ಆಂದೋಲನ 50

ಮಹಿಳಾ ಪರ ಹೋರಾಟಕ್ಕೆ ಚೈತನ್ಯ ತುಂಬಿದ್ದ ‘ಆಂದೋಲನ’

-ರತಿರಾವ್, ಸಮತಾ ವೇದಿಕೆ, ಮೈಸೂರು.

‘ಆಂದೋಲನ’ ದಿನಪತ್ರಿಕೆ ಸಮಾಜಮುಖಿ ಹೋರಾಟಗಳಿಗೆ ವೇದಿಕೆಯಿದ್ದಂತೆ, ಇಂದಿಗೂ ಅದು ತನ್ನ ಸತ್ವವನ್ನು ಕಳೆದುಕೊಂಡಿಲ್ಲ. ಹಿಂದಿನಂತೆೆಯೇ ನಮ್ಮ ಚಿಂತನೆಗಳಿಗೆ ಪೂರಕವಾಗಿಯೇ ನಡೆಯುತ್ತಿದೆ.
ಪತ್ರಿಕೆಯು ನಮ್ಮ ಸಮತಾ ವೇದಿಕೆಯಿಂದ ನಿರಂತವಾಗಿ ನಡೆಯುತ್ತಿದ್ದ ಹೋರಾಟಗಳ ವರದಿಯನ್ನು ದಾಖಲು ಮಾಡುತ್ತಿತ್ತು. ಈ ಹಿಂದೆ ಹೆಣ್ಣುಮಕ್ಕಳಿಗೆ ಕೊಂಗಳ್ಳಿ ಬೆಟ್ಟಕ್ಕೆ ಪ್ರವೇಶ ಇರುತ್ತಿರಲಿಲ್ಲ. ಈ ಸಂಪ್ರದಾಯ ತಪ್ಪು ಎಂದು ವಿರೋಧಿಸಿ ವೈಜ್ಞಾನಿಕವಾಗಿ ತಿಳಿವಳಿಕೆ ಮೂಡಿಸಲು ಮುಂದಾದಾಗ ಕೊಂಗಳ್ಳಿ ಬೆಟ್ಟಕ್ಕೇ ಹೋಗಬೇಕಾಯಿತು. ಈ ವೇಳೆ ‘ಆಂದೋಲನ’ ಪತ್ರಿಕೆ ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರ ಪತ್ನಿ ನಿರ್ಮಲಾ ಅವರೂ ಭಾಗಿಯಾಗಿದ್ದರು.

ಸೆಕ್ಷನ್ ೪೯೮ ದಾಖಲಿಸಿದ್ದು ಇತಿಹಾಸ:
ಮೈಸೂರಿನಲ್ಲೇ ಇದ್ದ ಸ್ಥಳೀಯ ಪತ್ರಿಕೆೊಂಂದು ಅಂದು ವಿವಿಧ ಕ್ಷೇತ್ರದ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲವಾಗಿ ವರ್ಣಿಸಿತ್ತು. ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದ ಹೆಣ್ಣುಮಕ್ಕಳಲ್ಲಿ ಇದು ಅಪಾರ ಮುಜುಗರ ತರಿಸಿತ್ತು. ಅಲ್ಲದೆ, ಲಕ್ಮೀಪುರಂ ಸ್ಥಳವೊಂದರಲ್ಲಿ ಮಹಿಳೆಯರನ್ನು ಮಾರಾಟ ಮಾಡುವ ಅಡ್ಡವಾಗಿ ಮಾಡಿಕೊಳ್ಳಲಾಗಿತ್ತು. ಇದರ ವಿರುದ್ಧ ಸಮತಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಯಿತು. ೧೯೭೮, ೧೯೮೦, ೧೯೮೧-೮೨ರಲ್ಲಿ ದೊಡ್ಡ ಮಟ್ಟದ ಹೋರಾಟವನ್ನೇ ನಡೆಸಲಾಯಿತು. ಇದರಿಂದ ಮೊದಲ ಬಾರಿಗೆ ಭಾರತೀಯ ಪತ್ರಿಕಾ ಮಂಡಳಿ ಆ ಸ್ಥಳೀಯ ಪತ್ರಿಕೆಗೆ ಶಿಕ್ಷೆ ವಿಧಿಸಿತ್ತು. ಅಲ್ಲದೆ, ಈ ಪತ್ರಿಕೆ ವಿರುದ್ಧ ಮೈಸೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸೆಕ್ಷನ್ ೪೯೮ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಈ ಮೂಲಕ ನಮ್ಮ ಬೃಹತ್ ಹೋರಾಟ ಯಶಸ್ವಿಯೂ ಆಯಿತು. ಇದಕ್ಕೆಲ್ಲ ಬೆಂಬಲವಾಗಿ ನಿಂತದ್ದು, ‘ಆದೋಲನ’ ದಿನಪತ್ರಿಕೆ, ನಮ್ಮ ಪ್ರತ್ರಿಯೊಂದು ಹೋರಾಟವನ್ನು ಪತ್ರಿಕೆಯಲ್ಲಿ ದಾಖಲು ಮಾಡುತ್ತಾ, ಸಹಕಾರ ನೀಡುತ್ತಾ ಬಂದಿತ್ತು. ಅದನ್ನು ನಾವು ಎಂದಿಗೂ ಮರೆಯುವಂತಿಲ್ಲ.

ಅಲ್ಲದೆ, ರಾಜಶೇಖರ ಕೋಟಿ ಅವರು ಎನ್‌ಟಿಎಂ ಶಾಲೆ ಉಳಿಸುವಲ್ಲಿ ವಹಿಸಿದ ಶ್ರಮ, ಗೌರಿಹತ್ಯೆ, ೧೯೮೫ರಲ್ಲಿ ದೀಪಕ್ ಎಂಬವರ ಪ್ರಕರಣ ಇದೆಲ್ಲವನ್ನು ವರದಿ ಮಾಡುವಲ್ಲಿ ‘ಆಂದೋಲನ’ ಪತ್ರಿಕೆ ತಳೆದ ನಿಲುವು ಮೆಚ್ಚುವಂತಹದ್ದು, ಇಂದಿಗೂ ಪತ್ರಿಕೆ ತನ್ನ ಸತ್ವವನ್ನು ಉಳಿಸಿಕೊಂಡಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago