ಆಂದೋಲನ 50

ಅರಸರ ಬಳುವಳಿ ಮೈಸೂರು ಪೇಟ

-ದಿನೇಶ್ ಕುಮಾರ್

ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ೧೮೧೦ರ ದಶಕದ ಮಾತು. ಅಂದು ರಾಜರನ್ನು ಭೇಟಿ ಮಾಡಲು ಬರುವ ಗಣ್ಯರು, ಅಧಿಕಾರಿಗಳು ಥರಾವರಿ ಧಿರಿಸುಗಳನ್ನು ಧರಿಸಿ ಬರುತ್ತಿದ್ದುದನ್ನು ಗಮನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಪೂರ್ಣಯ್ಯನವರನ್ನು ಕರೆಸಿಕೊಂಡು, ಅರಮನೆಗೆ ಪ್ರವೇಶಿಸುವವರಿಗೆ ವಸ್ತ್ರ ಸಂಹಿತೆ ಜಾರಿಗೆ ತಂದರೆ ಹೇಗಿರುತ್ತದೆ ಎಂದು ಚರ್ಚಿಸಿದ್ದಾರೆ.
ಮಹಾರಾಜರ ಸೂಚನೆಯ ಮೇರೆಗೆ ದಿವಾನ್ ಪೂರ್ಣಯ್ಯ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದರು. ಅದರಂತೆ ರಾಜರನ್ನು ಭೇಟಿ ಮಾಡಲು ಹಾಗೂ ದರ್ಬಾರ್ ಹಾಲ್ ಪ್ರವೇಶಿಸಲು ಬರುವವರು ಷರಾಯಿ ನಿಲುವಂಗಿ, ವಲ್ಲಿ ಅಥವ ಜರತಾರಿ ಕಚ್ಚೆಪಂಚೆ, ಜುಬ್ಬ ಹಾಗೂ ವಲ್ಲಿಯನ್ನು ಧರಿಸಬೇಕೆಂದು ಆಜ್ಞೆ ಹೊರಡಿಸಲಾಯಿತು.


ರಾಜರ ಅಪ್ಪಣೆಯ ಮೇರೆಗೆ ವಸ್ತ್ರಸಂಹಿತೆಯೇನೋ ಜಾರಿಗೆ ಬಂತು. ಆದರೆ ಭೇಟಿ ಮಾಡಲು ಬರುತ್ತಿದ್ದವರ ನಾನಾ ‘ಕೇಶ ವಿನ್ಯಾಸ’ ಸಮಸ್ಯೆಯಾಯಿತು. ಕೆಲವರದು ಉದ್ದ ತಲೆಗೂದಲು, ಇನ್ನು ಕೆಲವರದು ಅರೆತಲೆಗೂದಲು, ಮತ್ತೆ ಕೆಲವರ ಬೋಳು ತಲೆ ! ಇದರಿಂದ ಧರಿಸುತ್ತಿದ್ದ ವಸ್ತ್ರಕ್ಕೆ ಮೆರುಗು ಬರುತ್ತಿರಲಿಲ್ಲ. ಆಗ ಧಿರಿಸಿಗೆ ತಕ್ಕ ಪೇಟ ಧರಿಸಬೇಕೆಂದು ದಿವಾನ್ ಪೂರ್ಣಯ್ಯ ಆದೇಶ ಹೊರಡಿಸಿದರು.


ಪೂರ್ಣಯ್ಯನವರು ಬದುಕಿರುವವರೆಗೂ ಮರಾಠ ಮಾದರಿಯ ಪೇಟ ಬಳಕೆಯಾಗುತ್ತಿತ್ತು. ಅವರ ನಿಧನಾನಂತರ ಅಂದರೆ ೧೮೨೦ರ ನಂತರ ಪೇಟದ ಮಾದರಿಯನ್ನು ಬದಲಿಸಿ ಅದನ್ನು ಮೈಸೂರು ಪೇಟ ಎಂದು ಹೆಸರಿಸಲಾಯಿತು.
ರೇಷ್ಮೇ ಬಟ್ಟೆಯನ್ನು ಬಳಸಿ ತಯಾರಿಸಿದ ಹಾಗೂ ೩ ಇಂಚು ಜರತಾರಿ ಅಂಚುಳ್ಳ ಪೇಟವನ್ನು ಅಧಿಕಾರಿಗಳು ಹಾಗೂ ರಾಜಪರಿವಾರದವರು ಮತ್ತು ಗಣ್ಯರು ಬಳಸಬೇಕೆಂದು ಕಡ್ಡಾಯಗೊಳಿಸಲಾಯಿತು. ನಂತರದ ದಿನಗಳಲ್ಲಿ ದರ್ಬಾರ್ ಹಾಲ್‌ನಲ್ಲಿ ನಡೆಯುವ ಸಮಾರಂಭ, ದಸರಾ ಹಬ್ಬ ಮುಂತಾದ ದಿನಗಳಲ್ಲಿ ಅರಮನೆಗೆ ಬೇಟಿ ನೀಡುವ ಎಲ್ಲರೂ ಮೈಸೂರು ಪೇಟದೊಂದಿಗೆ ಠಾಕು ಠೀಕಾಗಿ ಅರಮನೆಗೆ ಬರತೊಡಗಿದರು.

ಮುಂದೆ ಅರಸೊತ್ತಿಗೆ ಅಳಿದರೂ ಪೇಟ ಉಳಿಯಿತು. ಜನಸಾಮಾನ್ಯರೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಪೇಟ ಬಳಸಲಾರಂಭಿಸಿದರು. ಈಗ ಬಟ್ಟೆಯಲ್ಲಿ ನೂರಿನ್ನೂರು ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಪೇಟವೂ ‘ಮೈಸೂರು ಪೇಟ’ ಎಂದು ಕರೆಸಿಕೊಳ್ಳುತ್ತಿದೆ. ಮೈಸೂರಿನ ಇತಿಹಾಸದ ಭಾಗವಾಗಿರುವ ಮೈಸೂರು ಪೇಟದ ಘನತೆಯನ್ನು ಕಾಪಾಡುವ ಜವಾಬ್ದಾರಿ ಮೈಸೂರಿಗರ ಮೇಲಿದೆ.

andolanait

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

3 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

3 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

3 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

3 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

3 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

3 hours ago