ಆಂದೋಲನ 50

ಮಹಿಳಾ ಪರ ಹೋರಾಟಕ್ಕೆ ಚೈತನ್ಯ ತುಂಬಿದ್ದ ‘ಆಂದೋಲನ’

-ರತಿರಾವ್, ಸಮತಾ ವೇದಿಕೆ, ಮೈಸೂರು.

‘ಆಂದೋಲನ’ ದಿನಪತ್ರಿಕೆ ಸಮಾಜಮುಖಿ ಹೋರಾಟಗಳಿಗೆ ವೇದಿಕೆಯಿದ್ದಂತೆ, ಇಂದಿಗೂ ಅದು ತನ್ನ ಸತ್ವವನ್ನು ಕಳೆದುಕೊಂಡಿಲ್ಲ. ಹಿಂದಿನಂತೆೆಯೇ ನಮ್ಮ ಚಿಂತನೆಗಳಿಗೆ ಪೂರಕವಾಗಿಯೇ ನಡೆಯುತ್ತಿದೆ.
ಪತ್ರಿಕೆಯು ನಮ್ಮ ಸಮತಾ ವೇದಿಕೆಯಿಂದ ನಿರಂತವಾಗಿ ನಡೆಯುತ್ತಿದ್ದ ಹೋರಾಟಗಳ ವರದಿಯನ್ನು ದಾಖಲು ಮಾಡುತ್ತಿತ್ತು. ಈ ಹಿಂದೆ ಹೆಣ್ಣುಮಕ್ಕಳಿಗೆ ಕೊಂಗಳ್ಳಿ ಬೆಟ್ಟಕ್ಕೆ ಪ್ರವೇಶ ಇರುತ್ತಿರಲಿಲ್ಲ. ಈ ಸಂಪ್ರದಾಯ ತಪ್ಪು ಎಂದು ವಿರೋಧಿಸಿ ವೈಜ್ಞಾನಿಕವಾಗಿ ತಿಳಿವಳಿಕೆ ಮೂಡಿಸಲು ಮುಂದಾದಾಗ ಕೊಂಗಳ್ಳಿ ಬೆಟ್ಟಕ್ಕೇ ಹೋಗಬೇಕಾಯಿತು. ಈ ವೇಳೆ ‘ಆಂದೋಲನ’ ಪತ್ರಿಕೆ ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರ ಪತ್ನಿ ನಿರ್ಮಲಾ ಅವರೂ ಭಾಗಿಯಾಗಿದ್ದರು.

ಸೆಕ್ಷನ್ ೪೯೮ ದಾಖಲಿಸಿದ್ದು ಇತಿಹಾಸ:
ಮೈಸೂರಿನಲ್ಲೇ ಇದ್ದ ಸ್ಥಳೀಯ ಪತ್ರಿಕೆೊಂಂದು ಅಂದು ವಿವಿಧ ಕ್ಷೇತ್ರದ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲವಾಗಿ ವರ್ಣಿಸಿತ್ತು. ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದ ಹೆಣ್ಣುಮಕ್ಕಳಲ್ಲಿ ಇದು ಅಪಾರ ಮುಜುಗರ ತರಿಸಿತ್ತು. ಅಲ್ಲದೆ, ಲಕ್ಮೀಪುರಂ ಸ್ಥಳವೊಂದರಲ್ಲಿ ಮಹಿಳೆಯರನ್ನು ಮಾರಾಟ ಮಾಡುವ ಅಡ್ಡವಾಗಿ ಮಾಡಿಕೊಳ್ಳಲಾಗಿತ್ತು. ಇದರ ವಿರುದ್ಧ ಸಮತಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಯಿತು. ೧೯೭೮, ೧೯೮೦, ೧೯೮೧-೮೨ರಲ್ಲಿ ದೊಡ್ಡ ಮಟ್ಟದ ಹೋರಾಟವನ್ನೇ ನಡೆಸಲಾಯಿತು. ಇದರಿಂದ ಮೊದಲ ಬಾರಿಗೆ ಭಾರತೀಯ ಪತ್ರಿಕಾ ಮಂಡಳಿ ಆ ಸ್ಥಳೀಯ ಪತ್ರಿಕೆಗೆ ಶಿಕ್ಷೆ ವಿಧಿಸಿತ್ತು. ಅಲ್ಲದೆ, ಈ ಪತ್ರಿಕೆ ವಿರುದ್ಧ ಮೈಸೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಕ್ಷನ್ ೪೯೮ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಈ ಮೂಲಕ ನಮ್ಮ ಬೃಹತ್ ಹೋರಾಟ ಯಶಸ್ವಿಯೂ ಆಯಿತು. ಇದಕ್ಕೆಲ್ಲ ಬೆಂಬಲವಾಗಿ ನಿಂತದ್ದು, ‘ಆದೋಲನ’ ದಿನಪತ್ರಿಕೆ, ನಮ್ಮ ಪ್ರತ್ರಿಯೊಂದು ಹೋರಾಟವನ್ನು ಪತ್ರಿಕೆಯಲ್ಲಿ ದಾಖಲು ಮಾಡುತ್ತಾ, ಸಹಕಾರ ನೀಡುತ್ತಾ ಬಂದಿತ್ತು. ಅದನ್ನು ನಾವು ಎಂದಿಗೂ ಮರೆಯುವಂತಿಲ್ಲ.

ಅಲ್ಲದೆ, ರಾಜಶೇಖರ ಕೋಟಿ ಅವರು ಎನ್‌ಟಿಎಂ ಶಾಲೆ ಉಳಿಸುವಲ್ಲಿ ವಹಿಸಿದ ಶ್ರಮ, ಗೌರಿಹತ್ಯೆ, ೧೯೮೫ರಲ್ಲಿ ದೀಪಕ್ ಎಂಬವರ ಪ್ರಕರಣ ಇದೆಲ್ಲವನ್ನು ವರದಿ ಮಾಡುವಲ್ಲಿ ‘ಆಂದೋಲನ’ ಪತ್ರಿಕೆ ತಳೆದ ನಿಲುವು ಮೆಚ್ಚುವಂತಹದ್ದು, ಇಂದಿಗೂ ಪತ್ರಿಕೆ ತನ್ನ ಸತ್ವವನ್ನು ಉಳಿಸಿಕೊಂಡಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago