ್ನೆಲೆಯಲ್ಲಿ ಆಂದೋಲನ ಪತ್ರಿಕೆ ಭಾಗವಾಗಿ ರಾಜಶೇಖರ ಕೋಟಿ ಅವರು ಪಾಲ್ಗೊಳ್ಳುತ್ತಿದ್ದರು. ನಮ್ಮ ತಂದೆ ಕಾಲನಂತರವೂ ಕೋಟಿ ಅವರೊಂದಿಗಿನ ಒಡನಾಟ ಬೆಳೆಯಿತು. ರಾಜಶೇಖರ ಕೋಟಿ ಅವರು ಮಹಿಳಾ ಸಂಘಟನೆಯ ಹೋರಾಟಗಳನ್ನು ಬೆಂಬಲಿಸಿ, ಪ್ರೋತ್ಸಾಹಿಸುತ್ತಿದ್ದರು.

೧೯೯೫ರ ವೇಳೆಗೆ ಸಮತಾ ಅಧ್ಯಯನ ಕೇಂದ್ರ ಒಂದು ಟ್ರಸ್ಟ್ ಆಗಿ ಪರಿವರ್ತನೆಯಾಯಿತು. ರಾಜಶೇಖರ ಕೋಟಿ ಅವರು ನ್ಯಾಯದ ಪರ ನಿಲ್ಲುತ್ತಿದ್ದಂತೆ ಆಂದೋಲನ ದಿನಪತ್ರಿಕೆಯೂ ನಮ್ಮ ಪರ ನಿಲ್ಲುತ್ತಿತ್ತು. ಸಮತಾ ಟ್ರಸ್ಟ್ ಸ್ಥಾಪನೆಗೆ ಸ್ಥಳದ ಕುರಿತು ವಿವಾದ ಹುಟ್ಟಿಕೊಂಡಾಗ ಆಂದೋಲನ ಪತ್ರಿಕೆ ನೈಜ ವರದಿಗಳನ್ನು ದಾಖಲಿಉತ್ತಾ ನ್ಯಾಯಸಿಗುವಂತೆ ಮಾಡಿತ್ತು.
ನಂತರ ೧೯೯೮ರಲ್ಲಿ ರಾಜಶೇಖರ ಕೋಟಿ ಅವರೊಂದಿಗೆ ಅನೇಕ ಮಹಿಳಾ ಹೋರಾಟಗಾರರು ಶಕ್ತಿಧಾಮದ ಟ್ರಸ್ಟಿಗಳಾಗಿ ಸೇರಿಕೊಂಡೆವು. ಅಲ್ಲಿನ ಅನೇಕ ಚಟುವಟಿಕೆಗಳನ್ನು ಆಂದೋಲನ ದಿನಪತ್ರಿಕೆ ಪ್ರೋತ್ಸಾಹಿಸುತ್ತಿತ್ತು.

ಒಂದೊಮ್ಮೆ ಕಾಡುಗಳ್ಳ ವೀರಪ್ಪನ್ ಡಾ.ರಾಜ್‌ಕುಮಾರ್‌ಅವರನ್ನು ಅಪಹರಿಸಿದ್ದ ಸಮಯದಲ್ಲಿ ಪಾರ್ವತಮ್ಮ ಅವರೂ ಇತ್ತ ಬರಲಾಗಲಿಲ್ಲ. ಈ ವೇಳೆ ಸುಮಾರು ೨ ವರ್ಷಗಳ ಕಾಲ ಶಕ್ತಿಧಾಮಕ್ಕೆ ತೀವ್ರ ಆರ್ಥಿಕ ಮುಗ್ಗಟ್ಟು ಎದುರಾಗಿತ್ತು. ಆಗ ನಮ್ಮ ಸಂಕಷ್ಟಕ್ಕೆ ಸ್ಪಂಧಿಸಿದ್ದು ರಾಜಶೇಖರ ಕೋಟಿ ಅವರು, ಸಾವಿರಾರು ರೂ. ಜಾಹೀರಾತುಗಳನ್ನು ಉಚಿತವಾಗಿ ಪತ್ರಿಕೆಯಲ್ಲಿ ಪ್ರಕಟಿಸಿಕೊಡುವ ಮೂಲಕ ಸಂಸ್ಥೆಗೆ ನೆರವಾದರು. ಸಂಸ್ಥೆಯ ಬೆಳವಣಿಗೆಗೂ ರಚನಾತ್ಮಕ ಸಲಹೆ ಸೂಚನೆ ಕೊಡುತ್ತಿದ್ದರು. ಯಾವುದೇ ಸಂದರ್ಭದಲ್ಲಿ ಸಹಾಯ ಕೇಳಿದರೂ ಸಹಕರಿಸುತ್ತಿದ್ದರು. ಅವರ ಮನೆ ಬಾಗಿಲು ಮುಚ್ಚಿದ್ದನ್ನೇ ನಾವು ನೋಡಿರಲಿಲ್ಲ.

ಮಹಿಳೆಯರು ಎಂದರೆ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದ ಕಾಲಘಟ್ಟದಲ್ಲಿ, ನಮ್ಮ ವಿಚಾರ ಚಿಂತೆಗಳನ್ನು ಹೊರಹಾಕಲು ವೇದಿಕೆ ಕಲ್ಪಿಸಿದ್ದು, ವೇದಿಕೆಯಾಗಿಯೇ ಇದ್ದದ್ದು ಆಂದೋಲನ ದಿನಪತ್ರಿಕೆ.

andolanait

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

4 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

28 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago