ನಂಜುಂಡನ ನೆಲೆ ವೀಡು
ರಸ ಬಾಳೆಯ ಬೀಡು
ನಂ ಜನರ ಗೂಡು
ನಮ್ಮ ಹೆಮ್ಮೆಯ ನಂಜನಗೂಡು
ಜುಳು ಜುಳು ಹರಿಯುತ
ತೀರ್ಥಕ್ಷೇತ್ರವಾಗಿಹುದಿಲ್ಲಿ
ಕಪಿಲೆಯ ಮಡಿಲು
ಹಚ್ಚಹಸಿರಾಗಿಹುದು
ಮಾತೆಯ ಒಡಲು!
ಸುತ್ತಮುತ್ತೆಲ್ಲ ಸುಕ್ಷೇತ್ರಗಳ ಲೀಲೆ
ಸುತ್ತೂರು, ದೇವನೂರು
ಸನ್ನಿಧಿಗಳ ಸಂಗಮ
ಮಲ್ಲನಮೂಲೆ
ಸಿನಿ ಕ್ಷೇತ್ರದ ದಿಗ್ಗಜರು
ಎಚ್ ಎಲ್ ಏನ್ ಸಿಂಹ,
ಜಿ. ವಿ. ಅಯ್ಯರು,
ಮರೆಯಲಾದೀತೆ ಪತ್ರಕರ್ತೆ
ಧೀರ ವನಿತೆ ತಿರುಮಲಾಂಬ
ಎಷ್ಟೊಂದು ಪ್ರಸಿದ್ಧಿ
ಗರಳಪುರಿಯ ಗರಿಗರಿ ಪುರಿ!
ಪಾಮರರೂ ಬಳಸುವ
‘ಪಂಡಿತರ’ ಹಲ್ಲು ಪುಡಿ
ಅಬ್ಬಾ ! ಎಂಥ ಹೆಸರು
ನಮ್ಮೂರ ರಸ್ತೆಗಳಿಗೆ ?!
ಒಂದು ರಾಷ್ಟ್ರಪತಿ ರಸ್ತೆ
ಮತ್ತೊಂದು ‘ರಾಷ್ಟ್ರಪಿತ’ನ ರಸ್ತೆ !
ತಲೆಯೆತ್ತಿವೆಯಿಲ್ಲಿ
ನೂರಾರು ಕೈಗಾರಿಕೆಗಳು
ಅಭಿವೃದ್ಧಿ ಮಾತಾಗಿರಲಿ
ಶಾಂತಿಯ ತೋಟದಲಿ
ನಿತ್ಯ ಅರಳುತ್ತಿವೆ
ಜನಮಾನಸದ ಹೂಗಳು!
-ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು, ಮೈಸೂರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…