ನಂಜುಂಡನ ನೆಲೆ ವೀಡು
ರಸ ಬಾಳೆಯ ಬೀಡು
ನಂ ಜನರ ಗೂಡು
ನಮ್ಮ ಹೆಮ್ಮೆಯ ನಂಜನಗೂಡು
ಜುಳು ಜುಳು ಹರಿಯುತ
ತೀರ್ಥಕ್ಷೇತ್ರವಾಗಿಹುದಿಲ್ಲಿ
ಕಪಿಲೆಯ ಮಡಿಲು
ಹಚ್ಚಹಸಿರಾಗಿಹುದು
ಮಾತೆಯ ಒಡಲು!
ಸುತ್ತಮುತ್ತೆಲ್ಲ ಸುಕ್ಷೇತ್ರಗಳ ಲೀಲೆ
ಸುತ್ತೂರು, ದೇವನೂರು
ಸನ್ನಿಧಿಗಳ ಸಂಗಮ
ಮಲ್ಲನಮೂಲೆ
ಸಿನಿ ಕ್ಷೇತ್ರದ ದಿಗ್ಗಜರು
ಎಚ್ ಎಲ್ ಏನ್ ಸಿಂಹ,
ಜಿ. ವಿ. ಅಯ್ಯರು,
ಮರೆಯಲಾದೀತೆ ಪತ್ರಕರ್ತೆ
ಧೀರ ವನಿತೆ ತಿರುಮಲಾಂಬ
ಎಷ್ಟೊಂದು ಪ್ರಸಿದ್ಧಿ
ಗರಳಪುರಿಯ ಗರಿಗರಿ ಪುರಿ!
ಪಾಮರರೂ ಬಳಸುವ
‘ಪಂಡಿತರ’ ಹಲ್ಲು ಪುಡಿ
ಅಬ್ಬಾ ! ಎಂಥ ಹೆಸರು
ನಮ್ಮೂರ ರಸ್ತೆಗಳಿಗೆ ?!
ಒಂದು ರಾಷ್ಟ್ರಪತಿ ರಸ್ತೆ
ಮತ್ತೊಂದು ‘ರಾಷ್ಟ್ರಪಿತ’ನ ರಸ್ತೆ !
ತಲೆಯೆತ್ತಿವೆಯಿಲ್ಲಿ
ನೂರಾರು ಕೈಗಾರಿಕೆಗಳು
ಅಭಿವೃದ್ಧಿ ಮಾತಾಗಿರಲಿ
ಶಾಂತಿಯ ತೋಟದಲಿ
ನಿತ್ಯ ಅರಳುತ್ತಿವೆ
ಜನಮಾನಸದ ಹೂಗಳು!
-ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು, ಮೈಸೂರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…