ಆಂದೋಲನ 50

ಯೋಗಾಚಾರ್ಯರ ನೆಲೆ ಮೈಸೂರು

ಡಾ. ಕೆ. ರಾಘವೇಂದ್ರ ಆರ್. ಪೈ

ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ ಕೊಡುಗೆ ನೀಡಿರುವ ಮಹನೀಯರಲ್ಲಿ ಮೈಸೂರು ರಾಜಮನೆತನದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಕಾಣಿಕೆ ಮಹತ್ವದ್ದು. ಅವರ ‘ ಶ್ರೀತತ್ತ್ವನಿಧಿ’ ಕೃತಿಯಲ್ಲಿ ಪ್ರಾಚೀನ ಸಾಹಿತ್ಯ, ಕಲೆ, ಯೋಗ ಹಾಗೂ ಇತರ ವಿಷಯಗಳನ್ನೊಳಗೊಂಡ ಸಮಗ್ರ ಮಾಹಿತಿಯನ್ನು ನೀಡಲಾಗಿತ್ತು. ಮುಮ್ಮಡಿ ಕೃಷ್ಣರಾಜ ಒಡೆಯರ್ ಈ ಗ್ರಂಥವನ್ನು ವ್ಯವಸ್ಥಿತವಾಗಿ ಒಂದು ಗೂಡಿಸಿದರು.

ಈ ಕೃತಿಯಲ್ಲಿ ೧೨೨ ಆಸನಗಳನ್ನು ಸಚಿತ್ರವಾಗಿ ವಿವರಿಸಿ ನೀಡಲಾಗಿದೆ. ಈ ಹಸ್ತಪ್ರತಿಯ ಆಧಾರದ ಮೇರೆಗೆ ತಿಳಿದು ಬರುವುದೆಂದರೆ ಆ ಕಾಲದಲ್ಲಿ ಯೋಗ ಚಟುವಟಿಕೆ ವಿಫುಲವಾಗಿ ನಡೆಯುತ್ತಿತ್ತು. ಗ್ರಂಥಾಧಾರ ಪ್ರಕಾರ ಈ ಪದ್ಧತಿ ಮೈಸೂರಲ್ಲಿ ಕನಿಷ್ಠ ೧೦೦ ರಿಂದ ೧೫೦ ವರ್ಷಗಳಷ್ಟು ಹಿಂದಿನದು ಎಂದು ತಿಳಿದು ಬರುತ್ತದೆ.
೧೯೩೦ರಿಂದ ೧೯೪೦ರ ತನಕ ಮೈಸೂರು ಮಹಾರಾಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರಾಯೋಜಕತ್ವದಲ್ಲಿ ಕೃಷ್ಣಮಾಚಾರ್ಯರ ಮಾರ್ಗದರ್ಶನದೊಂದಿಗೆ ಯೋಗಶಾಲೆ ನಡೆಯುತ್ತಿತ್ತು. ಈ ಹೊತ್ತಿನಲ್ಲಿ ಬಿ.ಕೆ.ಎಸ್ ಅಯ್ಯಂಗಾರ್, ಪಟ್ಟಾಭಿ ಜೋಯಿಸರು ಅವರು ವಿದ್ಯಾರ್ಥಿಯಾಗಿದ್ದರು. ಭಾರತದ ಉದ್ದಗಲಕ್ಕೂ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಲು ಮಹಾರಾಜರು ನೆರವಿಗೆ ಬಂದರು. ಇದರ ಪರಿಣಾಮವೇ ಯೋಗವು ಪುನರುಜ್ಜೀವನಗೊಂಡು ಜನಪ್ರಿಯವಾಯಿತು. ಯೋಗದ ಆರಂಭದ ಬೆಳವಣಿಗೆಗೆ ಮುಖ್ಯವಾಗಿ ಅಯ್ಯಂಗಾರ್ ಮತ್ತು ಜೋಯಿಷರಿಗೆ ಧಾರಾಳ ನೆರವಿನ ಕೈಯನ್ನು ನೀಡಿದವರು ಮಹಾರಾಜರು.
ಕೃಷ್ಣಮಾಚಾರ್ಯರು ಬಳಸಿದ ಯೋಗ ಕಾರ್ಯವಿಧಾನಗಳಿಗೆ ‘ಶ್ರೀತತ್ವನಿಧಿ’ಯು ಒಂದು ಮೂಲಾಧಾರ ವಾಗಿ ಕಾಣುತ್ತದೆ. ಬಳಿಕ ಆ ದಾರಿಯನ್ನೇ ಅಯ್ಯಂಗಾರ್ ಮತ್ತು ಜೋಯಿಸರು ಅನುಸರಿಸಿದರು. ಕೃಷ್ಣಮೂರ್ತಿ ವಿರಚಿತ ಯೋಗಗ್ರಂಥಕ್ಕೆ ಈ ಹಸ್ತಪ್ರತಿಯೋ ಆಕರ ಗ್ರಂಥವಾಗಿ ರಾಜರ ನೆರವಿನಿಂದ ‘ಯೋಗ ಮಕರಂದ’ ಹೆಸರಲ್ಲಿ ೧೯೩೦ ರಲ್ಲಿ ಯೋಗ ಗ್ರಂಥವಾಗಿ ಬೆಳಕಿಗೆ ಬಂದಿತು.
ಇಂದು ಮೈಸೂರನ್ನು ಯೋಗ ನಗರಿಯಾಗಿ ವಿಶ್ವವೇ ಗುರುತಿಸಲು ಕಾರಣಕರ್ತರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಹಾಗೂ ಅವರಿಂದ ರಾಜಾಶ್ರಯ ಪಡೆದ ಯೋಗ ಆಚಾರ್ಯರಾದ ಟಿ ಕೃಷ್ಣಮಾಚಾರ್ ಮತ್ತು ಅವರ ಶಿಷ್ಯರಾದ ಬಿ.ಕೆ.ಎಸ್ ಅಯ್ಯಂಗಾರ್, ಪಟ್ಟಾಭಿ ಜೋಯಿಸ್, ದೇಶಿಕಾಚಾರ್, ಇಂದ್ರಾದೇವಿ ಮುಂತಾದವರು ಯೋಗಾಭಿಮಾನವನ್ನು, ಯೋಗದರ್ಶನವನ್ನು ಮೆರೆದಿರುವರು.

 

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago