ನಂಜನಗೂಡಿಗೆ ಪ್ರಥಮ ಬಾರಿಗೆ ರೈಲು ಮಾರ್ಗವನ್ನು ೧೮೯೧ರ ಡಿಸೆಂಬರ್ ೧ರಂದು ನಿರ್ಮಾಣವಾಯಿತು. ಅದಕ್ಕೆ ೬ ಲಕ್ಷ ರೂ. ವೆಚ್ಚವಾಗಿದೆ. ಎಫ್ಸಿಐ ಉಗ್ರಾಣ ಕಟ್ಟೆಗಳ ಮುಂದೆ ಹಳಿಗಳ ಪಕ್ಕದಲ್ಲಿ ರೈಲು ನಿಲ್ದಾಣ ಇತ್ತು.
ಹಾಗಾಗಿಯೇ ಗಣ್ಯರು ರೈಲಿನಲ್ಲಿ ಬಂದಾಗ ವಾಸ್ತವ್ಯಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ಪರಿವೀಕ್ಷಣ ಬಂಗಲೆಯನ್ನು ನಿಲ್ದಾಣಕ್ಕೆ ಸಮೀಪದಲ್ಲಿಯೇ ನಿರ್ಮಿಸಲಾಗಿತ್ತು.
ಈಗಿರುವ ರೈಲು ನಿಲ್ದಾಣ ೧೮೯೯ರ ಜೂನ್ ೧೨ರಂದು ಆರಂಭವಾಯಿತು. ಮೊದಲಿಗೆ ಕಲ್ಲಿದ್ದಲು ಇಂಜಿನ್ನ ರೈಲುಗಾಡಿ ಇತ್ತು. ನಂತರ ಡೀಸೆಲ್ ಇಂಜಿನ್ ಬಂತು. ಇದೀಗ ಈ ರೈಲು ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ವಿದ್ಯುತ್ ಚಾಲಿತ ರೈಲುಗಳ ಸಂಚಾರವೂ ಆರಂಭವಾಗಲಿದೆ.
ನಂಜನಗೂಡಿನಲ್ಲಿ ಮೂರು ರೈಲ್ವೆ ಗೇಟ್ಗಳಿದ್ದು, ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಲ್ದಾಣದ ಸಮೀಪವೇ
ಇರುವ ರೈಲು ಗೇಟ್ ಬಳಿ ಕೆಳ ಸೇತುವೆ ನಿರ್ಮಿಸಲಾಗಿದೆ.
ಅಲ್ಲದೆ, ರೈಲು ನಿಲ್ದಾಣವನ್ನು ಕೂಡ ಮೇಲ್ದರ್ಜೆಗೇರಿಸಲಾಗಿದೆ. ಮೈಸೂರು, ಚಾಮರಾಜನಗರಗಳಿಗೆ ಪ್ರತ್ಯೇಕ ಪ್ಲಾಟ್ಫಾರಂಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ನಿಲ್ದಾಣದಲ್ಲಿ ಪ್ರಯಾಣಿಕರು ಒಂದು ಪ್ಲಾಟ್ಫಾರಂನಿಂದ ಇನ್ನೊಂದು ಪ್ಲಾಟ್ಫಾರಂಗೆ ತೆರಳಲು ಮೇಲ್ಸೇತುವೆಯನ್ನೂ ನಿರ್ಮಿಸಲಾಗಿದೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…