ನಂಜನಗೂಡಿಗೆ ಪ್ರಥಮ ಬಾರಿಗೆ ರೈಲು ಮಾರ್ಗವನ್ನು ೧೮೯೧ರ ಡಿಸೆಂಬರ್ ೧ರಂದು ನಿರ್ಮಾಣವಾಯಿತು. ಅದಕ್ಕೆ ೬ ಲಕ್ಷ ರೂ. ವೆಚ್ಚವಾಗಿದೆ. ಎಫ್ಸಿಐ ಉಗ್ರಾಣ ಕಟ್ಟೆಗಳ ಮುಂದೆ ಹಳಿಗಳ ಪಕ್ಕದಲ್ಲಿ ರೈಲು ನಿಲ್ದಾಣ ಇತ್ತು.
ಹಾಗಾಗಿಯೇ ಗಣ್ಯರು ರೈಲಿನಲ್ಲಿ ಬಂದಾಗ ವಾಸ್ತವ್ಯಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ಪರಿವೀಕ್ಷಣ ಬಂಗಲೆಯನ್ನು ನಿಲ್ದಾಣಕ್ಕೆ ಸಮೀಪದಲ್ಲಿಯೇ ನಿರ್ಮಿಸಲಾಗಿತ್ತು.
ಈಗಿರುವ ರೈಲು ನಿಲ್ದಾಣ ೧೮೯೯ರ ಜೂನ್ ೧೨ರಂದು ಆರಂಭವಾಯಿತು. ಮೊದಲಿಗೆ ಕಲ್ಲಿದ್ದಲು ಇಂಜಿನ್ನ ರೈಲುಗಾಡಿ ಇತ್ತು. ನಂತರ ಡೀಸೆಲ್ ಇಂಜಿನ್ ಬಂತು. ಇದೀಗ ಈ ರೈಲು ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ವಿದ್ಯುತ್ ಚಾಲಿತ ರೈಲುಗಳ ಸಂಚಾರವೂ ಆರಂಭವಾಗಲಿದೆ.
ನಂಜನಗೂಡಿನಲ್ಲಿ ಮೂರು ರೈಲ್ವೆ ಗೇಟ್ಗಳಿದ್ದು, ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಲ್ದಾಣದ ಸಮೀಪವೇ
ಇರುವ ರೈಲು ಗೇಟ್ ಬಳಿ ಕೆಳ ಸೇತುವೆ ನಿರ್ಮಿಸಲಾಗಿದೆ.
ಅಲ್ಲದೆ, ರೈಲು ನಿಲ್ದಾಣವನ್ನು ಕೂಡ ಮೇಲ್ದರ್ಜೆಗೇರಿಸಲಾಗಿದೆ. ಮೈಸೂರು, ಚಾಮರಾಜನಗರಗಳಿಗೆ ಪ್ರತ್ಯೇಕ ಪ್ಲಾಟ್ಫಾರಂಗಳನ್ನು ನಿರ್ಮಿಸಲಾಗಿದೆ. ಅಲ್ಲದೆ, ನಿಲ್ದಾಣದಲ್ಲಿ ಪ್ರಯಾಣಿಕರು ಒಂದು ಪ್ಲಾಟ್ಫಾರಂನಿಂದ ಇನ್ನೊಂದು ಪ್ಲಾಟ್ಫಾರಂಗೆ ತೆರಳಲು ಮೇಲ್ಸೇತುವೆಯನ್ನೂ ನಿರ್ಮಿಸಲಾಗಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…