ಆಂದೋಲನ 50

1891ರಲ್ಲಿ ನಂಜನಗೂಡು ರೈಲು ನಿಲ್ದಾಣ ಸ್ಥಾಪನೆ

ನಂಜನಗೂಡಿಗೆ ಪ್ರಥಮ ಬಾರಿಗೆ ರೈಲು ಮಾರ್ಗವನ್ನು ೧೮೯೧ರ ಡಿಸೆಂಬರ್ ೧ರಂದು ನಿರ್ಮಾಣವಾಯಿತು. ಅದಕ್ಕೆ ೬ ಲಕ್ಷ ರೂ. ವೆಚ್ಚವಾಗಿದೆ. ಎಫ್‌ಸಿಐ ಉಗ್ರಾಣ ಕಟ್ಟೆಗಳ ಮುಂದೆ ಹಳಿಗಳ ಪಕ್ಕದಲ್ಲಿ ರೈಲು ನಿಲ್ದಾಣ ಇತ್ತು.

ಹಾಗಾಗಿಯೇ ಗಣ್ಯರು ರೈಲಿನಲ್ಲಿ ಬಂದಾಗ ವಾಸ್ತವ್ಯಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ಪರಿವೀಕ್ಷಣ ಬಂಗಲೆಯನ್ನು ನಿಲ್ದಾಣಕ್ಕೆ ಸಮೀಪದಲ್ಲಿಯೇ ನಿರ್ಮಿಸಲಾಗಿತ್ತು.

ಈಗಿರುವ ರೈಲು ನಿಲ್ದಾಣ ೧೮೯೯ರ ಜೂನ್ ೧೨ರಂದು ಆರಂಭವಾಯಿತು. ಮೊದಲಿಗೆ ಕಲ್ಲಿದ್ದಲು ಇಂಜಿನ್‌ನ ರೈಲುಗಾಡಿ ಇತ್ತು. ನಂತರ ಡೀಸೆಲ್ ಇಂಜಿನ್ ಬಂತು. ಇದೀಗ ಈ ರೈಲು ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ವಿದ್ಯುತ್ ಚಾಲಿತ ರೈಲುಗಳ ಸಂಚಾರವೂ ಆರಂಭವಾಗಲಿದೆ.

ನಂಜನಗೂಡಿನಲ್ಲಿ ಮೂರು ರೈಲ್ವೆ ಗೇಟ್‌ಗಳಿದ್ದು, ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಲ್ದಾಣದ ಸಮೀಪವೇ

ಇರುವ ರೈಲು ಗೇಟ್ ಬಳಿ ಕೆಳ ಸೇತುವೆ ನಿರ್ಮಿಸಲಾಗಿದೆ.

ಅಲ್ಲದೆ, ರೈಲು ನಿಲ್ದಾಣವನ್ನು ಕೂಡ ಮೇಲ್ದರ್ಜೆಗೇರಿಸಲಾಗಿದೆ. ಮೈಸೂರು, ಚಾಮರಾಜನಗರಗಳಿಗೆ ಪ್ರತ್ಯೇಕ ಪ್ಲಾಟ್‌ಫಾರಂಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ನಿಲ್ದಾಣದಲ್ಲಿ ಪ್ರಯಾಣಿಕರು ಒಂದು ಪ್ಲಾಟ್‌ಫಾರಂನಿಂದ ಇನ್ನೊಂದು ಪ್ಲಾಟ್‌ಫಾರಂಗೆ ತೆರಳಲು ಮೇಲ್ಸೇತುವೆಯನ್ನೂ ನಿರ್ಮಿಸಲಾಗಿದೆ.

andolana

Recent Posts

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

38 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago