ನಂಜನಗೂಡಿಗೆ ಪ್ರಥಮ ಬಾರಿಗೆ ರೈಲು ಮಾರ್ಗವನ್ನು ೧೮೯೧ರ ಡಿಸೆಂಬರ್ ೧ರಂದು ನಿರ್ಮಾಣವಾಯಿತು. ಅದಕ್ಕೆ ೬ ಲಕ್ಷ ರೂ. ವೆಚ್ಚವಾಗಿದೆ. ಎಫ್ಸಿಐ ಉಗ್ರಾಣ ಕಟ್ಟೆಗಳ ಮುಂದೆ ಹಳಿಗಳ ಪಕ್ಕದಲ್ಲಿ ರೈಲು ನಿಲ್ದಾಣ ಇತ್ತು.
ಹಾಗಾಗಿಯೇ ಗಣ್ಯರು ರೈಲಿನಲ್ಲಿ ಬಂದಾಗ ವಾಸ್ತವ್ಯಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ಪರಿವೀಕ್ಷಣ ಬಂಗಲೆಯನ್ನು ನಿಲ್ದಾಣಕ್ಕೆ ಸಮೀಪದಲ್ಲಿಯೇ ನಿರ್ಮಿಸಲಾಗಿತ್ತು.
ಈಗಿರುವ ರೈಲು ನಿಲ್ದಾಣ ೧೮೯೯ರ ಜೂನ್ ೧೨ರಂದು ಆರಂಭವಾಯಿತು. ಮೊದಲಿಗೆ ಕಲ್ಲಿದ್ದಲು ಇಂಜಿನ್ನ ರೈಲುಗಾಡಿ ಇತ್ತು. ನಂತರ ಡೀಸೆಲ್ ಇಂಜಿನ್ ಬಂತು. ಇದೀಗ ಈ ರೈಲು ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ವಿದ್ಯುತ್ ಚಾಲಿತ ರೈಲುಗಳ ಸಂಚಾರವೂ ಆರಂಭವಾಗಲಿದೆ.
ನಂಜನಗೂಡಿನಲ್ಲಿ ಮೂರು ರೈಲ್ವೆ ಗೇಟ್ಗಳಿದ್ದು, ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಲ್ದಾಣದ ಸಮೀಪವೇ
ಇರುವ ರೈಲು ಗೇಟ್ ಬಳಿ ಕೆಳ ಸೇತುವೆ ನಿರ್ಮಿಸಲಾಗಿದೆ.
ಅಲ್ಲದೆ, ರೈಲು ನಿಲ್ದಾಣವನ್ನು ಕೂಡ ಮೇಲ್ದರ್ಜೆಗೇರಿಸಲಾಗಿದೆ. ಮೈಸೂರು, ಚಾಮರಾಜನಗರಗಳಿಗೆ ಪ್ರತ್ಯೇಕ ಪ್ಲಾಟ್ಫಾರಂಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ನಿಲ್ದಾಣದಲ್ಲಿ ಪ್ರಯಾಣಿಕರು ಒಂದು ಪ್ಲಾಟ್ಫಾರಂನಿಂದ ಇನ್ನೊಂದು ಪ್ಲಾಟ್ಫಾರಂಗೆ ತೆರಳಲು ಮೇಲ್ಸೇತುವೆಯನ್ನೂ ನಿರ್ಮಿಸಲಾಗಿದೆ.
ಮುಂಬೈ: ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ಗಳ…
ಬೆಂಗಳೂರು: ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ…
ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40 ಮರಗಳ ಕಟಾವು ಮಾಡಿರುವ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೈಸೂರಿನ ಅರಣ್ಯಾಧಿಕಾರಿಗಳಿಂದ…
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ…
ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ…
ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ…