ಆಂದೋಲನ 50

ಯೋಗಾಚಾರ್ಯರ ನೆಲೆ ಮೈಸೂರು

ಡಾ. ಕೆ. ರಾಘವೇಂದ್ರ ಆರ್. ಪೈ

ಯೋಗ ಭಾರತದ ಶ್ರೇಷ್ಠ ಪರಂಪರೆಯ ಭಾಗ. ಸುಮಾರು ೨೫೦ ವರ್ಷಗಳಷ್ಟು ಹಿಂದೆಯೇ ಮೈಸೂರು ಸಾಹಿತ್ಯ, ಕಲೆ, ಸಂಗೀತ, ಯೋಗ, ಕ್ರೀಡೆ ಇತ್ಯಾದಿಗಳ ಬಗ್ಗೆ ಸಮಗ್ರ ಹಾಗೂ ಸಮೃದ್ಧ ಮಾಹಿತಿಯನ್ನು ನೀಡಬಲ್ಲ ಕೇಂದ್ರವಾಗಿತ್ತು. ಯೋಗ ಪರಂಪರೆಗೆ ಕೊಡುಗೆ ನೀಡಿರುವ ಮಹನೀಯರಲ್ಲಿ ಮೈಸೂರು ರಾಜಮನೆತನದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಕಾಣಿಕೆ ಮಹತ್ವದ್ದು. ಅವರ ‘ ಶ್ರೀತತ್ತ್ವನಿಧಿ’ ಕೃತಿಯಲ್ಲಿ ಪ್ರಾಚೀನ ಸಾಹಿತ್ಯ, ಕಲೆ, ಯೋಗ ಹಾಗೂ ಇತರ ವಿಷಯಗಳನ್ನೊಳಗೊಂಡ ಸಮಗ್ರ ಮಾಹಿತಿಯನ್ನು ನೀಡಲಾಗಿತ್ತು. ಮುಮ್ಮಡಿ ಕೃಷ್ಣರಾಜ ಒಡೆಯರ್ ಈ ಗ್ರಂಥವನ್ನು ವ್ಯವಸ್ಥಿತವಾಗಿ ಒಂದು ಗೂಡಿಸಿದರು.

ಈ ಕೃತಿಯಲ್ಲಿ ೧೨೨ ಆಸನಗಳನ್ನು ಸಚಿತ್ರವಾಗಿ ವಿವರಿಸಿ ನೀಡಲಾಗಿದೆ. ಈ ಹಸ್ತಪ್ರತಿಯ ಆಧಾರದ ಮೇರೆಗೆ ತಿಳಿದು ಬರುವುದೆಂದರೆ ಆ ಕಾಲದಲ್ಲಿ ಯೋಗ ಚಟುವಟಿಕೆ ವಿಫುಲವಾಗಿ ನಡೆಯುತ್ತಿತ್ತು. ಗ್ರಂಥಾಧಾರ ಪ್ರಕಾರ ಈ ಪದ್ಧತಿ ಮೈಸೂರಲ್ಲಿ ಕನಿಷ್ಠ ೧೦೦ ರಿಂದ ೧೫೦ ವರ್ಷಗಳಷ್ಟು ಹಿಂದಿನದು ಎಂದು ತಿಳಿದು ಬರುತ್ತದೆ.
೧೯೩೦ರಿಂದ ೧೯೪೦ರ ತನಕ ಮೈಸೂರು ಮಹಾರಾಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರಾಯೋಜಕತ್ವದಲ್ಲಿ ಕೃಷ್ಣಮಾಚಾರ್ಯರ ಮಾರ್ಗದರ್ಶನದೊಂದಿಗೆ ಯೋಗಶಾಲೆ ನಡೆಯುತ್ತಿತ್ತು. ಈ ಹೊತ್ತಿನಲ್ಲಿ ಬಿ.ಕೆ.ಎಸ್ ಅಯ್ಯಂಗಾರ್, ಪಟ್ಟಾಭಿ ಜೋಯಿಸರು ಅವರು ವಿದ್ಯಾರ್ಥಿಯಾಗಿದ್ದರು. ಭಾರತದ ಉದ್ದಗಲಕ್ಕೂ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಲು ಮಹಾರಾಜರು ನೆರವಿಗೆ ಬಂದರು. ಇದರ ಪರಿಣಾಮವೇ ಯೋಗವು ಪುನರುಜ್ಜೀವನಗೊಂಡು ಜನಪ್ರಿಯವಾಯಿತು. ಯೋಗದ ಆರಂಭದ ಬೆಳವಣಿಗೆಗೆ ಮುಖ್ಯವಾಗಿ ಅಯ್ಯಂಗಾರ್ ಮತ್ತು ಜೋಯಿಷರಿಗೆ ಧಾರಾಳ ನೆರವಿನ ಕೈಯನ್ನು ನೀಡಿದವರು ಮಹಾರಾಜರು.
ಕೃಷ್ಣಮಾಚಾರ್ಯರು ಬಳಸಿದ ಯೋಗ ಕಾರ್ಯವಿಧಾನಗಳಿಗೆ ‘ಶ್ರೀತತ್ವನಿಧಿ’ಯು ಒಂದು ಮೂಲಾಧಾರ ವಾಗಿ ಕಾಣುತ್ತದೆ. ಬಳಿಕ ಆ ದಾರಿಯನ್ನೇ ಅಯ್ಯಂಗಾರ್ ಮತ್ತು ಜೋಯಿಸರು ಅನುಸರಿಸಿದರು. ಕೃಷ್ಣಮೂರ್ತಿ ವಿರಚಿತ ಯೋಗಗ್ರಂಥಕ್ಕೆ ಈ ಹಸ್ತಪ್ರತಿಯೋ ಆಕರ ಗ್ರಂಥವಾಗಿ ರಾಜರ ನೆರವಿನಿಂದ ‘ಯೋಗ ಮಕರಂದ’ ಹೆಸರಲ್ಲಿ ೧೯೩೦ ರಲ್ಲಿ ಯೋಗ ಗ್ರಂಥವಾಗಿ ಬೆಳಕಿಗೆ ಬಂದಿತು.
ಇಂದು ಮೈಸೂರನ್ನು ಯೋಗ ನಗರಿಯಾಗಿ ವಿಶ್ವವೇ ಗುರುತಿಸಲು ಕಾರಣಕರ್ತರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಹಾಗೂ ಅವರಿಂದ ರಾಜಾಶ್ರಯ ಪಡೆದ ಯೋಗ ಆಚಾರ್ಯರಾದ ಟಿ ಕೃಷ್ಣಮಾಚಾರ್ ಮತ್ತು ಅವರ ಶಿಷ್ಯರಾದ ಬಿ.ಕೆ.ಎಸ್ ಅಯ್ಯಂಗಾರ್, ಪಟ್ಟಾಭಿ ಜೋಯಿಸ್, ದೇಶಿಕಾಚಾರ್, ಇಂದ್ರಾದೇವಿ ಮುಂತಾದವರು ಯೋಗಾಭಿಮಾನವನ್ನು, ಯೋಗದರ್ಶನವನ್ನು ಮೆರೆದಿರುವರು.

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago