ಆಂದೋಲನ 50

ಅರಸರ ಬಳುವಳಿ ಮೈಸೂರು ಪೇಟ

-ದಿನೇಶ್ ಕುಮಾರ್

ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ೧೮೧೦ರ ದಶಕದ ಮಾತು. ಅಂದು ರಾಜರನ್ನು ಭೇಟಿ ಮಾಡಲು ಬರುವ ಗಣ್ಯರು, ಅಧಿಕಾರಿಗಳು ಥರಾವರಿ ಧಿರಿಸುಗಳನ್ನು ಧರಿಸಿ ಬರುತ್ತಿದ್ದುದನ್ನು ಗಮನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಪೂರ್ಣಯ್ಯನವರನ್ನು ಕರೆಸಿಕೊಂಡು, ಅರಮನೆಗೆ ಪ್ರವೇಶಿಸುವವರಿಗೆ ವಸ್ತ್ರ ಸಂಹಿತೆ ಜಾರಿಗೆ ತಂದರೆ ಹೇಗಿರುತ್ತದೆ ಎಂದು ಚರ್ಚಿಸಿದ್ದಾರೆ.
ಮಹಾರಾಜರ ಸೂಚನೆಯ ಮೇರೆಗೆ ದಿವಾನ್ ಪೂರ್ಣಯ್ಯ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದರು. ಅದರಂತೆ ರಾಜರನ್ನು ಭೇಟಿ ಮಾಡಲು ಹಾಗೂ ದರ್ಬಾರ್ ಹಾಲ್ ಪ್ರವೇಶಿಸಲು ಬರುವವರು ಷರಾಯಿ ನಿಲುವಂಗಿ, ವಲ್ಲಿ ಅಥವ ಜರತಾರಿ ಕಚ್ಚೆಪಂಚೆ, ಜುಬ್ಬ ಹಾಗೂ ವಲ್ಲಿಯನ್ನು ಧರಿಸಬೇಕೆಂದು ಆಜ್ಞೆ ಹೊರಡಿಸಲಾಯಿತು.


ರಾಜರ ಅಪ್ಪಣೆಯ ಮೇರೆಗೆ ವಸ್ತ್ರಸಂಹಿತೆಯೇನೋ ಜಾರಿಗೆ ಬಂತು. ಆದರೆ ಭೇಟಿ ಮಾಡಲು ಬರುತ್ತಿದ್ದವರ ನಾನಾ ‘ಕೇಶ ವಿನ್ಯಾಸ’ ಸಮಸ್ಯೆಯಾಯಿತು. ಕೆಲವರದು ಉದ್ದ ತಲೆಗೂದಲು, ಇನ್ನು ಕೆಲವರದು ಅರೆತಲೆಗೂದಲು, ಮತ್ತೆ ಕೆಲವರ ಬೋಳು ತಲೆ ! ಇದರಿಂದ ಧರಿಸುತ್ತಿದ್ದ ವಸ್ತ್ರಕ್ಕೆ ಮೆರುಗು ಬರುತ್ತಿರಲಿಲ್ಲ. ಆಗ ಧಿರಿಸಿಗೆ ತಕ್ಕ ಪೇಟ ಧರಿಸಬೇಕೆಂದು ದಿವಾನ್ ಪೂರ್ಣಯ್ಯ ಆದೇಶ ಹೊರಡಿಸಿದರು.


ಪೂರ್ಣಯ್ಯನವರು ಬದುಕಿರುವವರೆಗೂ ಮರಾಠ ಮಾದರಿಯ ಪೇಟ ಬಳಕೆಯಾಗುತ್ತಿತ್ತು. ಅವರ ನಿಧನಾನಂತರ ಅಂದರೆ ೧೮೨೦ರ ನಂತರ ಪೇಟದ ಮಾದರಿಯನ್ನು ಬದಲಿಸಿ ಅದನ್ನು ಮೈಸೂರು ಪೇಟ ಎಂದು ಹೆಸರಿಸಲಾಯಿತು.
ರೇಷ್ಮೇ ಬಟ್ಟೆಯನ್ನು ಬಳಸಿ ತಯಾರಿಸಿದ ಹಾಗೂ ೩ ಇಂಚು ಜರತಾರಿ ಅಂಚುಳ್ಳ ಪೇಟವನ್ನು ಅಧಿಕಾರಿಗಳು ಹಾಗೂ ರಾಜಪರಿವಾರದವರು ಮತ್ತು ಗಣ್ಯರು ಬಳಸಬೇಕೆಂದು ಕಡ್ಡಾಯಗೊಳಿಸಲಾಯಿತು. ನಂತರದ ದಿನಗಳಲ್ಲಿ ದರ್ಬಾರ್ ಹಾಲ್‌ನಲ್ಲಿ ನಡೆಯುವ ಸಮಾರಂಭ, ದಸರಾ ಹಬ್ಬ ಮುಂತಾದ ದಿನಗಳಲ್ಲಿ ಅರಮನೆಗೆ ಬೇಟಿ ನೀಡುವ ಎಲ್ಲರೂ ಮೈಸೂರು ಪೇಟದೊಂದಿಗೆ ಠಾಕು ಠೀಕಾಗಿ ಅರಮನೆಗೆ ಬರತೊಡಗಿದರು.

ಮುಂದೆ ಅರಸೊತ್ತಿಗೆ ಅಳಿದರೂ ಪೇಟ ಉಳಿಯಿತು. ಜನಸಾಮಾನ್ಯರೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಪೇಟ ಬಳಸಲಾರಂಭಿಸಿದರು. ಈಗ ಬಟ್ಟೆಯಲ್ಲಿ ನೂರಿನ್ನೂರು ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಪೇಟವೂ ‘ಮೈಸೂರು ಪೇಟ’ ಎಂದು ಕರೆಸಿಕೊಳ್ಳುತ್ತಿದೆ. ಮೈಸೂರಿನ ಇತಿಹಾಸದ ಭಾಗವಾಗಿರುವ ಮೈಸೂರು ಪೇಟದ ಘನತೆಯನ್ನು ಕಾಪಾಡುವ ಜವಾಬ್ದಾರಿ ಮೈಸೂರಿಗರ ಮೇಲಿದೆ.

andolanait

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

9 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

20 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

34 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

38 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 hour ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago