ಆಂದೋಲನ 50

ಪ್ರಭಾವಶಾಲಿ ಅಮಲ್ದಾರರಾಗಿದ್ದ ನರಸಣ್ಣ

ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ನಾರಾಯಣರಾಯರ ಅಗ್ರಹಾರದ ಪಕ್ಕದಲ್ಲಿಯೇ ನರಸಣ್ಣನವರ ಅಗ್ರಹಾರ ಇದೆ. ಇಲ್ಲಿ ಅಮಲ್ದಾರರಾಗಿದ್ದ ನರಸಣ್ಣನವರು ಮೈಸೂರು ರಾಜ್ಯದ ಅತ್ಯಂತ ಪ್ರಭಾವಶಾಲಿ ಅಮಲ್ದಾರರಲ್ಲಿ ಒಬ್ಬರಾಗಿದ್ದರು. ಈ ಊರಿನ ದೇವಸ್ಥಾನದಲ್ಲಿ ಶಿವಕೂಟ ಪ್ರಾರಂಭ ಮಾಡಿಸಿದವರು ಇವರೇ. ಇದಕ್ಕಾಗಿ ನೂರಾರು ಎಕರೆ ಜಮೀನನ್ನು ಜನರಿಂದ ದಾನ ಪಡೆದು ಶಿವಕೂಟದ ವ್ಯವಸ್ಥೆ ಮಾಡಿದರು. ನಂಜನಗೂಡಿನ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನವೂ ನಡೆಯುತ್ತಿದ್ದ ವಿಶೇಷ ಪೂಜೆಯೊಂದಿಗೆ ರಥೋತ್ಸವ ನಡೆಯಬೇಕೆಂಬ ಕಟ್ಟಳೆಯನ್ನು ಜಾರಿಗೆ ತಂದ ಇವರು ಅದಕ್ಕಾಗಿ ಒಂದು ತೇರನ್ನು ಮಾಡಿಸಿಕೊಟ್ಟರು.

ಆಗಿನ ಕಾಲದಲ್ಲಿ ಅಮಲ್ದಾರರೇ ಸರ್ಕಾರದ ಎಲ್ಲ ಅಂಗಗಳ ಮುಖ್ಯಸ್ಥರಾಗಿ ಇರುತ್ತಿದ್ದರು ಶ್ರೀಕಂಠೇಶ್ವರ ದೇವಾಲಯದ ಆಡಳಿತದ ಮೇಲ್ವಿಚಾರಣೆಯೂ ಅವರದ್ದೇ ಆಗಿತ್ತು. ದೇವಾಲಯದ ಆಡಳಿತದಲ್ಲಿ ಪೂಜೆ ಪುನಸ್ಕಾರಗಳಲ್ಲಿ ಅನೇಕ ಮಾರ್ಪಾಡುಗಳನ್ನು ಮಾಡಿ ಶಿಸ್ತು ಬದ್ಧವಾದ ವಾತಾವರಣವನ್ನು ನಿರ್ಮಿಸಿದರು. ಅಮಲ್ದಾರರಾಗಿ ತಾವು ಹೋದ ಕಡೆಯೆಲ್ಲ ವಾಸಕ್ಕಾಗಿ ಕಟ್ಟಿಸಿದ ಮನೆಯನ್ನು ಅಲ್ಲಿಂದ ವರ್ಗವಾಗಿ ಬೇರೆಡೆಗೆ ಹೋಗುವ ಸಮಯದಲ್ಲಿ ಶ್ರೋತ್ರಿಯರಾದ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು ಬಿಡುತ್ತಿದ್ದರಂತೆ. ನಂಜನಗೂಡು ಈಗಿರುವ ನರಸಣ್ಣನವರ ಅಗ್ರಹಾರವನ್ನು ಕಟ್ಟಿಸಿದವರು ಇವರಾಗಿದ್ದರು. ಇಲ್ಲಿ ಪುರಸಭಾಧ್ಯಕ್ಷರಾಗಿದ್ದ ಇ ಆರ್ ಶಂಕರ್ ಅವರ ಇವರ ಮೊಮ್ಮಕ್ಕಳು ಆಗಿದ್ದರು.

andolana

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

47 mins ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

1 hour ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

1 hour ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

1 hour ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

1 hour ago