ಆಂದೋಲನ 50

ಪ್ರಭಾವಶಾಲಿ ಅಮಲ್ದಾರರಾಗಿದ್ದ ನರಸಣ್ಣ

ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ನಾರಾಯಣರಾಯರ ಅಗ್ರಹಾರದ ಪಕ್ಕದಲ್ಲಿಯೇ ನರಸಣ್ಣನವರ ಅಗ್ರಹಾರ ಇದೆ. ಇಲ್ಲಿ ಅಮಲ್ದಾರರಾಗಿದ್ದ ನರಸಣ್ಣನವರು ಮೈಸೂರು ರಾಜ್ಯದ ಅತ್ಯಂತ ಪ್ರಭಾವಶಾಲಿ ಅಮಲ್ದಾರರಲ್ಲಿ ಒಬ್ಬರಾಗಿದ್ದರು. ಈ ಊರಿನ ದೇವಸ್ಥಾನದಲ್ಲಿ ಶಿವಕೂಟ ಪ್ರಾರಂಭ ಮಾಡಿಸಿದವರು ಇವರೇ. ಇದಕ್ಕಾಗಿ ನೂರಾರು ಎಕರೆ ಜಮೀನನ್ನು ಜನರಿಂದ ದಾನ ಪಡೆದು ಶಿವಕೂಟದ ವ್ಯವಸ್ಥೆ ಮಾಡಿದರು. ನಂಜನಗೂಡಿನ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನವೂ ನಡೆಯುತ್ತಿದ್ದ ವಿಶೇಷ ಪೂಜೆಯೊಂದಿಗೆ ರಥೋತ್ಸವ ನಡೆಯಬೇಕೆಂಬ ಕಟ್ಟಳೆಯನ್ನು ಜಾರಿಗೆ ತಂದ ಇವರು ಅದಕ್ಕಾಗಿ ಒಂದು ತೇರನ್ನು ಮಾಡಿಸಿಕೊಟ್ಟರು.

ಆಗಿನ ಕಾಲದಲ್ಲಿ ಅಮಲ್ದಾರರೇ ಸರ್ಕಾರದ ಎಲ್ಲ ಅಂಗಗಳ ಮುಖ್ಯಸ್ಥರಾಗಿ ಇರುತ್ತಿದ್ದರು ಶ್ರೀಕಂಠೇಶ್ವರ ದೇವಾಲಯದ ಆಡಳಿತದ ಮೇಲ್ವಿಚಾರಣೆಯೂ ಅವರದ್ದೇ ಆಗಿತ್ತು. ದೇವಾಲಯದ ಆಡಳಿತದಲ್ಲಿ ಪೂಜೆ ಪುನಸ್ಕಾರಗಳಲ್ಲಿ ಅನೇಕ ಮಾರ್ಪಾಡುಗಳನ್ನು ಮಾಡಿ ಶಿಸ್ತು ಬದ್ಧವಾದ ವಾತಾವರಣವನ್ನು ನಿರ್ಮಿಸಿದರು. ಅಮಲ್ದಾರರಾಗಿ ತಾವು ಹೋದ ಕಡೆಯೆಲ್ಲ ವಾಸಕ್ಕಾಗಿ ಕಟ್ಟಿಸಿದ ಮನೆಯನ್ನು ಅಲ್ಲಿಂದ ವರ್ಗವಾಗಿ ಬೇರೆಡೆಗೆ ಹೋಗುವ ಸಮಯದಲ್ಲಿ ಶ್ರೋತ್ರಿಯರಾದ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟು ಬಿಡುತ್ತಿದ್ದರಂತೆ. ನಂಜನಗೂಡು ಈಗಿರುವ ನರಸಣ್ಣನವರ ಅಗ್ರಹಾರವನ್ನು ಕಟ್ಟಿಸಿದವರು ಇವರಾಗಿದ್ದರು. ಇಲ್ಲಿ ಪುರಸಭಾಧ್ಯಕ್ಷರಾಗಿದ್ದ ಇ ಆರ್ ಶಂಕರ್ ಅವರ ಇವರ ಮೊಮ್ಮಕ್ಕಳು ಆಗಿದ್ದರು.

andolana

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

1 hour ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

3 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

4 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

5 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago