ನಂಜುಂಡನ ನೆಲೆ ವೀಡು
ರಸ ಬಾಳೆಯ ಬೀಡು
ನಂ ಜನರ ಗೂಡು
ನಮ್ಮ ಹೆಮ್ಮೆಯ ನಂಜನಗೂಡು
ಜುಳು ಜುಳು ಹರಿಯುತ
ತೀರ್ಥಕ್ಷೇತ್ರವಾಗಿಹುದಿಲ್ಲಿ
ಕಪಿಲೆಯ ಮಡಿಲು
ಹಚ್ಚಹಸಿರಾಗಿಹುದು
ಮಾತೆಯ ಒಡಲು!
ಸುತ್ತಮುತ್ತೆಲ್ಲ ಸುಕ್ಷೇತ್ರಗಳ ಲೀಲೆ
ಸುತ್ತೂರು, ದೇವನೂರು
ಸನ್ನಿಧಿಗಳ ಸಂಗಮ
ಮಲ್ಲನಮೂಲೆ
ಸಿನಿ ಕ್ಷೇತ್ರದ ದಿಗ್ಗಜರು
ಎಚ್ ಎಲ್ ಏನ್ ಸಿಂಹ,
ಜಿ. ವಿ. ಅಯ್ಯರು,
ಮರೆಯಲಾದೀತೆ ಪತ್ರಕರ್ತೆ
ಧೀರ ವನಿತೆ ತಿರುಮಲಾಂಬ
ಎಷ್ಟೊಂದು ಪ್ರಸಿದ್ಧಿ
ಗರಳಪುರಿಯ ಗರಿಗರಿ ಪುರಿ!
ಪಾಮರರೂ ಬಳಸುವ
‘ಪಂಡಿತರ’ ಹಲ್ಲು ಪುಡಿ
ಅಬ್ಬಾ ! ಎಂಥ ಹೆಸರು
ನಮ್ಮೂರ ರಸ್ತೆಗಳಿಗೆ ?!
ಒಂದು ರಾಷ್ಟ್ರಪತಿ ರಸ್ತೆ
ಮತ್ತೊಂದು ‘ರಾಷ್ಟ್ರಪಿತ’ನ ರಸ್ತೆ !
ತಲೆಯೆತ್ತಿವೆಯಿಲ್ಲಿ
ನೂರಾರು ಕೈಗಾರಿಕೆಗಳು
ಅಭಿವೃದ್ಧಿ ಮಾತಾಗಿರಲಿ
ಶಾಂತಿಯ ತೋಟದಲಿ
ನಿತ್ಯ ಅರಳುತ್ತಿವೆ
ಜನಮಾನಸದ ಹೂಗಳು!
-ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು, ಮೈಸೂರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…