ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ನಾರಾಯಣರಾಯರ ಅಗ್ರಹಾರದ ಪಕ್ಕದಲ್ಲಿಯೇ ನರಸಣ್ಣನವರ ಅಗ್ರಹಾರ ಇದೆ. ಇಲ್ಲಿ ಅಮಲ್ದಾರರಾಗಿದ್ದ ನರಸಣ್ಣನವರು ಮೈಸೂರು ರಾಜ್ಯದ ಅತ್ಯಂತ ಪ್ರಭಾವಶಾಲಿ ಅಮಲ್ದಾರರಲ್ಲಿ ಒಬ್ಬರಾಗಿದ್ದರು. ಈ ಊರಿನ ದೇವಸ್ಥಾನದಲ್ಲಿ ಶಿವಕೂಟ ಪ್ರಾರಂಭ ಮಾಡಿಸಿದವರು ಇವರೇ. ಇದಕ್ಕಾಗಿ ನೂರಾರು ಎಕರೆ ಜಮೀನನ್ನು ಜನರಿಂದ ದಾನ ಪಡೆದು ಶಿವಕೂಟದ ವ್ಯವಸ್ಥೆ ಮಾಡಿದರು. ನಂಜನಗೂಡಿನ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನವೂ ನಡೆಯುತ್ತಿದ್ದ ವಿಶೇಷ ಪೂಜೆಯೊಂದಿಗೆ ರಥೋತ್ಸವ ನಡೆಯಬೇಕೆಂಬ ಕಟ್ಟಳೆಯನ್ನು ಜಾರಿಗೆ ತಂದ ಇವರು ಅದಕ್ಕಾಗಿ ಒಂದು ತೇರನ್ನು ಮಾಡಿಸಿಕೊಟ್ಟರು.
ಆಗಿನ ಕಾಲದಲ್ಲಿ ಅಮಲ್ದಾರರೇ ಸರ್ಕಾರದ ಎಲ್ಲ ಅಂಗಗಳ ಮುಖ್ಯಸ್ಥರಾಗಿ ಇರುತ್ತಿದ್ದರು ಶ್ರೀಕಂಠೇಶ್ವರ ದೇವಾಲಯದ ಆಡಳಿತದ ಮೇಲ್ವಿಚಾರಣೆಯೂ ಅವರದ್ದೇ ಆಗಿತ್ತು. ದೇವಾಲಯದ ಆಡಳಿತದಲ್ಲಿ ಪೂಜೆ ಪುನಸ್ಕಾರಗಳಲ್ಲಿ ಅನೇಕ ಮಾರ್ಪಾಡುಗಳನ್ನು ಮಾಡಿ ಶಿಸ್ತು ಬದ್ಧವಾದ ವಾತಾವರಣವನ್ನು ನಿರ್ಮಿಸಿದರು. ಅಮಲ್ದಾರರಾಗಿ ತಾವು ಹೋದ ಕಡೆಯೆಲ್ಲ ವಾಸಕ್ಕಾಗಿ ಕಟ್ಟಿಸಿದ ಮನೆಯನ್ನು ಅಲ್ಲಿಂದ ವರ್ಗವಾಗಿ ಬೇರೆಡೆಗೆ ಹೋಗುವ ಸಮಯದಲ್ಲಿ ಶ್ರೋತ್ರಿಯರಾದ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು ಬಿಡುತ್ತಿದ್ದರಂತೆ. ನಂಜನಗೂಡು ಈಗಿರುವ ನರಸಣ್ಣನವರ ಅಗ್ರಹಾರವನ್ನು ಕಟ್ಟಿಸಿದವರು ಇವರಾಗಿದ್ದರು. ಇಲ್ಲಿ ಪುರಸಭಾಧ್ಯಕ್ಷರಾಗಿದ್ದ ಇ ಆರ್ ಶಂಕರ್ ಅವರ ಇವರ ಮೊಮ್ಮಕ್ಕಳು ಆಗಿದ್ದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…