ಆಂದೋಲನ 50

ಪ್ರಭಾವಶಾಲಿ ಅಮಲ್ದಾರರಾಗಿದ್ದ ನರಸಣ್ಣ

ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ನಾರಾಯಣರಾಯರ ಅಗ್ರಹಾರದ ಪಕ್ಕದಲ್ಲಿಯೇ ನರಸಣ್ಣನವರ ಅಗ್ರಹಾರ ಇದೆ. ಇಲ್ಲಿ ಅಮಲ್ದಾರರಾಗಿದ್ದ ನರಸಣ್ಣನವರು ಮೈಸೂರು ರಾಜ್ಯದ ಅತ್ಯಂತ ಪ್ರಭಾವಶಾಲಿ ಅಮಲ್ದಾರರಲ್ಲಿ ಒಬ್ಬರಾಗಿದ್ದರು. ಈ ಊರಿನ ದೇವಸ್ಥಾನದಲ್ಲಿ ಶಿವಕೂಟ ಪ್ರಾರಂಭ ಮಾಡಿಸಿದವರು ಇವರೇ. ಇದಕ್ಕಾಗಿ ನೂರಾರು ಎಕರೆ ಜಮೀನನ್ನು ಜನರಿಂದ ದಾನ ಪಡೆದು ಶಿವಕೂಟದ ವ್ಯವಸ್ಥೆ ಮಾಡಿದರು. ನಂಜನಗೂಡಿನ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನವೂ ನಡೆಯುತ್ತಿದ್ದ ವಿಶೇಷ ಪೂಜೆಯೊಂದಿಗೆ ರಥೋತ್ಸವ ನಡೆಯಬೇಕೆಂಬ ಕಟ್ಟಳೆಯನ್ನು ಜಾರಿಗೆ ತಂದ ಇವರು ಅದಕ್ಕಾಗಿ ಒಂದು ತೇರನ್ನು ಮಾಡಿಸಿಕೊಟ್ಟರು.

ಆಗಿನ ಕಾಲದಲ್ಲಿ ಅಮಲ್ದಾರರೇ ಸರ್ಕಾರದ ಎಲ್ಲ ಅಂಗಗಳ ಮುಖ್ಯಸ್ಥರಾಗಿ ಇರುತ್ತಿದ್ದರು ಶ್ರೀಕಂಠೇಶ್ವರ ದೇವಾಲಯದ ಆಡಳಿತದ ಮೇಲ್ವಿಚಾರಣೆಯೂ ಅವರದ್ದೇ ಆಗಿತ್ತು. ದೇವಾಲಯದ ಆಡಳಿತದಲ್ಲಿ ಪೂಜೆ ಪುನಸ್ಕಾರಗಳಲ್ಲಿ ಅನೇಕ ಮಾರ್ಪಾಡುಗಳನ್ನು ಮಾಡಿ ಶಿಸ್ತು ಬದ್ಧವಾದ ವಾತಾವರಣವನ್ನು ನಿರ್ಮಿಸಿದರು. ಅಮಲ್ದಾರರಾಗಿ ತಾವು ಹೋದ ಕಡೆಯೆಲ್ಲ ವಾಸಕ್ಕಾಗಿ ಕಟ್ಟಿಸಿದ ಮನೆಯನ್ನು ಅಲ್ಲಿಂದ ವರ್ಗವಾಗಿ ಬೇರೆಡೆಗೆ ಹೋಗುವ ಸಮಯದಲ್ಲಿ ಶ್ರೋತ್ರಿಯರಾದ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು ಬಿಡುತ್ತಿದ್ದರಂತೆ. ನಂಜನಗೂಡು ಈಗಿರುವ ನರಸಣ್ಣನವರ ಅಗ್ರಹಾರವನ್ನು ಕಟ್ಟಿಸಿದವರು ಇವರಾಗಿದ್ದರು. ಇಲ್ಲಿ ಪುರಸಭಾಧ್ಯಕ್ಷರಾಗಿದ್ದ ಇ ಆರ್ ಶಂಕರ್ ಅವರ ಇವರ ಮೊಮ್ಮಕ್ಕಳು ಆಗಿದ್ದರು.

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago