ಆಂದೋಲನ 50

ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆ!

ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆಗೆ ಗಮನಾರ್ಹ ಇತಿಹಾಸ ಇ ದೆ. ೧೯೬೯ರಿಂ ದ ೧೯೭೪ರವರೆಗೆ ರಾಷ್ಟ್ರಪತಿಯಾಗಿ ದ ವಿ.ವಿ.ಗಿರಿ (ವರಹಗಿರಿ ವೆಂಕಟಗಿರಿ) ಅವರು ತಮ೩/೪ ಆಡಳಿತಾವ ಣಿಯ ಕೊನೆಯ ದಿನಗಳಲ್ಲಿ ನಂಜನಗೂಡಿಗೆ ಭೇಟಿ ನೀಡಿದರು. ಅದರ ನೆನಪಿನಾರ್ಥ ಈ ರಸ್ತೆಗೆ ರಾಷ್ಟ್ರಪತಿ ಎಂದು ಸೇರಿಸಿ ನಾಮಕರಣ ಮಾಡಲಾಗಿದೆ.

ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಿಂದ ಅನತಿ ದೂರದಲ್ಲಿ ಅಂದರೆ ಚಾಮರಾಜನಗರ ರಸ್ತೆಯಲ್ಲಿ ಆ ಕಾಲದಲ್ಲಿ ಮಹಿಳಾ ವಿದ್ಯಾಪೀಠ ಸ್ಥಾಪನೆಯಾಗಿತ್ತು. ಅದು ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸಹಾಯದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿತ್ತು. ಅಲ್ಲಿಗೆ ಭೇಟಿ ನೀಡಿದ ರಾಷ್ಟ್ರಪತಿ ವಿ.ವಿ.ಗಿರಿ ಅವರು ವಾಪಸ್‌ ಕಾರಿನಲ್ಲಿ ಮಹಿಳಾ ವಿದ್ಯಾಪೀಠದಿಂದ ಗೋಳೂರು, ಹಳ್ಳದಕೇರಿ, ಶ್ರೀಕಂಠೇಶ್ವರ ದೇವಸ್ಥಾನ ಬಲಭಾಗದಿಂದ ಶ್ರೀ ರಾಘವೇಂದ್ರ ಮಠದ ಮಾರ್ಗದಲ್ಲಿ ಸಂಚರಿಸಿ, ಶ್ರೀ ಪ್ರಸನ್ನ ಚಿಂತಾಮಣಿ ಇಷ್ಟಾರ್ಥ ಸಿದ್ಧಿ ಗಣಪತಿ ದೇವಸ್ಥಾನದ ರಸ್ತೆ ಮೂಲಕ ಊಟಿ ರಸ್ತೆಗೆ ಸೇರಿಕೊಂಡು, ಬಲಭಾಗಕ್ಕೆ ತಿರುವು ತೆಗೆ ದುಕೊಂಡು ಮೈಸೂರು ಕಡೆಗೆ ತೆರಳಿದರು.

ರಾಷ್ಟ್ರಪತಿಯೊಬ್ಬರು ಬಂದು ಹೋದ ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ನಂಜನಗೂಡಿನಲ್ಲಿ ‘ರಾಷ್ಟ್ರಪತಿ ರಸ್ತೆ’ ಅಸ್ತಿತ್ವಕ್ಕೆ ಬಂದಿತು. ಈ ರಸ್ತೆಯಲ್ಲಿ ಈಗ ಜೆಎಸ್‌ಎಸ್‌ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದೆ. ಸಾಕಷ್ಟು ಹಳೆಯದಾದ ಪಕ್ಕಾ ಮಿಡಲ್‌ ಸ್ಕೂಲ್‌ ಮೈಸೂರು- ಚಾಮರಾಜನಗರ ರೈಲು ಮಾರ್ಗದ ಗೇಟ್‌ ನಾಗಮ್ಮ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ, ಬಾಲಕಿಯರ ಸರ್ಕಾರಿ ಪ ದವಿ ಪೂರ್ವ ಕಾಲೇಜು, ಹಲವಾರು ಅತ್ಯಾಧು ನಿಕ ವಸ್ತ್ರಗಳು, ಸಿದ್ಧಉಡುಪುಗಳು, ಪಾದರಕ್ಷೆ ಅಂಗಡಿಗಳು ತಲೆಯೆತ್ತಿವೆ. ಅಲ್ಲದೆ, ರೈಲ್ವೆಗೇಟ್‌ ಸಮೀಪ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

6 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

6 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

6 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

7 hours ago