ಆಂದೋಲನ 50

ಅರಸರ ಬಳುವಳಿ ಮೈಸೂರು ಪೇಟ

-ದಿನೇಶ್ ಕುಮಾರ್

ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ೧೮೧೦ರ ದಶಕದ ಮಾತು. ಅಂದು ರಾಜರನ್ನು ಭೇಟಿ ಮಾಡಲು ಬರುವ ಗಣ್ಯರು, ಅಧಿಕಾರಿಗಳು ಥರಾವರಿ ಧಿರಿಸುಗಳನ್ನು ಧರಿಸಿ ಬರುತ್ತಿದ್ದುದನ್ನು ಗಮನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಪೂರ್ಣಯ್ಯನವರನ್ನು ಕರೆಸಿಕೊಂಡು, ಅರಮನೆಗೆ ಪ್ರವೇಶಿಸುವವರಿಗೆ ವಸ್ತ್ರ ಸಂಹಿತೆ ಜಾರಿಗೆ ತಂದರೆ ಹೇಗಿರುತ್ತದೆ ಎಂದು ಚರ್ಚಿಸಿದ್ದಾರೆ.
ಮಹಾರಾಜರ ಸೂಚನೆಯ ಮೇರೆಗೆ ದಿವಾನ್ ಪೂರ್ಣಯ್ಯ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದರು. ಅದರಂತೆ ರಾಜರನ್ನು ಭೇಟಿ ಮಾಡಲು ಹಾಗೂ ದರ್ಬಾರ್ ಹಾಲ್ ಪ್ರವೇಶಿಸಲು ಬರುವವರು ಷರಾಯಿ ನಿಲುವಂಗಿ, ವಲ್ಲಿ ಅಥವ ಜರತಾರಿ ಕಚ್ಚೆಪಂಚೆ, ಜುಬ್ಬ ಹಾಗೂ ವಲ್ಲಿಯನ್ನು ಧರಿಸಬೇಕೆಂದು ಆಜ್ಞೆ ಹೊರಡಿಸಲಾಯಿತು.


ರಾಜರ ಅಪ್ಪಣೆಯ ಮೇರೆಗೆ ವಸ್ತ್ರಸಂಹಿತೆಯೇನೋ ಜಾರಿಗೆ ಬಂತು. ಆದರೆ ಭೇಟಿ ಮಾಡಲು ಬರುತ್ತಿದ್ದವರ ನಾನಾ ‘ಕೇಶ ವಿನ್ಯಾಸ’ ಸಮಸ್ಯೆಯಾಯಿತು. ಕೆಲವರದು ಉದ್ದ ತಲೆಗೂದಲು, ಇನ್ನು ಕೆಲವರದು ಅರೆತಲೆಗೂದಲು, ಮತ್ತೆ ಕೆಲವರ ಬೋಳು ತಲೆ ! ಇದರಿಂದ ಧರಿಸುತ್ತಿದ್ದ ವಸ್ತ್ರಕ್ಕೆ ಮೆರುಗು ಬರುತ್ತಿರಲಿಲ್ಲ. ಆಗ ಧಿರಿಸಿಗೆ ತಕ್ಕ ಪೇಟ ಧರಿಸಬೇಕೆಂದು ದಿವಾನ್ ಪೂರ್ಣಯ್ಯ ಆದೇಶ ಹೊರಡಿಸಿದರು.


ಪೂರ್ಣಯ್ಯನವರು ಬದುಕಿರುವವರೆಗೂ ಮರಾಠ ಮಾದರಿಯ ಪೇಟ ಬಳಕೆಯಾಗುತ್ತಿತ್ತು. ಅವರ ನಿಧನಾನಂತರ ಅಂದರೆ ೧೮೨೦ರ ನಂತರ ಪೇಟದ ಮಾದರಿಯನ್ನು ಬದಲಿಸಿ ಅದನ್ನು ಮೈಸೂರು ಪೇಟ ಎಂದು ಹೆಸರಿಸಲಾಯಿತು.
ರೇಷ್ಮೇ ಬಟ್ಟೆಯನ್ನು ಬಳಸಿ ತಯಾರಿಸಿದ ಹಾಗೂ ೩ ಇಂಚು ಜರತಾರಿ ಅಂಚುಳ್ಳ ಪೇಟವನ್ನು ಅಧಿಕಾರಿಗಳು ಹಾಗೂ ರಾಜಪರಿವಾರದವರು ಮತ್ತು ಗಣ್ಯರು ಬಳಸಬೇಕೆಂದು ಕಡ್ಡಾಯಗೊಳಿಸಲಾಯಿತು. ನಂತರದ ದಿನಗಳಲ್ಲಿ ದರ್ಬಾರ್ ಹಾಲ್‌ನಲ್ಲಿ ನಡೆಯುವ ಸಮಾರಂಭ, ದಸರಾ ಹಬ್ಬ ಮುಂತಾದ ದಿನಗಳಲ್ಲಿ ಅರಮನೆಗೆ ಬೇಟಿ ನೀಡುವ ಎಲ್ಲರೂ ಮೈಸೂರು ಪೇಟದೊಂದಿಗೆ ಠಾಕು ಠೀಕಾಗಿ ಅರಮನೆಗೆ ಬರತೊಡಗಿದರು.

ಮುಂದೆ ಅರಸೊತ್ತಿಗೆ ಅಳಿದರೂ ಪೇಟ ಉಳಿಯಿತು. ಜನಸಾಮಾನ್ಯರೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಪೇಟ ಬಳಸಲಾರಂಭಿಸಿದರು. ಈಗ ಬಟ್ಟೆಯಲ್ಲಿ ನೂರಿನ್ನೂರು ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಪೇಟವೂ ‘ಮೈಸೂರು ಪೇಟ’ ಎಂದು ಕರೆಸಿಕೊಳ್ಳುತ್ತಿದೆ. ಮೈಸೂರಿನ ಇತಿಹಾಸದ ಭಾಗವಾಗಿರುವ ಮೈಸೂರು ಪೇಟದ ಘನತೆಯನ್ನು ಕಾಪಾಡುವ ಜವಾಬ್ದಾರಿ ಮೈಸೂರಿಗರ ಮೇಲಿದೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

2 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

10 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

11 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

13 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

14 hours ago