ಆಂದೋಲನ 50

ಅರಸರ ಬಳುವಳಿ ಮೈಸೂರು ಪೇಟ

-ದಿನೇಶ್ ಕುಮಾರ್

ಪೇಟ ಎಂದರೆ ಸಾಕು ಈ ಹೆಸರಿನ ಜೊತೆಗೆ ತಳುಕು ಹಾಕಿಕೊಳ್ಳುವ ಮೊದಲ ಹೆಸರು ಮೈಸೂರು. ಮೈಸೂರು ಪೇಟ ಎಂದರೆ ಅದು ಗೌರವದ ಸಂಕೇತ. ಸಾಂಸ್ಕೃತಿಕ ನಗರಿಗೆ ಆಗಮಿಸುವ ಅತಿಥಿ ಗಣ್ಯರೆಲ್ಲರಿಗೂ ತೊಡಿಸುವ ಮೈಸೂರು ಪೇಟಕ್ಕೆ ಎರಡು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ೧೮೧೦ರ ದಶಕದ ಮಾತು. ಅಂದು ರಾಜರನ್ನು ಭೇಟಿ ಮಾಡಲು ಬರುವ ಗಣ್ಯರು, ಅಧಿಕಾರಿಗಳು ಥರಾವರಿ ಧಿರಿಸುಗಳನ್ನು ಧರಿಸಿ ಬರುತ್ತಿದ್ದುದನ್ನು ಗಮನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಪೂರ್ಣಯ್ಯನವರನ್ನು ಕರೆಸಿಕೊಂಡು, ಅರಮನೆಗೆ ಪ್ರವೇಶಿಸುವವರಿಗೆ ವಸ್ತ್ರ ಸಂಹಿತೆ ಜಾರಿಗೆ ತಂದರೆ ಹೇಗಿರುತ್ತದೆ ಎಂದು ಚರ್ಚಿಸಿದ್ದಾರೆ.
ಮಹಾರಾಜರ ಸೂಚನೆಯ ಮೇರೆಗೆ ದಿವಾನ್ ಪೂರ್ಣಯ್ಯ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದರು. ಅದರಂತೆ ರಾಜರನ್ನು ಭೇಟಿ ಮಾಡಲು ಹಾಗೂ ದರ್ಬಾರ್ ಹಾಲ್ ಪ್ರವೇಶಿಸಲು ಬರುವವರು ಷರಾಯಿ ನಿಲುವಂಗಿ, ವಲ್ಲಿ ಅಥವ ಜರತಾರಿ ಕಚ್ಚೆಪಂಚೆ, ಜುಬ್ಬ ಹಾಗೂ ವಲ್ಲಿಯನ್ನು ಧರಿಸಬೇಕೆಂದು ಆಜ್ಞೆ ಹೊರಡಿಸಲಾಯಿತು.


ರಾಜರ ಅಪ್ಪಣೆಯ ಮೇರೆಗೆ ವಸ್ತ್ರಸಂಹಿತೆಯೇನೋ ಜಾರಿಗೆ ಬಂತು. ಆದರೆ ಭೇಟಿ ಮಾಡಲು ಬರುತ್ತಿದ್ದವರ ನಾನಾ ‘ಕೇಶ ವಿನ್ಯಾಸ’ ಸಮಸ್ಯೆಯಾಯಿತು. ಕೆಲವರದು ಉದ್ದ ತಲೆಗೂದಲು, ಇನ್ನು ಕೆಲವರದು ಅರೆತಲೆಗೂದಲು, ಮತ್ತೆ ಕೆಲವರ ಬೋಳು ತಲೆ ! ಇದರಿಂದ ಧರಿಸುತ್ತಿದ್ದ ವಸ್ತ್ರಕ್ಕೆ ಮೆರುಗು ಬರುತ್ತಿರಲಿಲ್ಲ. ಆಗ ಧಿರಿಸಿಗೆ ತಕ್ಕ ಪೇಟ ಧರಿಸಬೇಕೆಂದು ದಿವಾನ್ ಪೂರ್ಣಯ್ಯ ಆದೇಶ ಹೊರಡಿಸಿದರು.


ಪೂರ್ಣಯ್ಯನವರು ಬದುಕಿರುವವರೆಗೂ ಮರಾಠ ಮಾದರಿಯ ಪೇಟ ಬಳಕೆಯಾಗುತ್ತಿತ್ತು. ಅವರ ನಿಧನಾನಂತರ ಅಂದರೆ ೧೮೨೦ರ ನಂತರ ಪೇಟದ ಮಾದರಿಯನ್ನು ಬದಲಿಸಿ ಅದನ್ನು ಮೈಸೂರು ಪೇಟ ಎಂದು ಹೆಸರಿಸಲಾಯಿತು.
ರೇಷ್ಮೇ ಬಟ್ಟೆಯನ್ನು ಬಳಸಿ ತಯಾರಿಸಿದ ಹಾಗೂ ೩ ಇಂಚು ಜರತಾರಿ ಅಂಚುಳ್ಳ ಪೇಟವನ್ನು ಅಧಿಕಾರಿಗಳು ಹಾಗೂ ರಾಜಪರಿವಾರದವರು ಮತ್ತು ಗಣ್ಯರು ಬಳಸಬೇಕೆಂದು ಕಡ್ಡಾಯಗೊಳಿಸಲಾಯಿತು. ನಂತರದ ದಿನಗಳಲ್ಲಿ ದರ್ಬಾರ್ ಹಾಲ್‌ನಲ್ಲಿ ನಡೆಯುವ ಸಮಾರಂಭ, ದಸರಾ ಹಬ್ಬ ಮುಂತಾದ ದಿನಗಳಲ್ಲಿ ಅರಮನೆಗೆ ಬೇಟಿ ನೀಡುವ ಎಲ್ಲರೂ ಮೈಸೂರು ಪೇಟದೊಂದಿಗೆ ಠಾಕು ಠೀಕಾಗಿ ಅರಮನೆಗೆ ಬರತೊಡಗಿದರು.

ಮುಂದೆ ಅರಸೊತ್ತಿಗೆ ಅಳಿದರೂ ಪೇಟ ಉಳಿಯಿತು. ಜನಸಾಮಾನ್ಯರೂ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಪೇಟ ಬಳಸಲಾರಂಭಿಸಿದರು. ಈಗ ಬಟ್ಟೆಯಲ್ಲಿ ನೂರಿನ್ನೂರು ರೂ. ವೆಚ್ಚದಲ್ಲಿ ತಯಾರಾಗುತ್ತಿರುವ ಪೇಟವೂ ‘ಮೈಸೂರು ಪೇಟ’ ಎಂದು ಕರೆಸಿಕೊಳ್ಳುತ್ತಿದೆ. ಮೈಸೂರಿನ ಇತಿಹಾಸದ ಭಾಗವಾಗಿರುವ ಮೈಸೂರು ಪೇಟದ ಘನತೆಯನ್ನು ಕಾಪಾಡುವ ಜವಾಬ್ದಾರಿ ಮೈಸೂರಿಗರ ಮೇಲಿದೆ.

andolanait

Recent Posts

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

2 hours ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

6 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

6 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

6 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

6 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago