ಆಂದೋಲನ 50

ನಂ… ಜನರ… ಗೂಡು !

ನಂಜುಂಡನ ನೆಲೆ ವೀಡು
ರಸ ಬಾಳೆಯ ಬೀಡು
ನಂ ಜನರ ಗೂಡು
ನಮ್ಮ ಹೆಮ್ಮೆಯ ನಂಜನಗೂಡು

ಜುಳು ಜುಳು ಹರಿಯುತ
ತೀರ್ಥಕ್ಷೇತ್ರವಾಗಿಹುದಿಲ್ಲಿ
ಕಪಿಲೆಯ ಮಡಿಲು
ಹಚ್ಚಹಸಿರಾಗಿಹುದು
ಮಾತೆಯ ಒಡಲು!

ಸುತ್ತಮುತ್ತೆಲ್ಲ ಸುಕ್ಷೇತ್ರಗಳ ಲೀಲೆ
ಸುತ್ತೂರು, ದೇವನೂರು
ಸನ್ನಿಧಿಗಳ ಸಂಗಮ
ಮಲ್ಲನಮೂಲೆ

ಸಿನಿ ಕ್ಷೇತ್ರದ ದಿಗ್ಗಜರು
ಎಚ್‌ ಎಲ್‌ ಏನ್‌ ಸಿಂಹ,
ಜಿ. ವಿ. ಅಯ್ಯರು,
ಮರೆಯಲಾದೀತೆ ಪತ್ರಕರ್ತೆ
ಧೀರ ವನಿತೆ ತಿರುಮಲಾಂಬ

ಎಷ್ಟೊಂದು ಪ್ರಸಿದ್ಧಿ
ಗರಳಪುರಿಯ ಗರಿಗರಿ ಪುರಿ!
ಪಾಮರರೂ ಬಳಸುವ
‘ಪಂಡಿತರ’ ಹಲ್ಲು ಪುಡಿ

ಅಬ್ಬಾ ! ಎಂಥ ಹೆಸರು
ನಮ್ಮೂರ ರಸ್ತೆಗಳಿಗೆ ?!
ಒಂದು ರಾಷ್ಟ್ರಪತಿ ರಸ್ತೆ
ಮತ್ತೊಂದು ‘ರಾಷ್ಟ್ರಪಿತ’ನ ರಸ್ತೆ !

ತಲೆಯೆತ್ತಿವೆಯಿಲ್ಲಿ
ನೂರಾರು ಕೈಗಾರಿಕೆಗಳು
ಅಭಿವೃದ್ಧಿ ಮಾತಾಗಿರಲಿ
ಶಾಂತಿಯ ತೋಟದಲಿ
ನಿತ್ಯ ಅರಳುತ್ತಿವೆ
ಜನಮಾನಸದ ಹೂಗಳು!

-ಮ.ಗು.ಬಸವಣ್ಣ, ಜೆ ಎಸ್‌ ಎಸ್‌ ಸಂಸ್ಥೆ, ಸುತ್ತೂರು, ಮೈಸೂರು.

andolana

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

16 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

21 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

25 mins ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago