ಆಂದೋಲನ 50

ಅರಸರ ಬಳುವಳಿ ಮೈಸೂರು ಪೇಟ

-ದಿನೇಶ್ ಕುಮಾರ್

ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ೧೮೧೦ರ ದಶಕದ ಮಾತು. ಅಂದು ರಾಜರನ್ನು ಭೇಟಿ ಮಾಡಲು ಬರುವ ಗಣ್ಯರು, ಅಧಿಕಾರಿಗಳು ಥರಾವರಿ ಧಿರಿಸುಗಳನ್ನು ಧರಿಸಿ ಬರುತ್ತಿದ್ದುದನ್ನು ಗಮನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಪೂರ್ಣಯ್ಯನವರನ್ನು ಕರೆಸಿಕೊಂಡು, ಅರಮನೆಗೆ ಪ್ರವೇಶಿಸುವವರಿಗೆ ವಸ್ತ್ರ ಸಂಹಿತೆ ಜಾರಿಗೆ ತಂದರೆ ಹೇಗಿರುತ್ತದೆ ಎಂದು ಚರ್ಚಿಸಿದ್ದಾರೆ.
ಮಹಾರಾಜರ ಸೂಚನೆಯ ಮೇರೆಗೆ ದಿವಾನ್ ಪೂರ್ಣಯ್ಯ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದರು. ಅದರಂತೆ ರಾಜರನ್ನು ಭೇಟಿ ಮಾಡಲು ಹಾಗೂ ದರ್ಬಾರ್ ಹಾಲ್ ಪ್ರವೇಶಿಸಲು ಬರುವವರು ಷರಾಯಿ ನಿಲುವಂಗಿ, ವಲ್ಲಿ ಅಥವ ಜರತಾರಿ ಕಚ್ಚೆಪಂಚೆ, ಜುಬ್ಬ ಹಾಗೂ ವಲ್ಲಿಯನ್ನು ಧರಿಸಬೇಕೆಂದು ಆಜ್ಞೆ ಹೊರಡಿಸಲಾಯಿತು.


ರಾಜರ ಅಪ್ಪಣೆಯ ಮೇರೆಗೆ ವಸ್ತ್ರಸಂಹಿತೆಯೇನೋ ಜಾರಿಗೆ ಬಂತು. ಆದರೆ ಭೇಟಿ ಮಾಡಲು ಬರುತ್ತಿದ್ದವರ ನಾನಾ ‘ಕೇಶ ವಿನ್ಯಾಸ’ ಸಮಸ್ಯೆಯಾಯಿತು. ಕೆಲವರದು ಉದ್ದ ತಲೆಗೂದಲು, ಇನ್ನು ಕೆಲವರದು ಅರೆತಲೆಗೂದಲು, ಮತ್ತೆ ಕೆಲವರ ಬೋಳು ತಲೆ ! ಇದರಿಂದ ಧರಿಸುತ್ತಿದ್ದ ವಸ್ತ್ರಕ್ಕೆ ಮೆರುಗು ಬರುತ್ತಿರಲಿಲ್ಲ. ಆಗ ಧಿರಿಸಿಗೆ ತಕ್ಕ ಪೇಟ ಧರಿಸಬೇಕೆಂದು ದಿವಾನ್ ಪೂರ್ಣಯ್ಯ ಆದೇಶ ಹೊರಡಿಸಿದರು.


ಪೂರ್ಣಯ್ಯನವರು ಬದುಕಿರುವವರೆಗೂ ಮರಾಠ ಮಾದರಿಯ ಪೇಟ ಬಳಕೆಯಾಗುತ್ತಿತ್ತು. ಅವರ ನಿಧನಾನಂತರ ಅಂದರೆ ೧೮೨೦ರ ನಂತರ ಪೇಟದ ಮಾದರಿಯನ್ನು ಬದಲಿಸಿ ಅದನ್ನು ಮೈಸೂರು ಪೇಟ ಎಂದು ಹೆಸರಿಸಲಾಯಿತು.
ರೇಷ್ಮೇ ಬಟ್ಟೆಯನ್ನು ಬಳಸಿ ತಯಾರಿಸಿದ ಹಾಗೂ ೩ ಇಂಚು ಜರತಾರಿ ಅಂಚುಳ್ಳ ಪೇಟವನ್ನು ಅಧಿಕಾರಿಗಳು ಹಾಗೂ ರಾಜಪರಿವಾರದವರು ಮತ್ತು ಗಣ್ಯರು ಬಳಸಬೇಕೆಂದು ಕಡ್ಡಾಯಗೊಳಿಸಲಾಯಿತು. ನಂತರದ ದಿನಗಳಲ್ಲಿ ದರ್ಬಾರ್ ಹಾಲ್‌ನಲ್ಲಿ ನಡೆಯುವ ಸಮಾರಂಭ, ದಸರಾ ಹಬ್ಬ ಮುಂತಾದ ದಿನಗಳಲ್ಲಿ ಅರಮನೆಗೆ ಬೇಟಿ ನೀಡುವ ಎಲ್ಲರೂ ಮೈಸೂರು ಪೇಟದೊಂದಿಗೆ ಠಾಕು ಠೀಕಾಗಿ ಅರಮನೆಗೆ ಬರತೊಡಗಿದರು.

ಮುಂದೆ ಅರಸೊತ್ತಿಗೆ ಅಳಿದರೂ ಪೇಟ ಉಳಿಯಿತು. ಜನಸಾಮಾನ್ಯರೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಪೇಟ ಬಳಸಲಾರಂಭಿಸಿದರು. ಈಗ ಬಟ್ಟೆಯಲ್ಲಿ ನೂರಿನ್ನೂರು ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಪೇಟವೂ ‘ಮೈಸೂರು ಪೇಟ’ ಎಂದು ಕರೆಸಿಕೊಳ್ಳುತ್ತಿದೆ. ಮೈಸೂರಿನ ಇತಿಹಾಸದ ಭಾಗವಾಗಿರುವ ಮೈಸೂರು ಪೇಟದ ಘನತೆಯನ್ನು ಕಾಪಾಡುವ ಜವಾಬ್ದಾರಿ ಮೈಸೂರಿಗರ ಮೇಲಿದೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

3 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago